ಕೋಲಾರ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಂಸದ ಹಾಗೂ ಶಾಸಕರ ನಡುವೆ ಮಾತಿನ ಸಮರವಾಗಿದ್ದು, ಪರಸ್ಪರ ಏಕ ವಚನದಲ್ಲಿ ನಿಂದಿಸಿಕೊಂಡಿದ್ದಾರೆ.
ಕೋಚಿಮುಲ್ನಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಸಂಸದ ಮುನಿಸ್ವಾಮಿ ಪ್ರಶ್ನಿಸಿದ್ದಾರೆ. ಅವ್ಯವಹಾರವನ್ನು ಬಹಿರಂಗ ಪಡಿಸಿ ಎಂದು ಶಾಸಕ ಕೆ.ವೈ.ನಂಜೇಗೌಡ ಆಗ್ರಹಿಸಿದ್ದಾರೆ. ಮೊದಲು ಸರಿಯಾಗಿ ಮಾತನಾಡುವುದನ್ನು ಕಲಿಯಿರಿ ಎಂದು ಶಾಸಕರಿಗೆ ಸಂಸದರು ತೀಕ್ಷ್ಣವಾಗಿ ಹೇಳಿದ್ದಾರೆ. ಈ ವೇಳೆ ಸಚಿವ ನಾಗೇಶ್ ಹಾಗು ಕೋಲಾರ ಜೆಡಿಎಸ್ ಶಾಸಕ ಕೆ.ಶ್ರೀನಿವಾಸಗೌಡ ಮಧ್ಯಪ್ರವೇಶಿಸಿ ಸಮಾಧಾನಪಡಿಸಿದ್ದಾರೆ.