ಕೋಚಿಮುಲ್​ನಲ್ಲಿ ಅವ್ಯವಹಾರ ಆರೋಪ: ಶಾಸಕರು, ಸಂಸದರ ವಾಕ್ಸಮರ

ಕೋಲಾರ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಂಸದ ಹಾಗೂ ಶಾಸಕರ ನಡುವೆ ಮಾತಿನ ಸಮರವಾಗಿದ್ದು, ಪರಸ್ಪರ ಏಕ ವಚನದಲ್ಲಿ‌ ನಿಂದಿಸಿಕೊಂಡಿದ್ದಾರೆ. ಕೋಚಿಮುಲ್​ನಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಸಂಸದ ಮುನಿಸ್ವಾಮಿ ಪ್ರಶ್ನಿಸಿದ್ದಾರೆ. ಅವ್ಯವಹಾರವನ್ನು ಬಹಿರಂಗ ಪಡಿಸಿ ಎಂದು ಶಾಸಕ ಕೆ.ವೈ.ನಂಜೇಗೌಡ ಆಗ್ರಹಿಸಿದ್ದಾರೆ. ಮೊದಲು ಸರಿಯಾಗಿ ಮಾತನಾಡುವುದನ್ನು ಕಲಿಯಿರಿ ಎಂದು ಶಾಸಕರಿಗೆ ಸಂಸದರು ತೀಕ್ಷ್ಣವಾಗಿ ಹೇಳಿದ್ದಾರೆ. ಈ ವೇಳೆ ಸಚಿವ ನಾಗೇಶ್ ಹಾಗು ಕೋಲಾರ ಜೆಡಿಎಸ್​ ಶಾಸಕ ಕೆ.ಶ್ರೀನಿವಾಸಗೌಡ ಮಧ್ಯಪ್ರವೇಶಿಸಿ ಸಮಾಧಾನಪಡಿಸಿದ್ದಾರೆ.

ಕೋಚಿಮುಲ್​ನಲ್ಲಿ ಅವ್ಯವಹಾರ ಆರೋಪ: ಶಾಸಕರು, ಸಂಸದರ ವಾಕ್ಸಮರ
ಸಾಧು ಶ್ರೀನಾಥ್​

Updated on: Dec 16, 2019 | 4:44 PM

ಕೋಲಾರ: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಂಸದ ಹಾಗೂ ಶಾಸಕರ ನಡುವೆ ಮಾತಿನ ಸಮರವಾಗಿದ್ದು, ಪರಸ್ಪರ ಏಕ ವಚನದಲ್ಲಿ‌ ನಿಂದಿಸಿಕೊಂಡಿದ್ದಾರೆ.

ಕೋಚಿಮುಲ್​ನಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂದು ಸಂಸದ ಮುನಿಸ್ವಾಮಿ ಪ್ರಶ್ನಿಸಿದ್ದಾರೆ. ಅವ್ಯವಹಾರವನ್ನು ಬಹಿರಂಗ ಪಡಿಸಿ ಎಂದು ಶಾಸಕ ಕೆ.ವೈ.ನಂಜೇಗೌಡ ಆಗ್ರಹಿಸಿದ್ದಾರೆ. ಮೊದಲು ಸರಿಯಾಗಿ ಮಾತನಾಡುವುದನ್ನು ಕಲಿಯಿರಿ ಎಂದು ಶಾಸಕರಿಗೆ ಸಂಸದರು ತೀಕ್ಷ್ಣವಾಗಿ ಹೇಳಿದ್ದಾರೆ. ಈ ವೇಳೆ ಸಚಿವ ನಾಗೇಶ್ ಹಾಗು ಕೋಲಾರ ಜೆಡಿಎಸ್​ ಶಾಸಕ ಕೆ.ಶ್ರೀನಿವಾಸಗೌಡ ಮಧ್ಯಪ್ರವೇಶಿಸಿ ಸಮಾಧಾನಪಡಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us