Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ಬೇಗ ಪರಿಹಾರ ಬಿಡುಗಡೆ ಮಾಡಬೇಕು: ಸಿಎಂ ಸಿದ್ದರಾಮಯ್ಯಗೆ ತೇಜಸ್ವಿ ಸೂರ್ಯ ಆಗ್ರಹ

ಮಾಧ್ಯಮದವರ ಮುಂದೆಯೇ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಕೊಡುತ್ತೇವೆ ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದರು. ಇದೀಗ ಅವರು ಯಾರೆಂಬುದೇ ಗೊತ್ತಿಲ್ಲವೆಂಬ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿಗಳು ಎಲ್ಲರ ಕ್ಷಮೆ ಕೇಳಬೇಕು ಎಂದು ತೇಜಸ್ವಿ ಸೂರ್ಯ ಆಗ್ರಹಿಸಿದರು.

ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ಬೇಗ ಪರಿಹಾರ ಬಿಡುಗಡೆ ಮಾಡಬೇಕು: ಸಿಎಂ ಸಿದ್ದರಾಮಯ್ಯಗೆ ತೇಜಸ್ವಿ ಸೂರ್ಯ ಆಗ್ರಹ
ತೇಜಸ್ವಿ ಸೂರ್ಯ
Follow us
ಹರೀಶ್ ಜಿ.ಆರ್​. ನವದೆಹಲಿ
| Updated By: Ganapathi Sharma

Updated on:Dec 04, 2023 | 7:35 PM

ನವದೆಹಲಿ, ಡಿಸೆಂಬರ್ 4: ಕ್ಯಾಪ್ಟನ್ ಪ್ರಾಂಜಲ್ (Capt Pranjal) ಯಾರೆಂದೇ ಗೊತ್ತಿಲ್ಲವೆಂಬ ರೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಾಧ್ಯಮಗಳ ಮುಂದೆ ಮಾತನಾಡಿದ್ದು ಬಹಳ ಬೇಸರ ತರಿಸಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಹೇಳಿದರು. ದೆಹಲಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುತಾತ್ಮ ಯೋಧ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದರು. ಈ ಬಗ್ಗೆ ವಿಚಾರಿಸಲು 2 ದಿನದ ಹಿಂದೆ ನಾನು ಪ್ರಾಂಜಲ್ ತಂದೆಗೆ ಫೋನ್ ಮಾಡಿದ್ದೆ. ಸರ್ಕಾರದ ವತಿಯಿಂದ ಯಾರಾದರೂ ಫೋನ್ ಮಾಡಿ ಮಾತನಾಡಿದರೇ ಎಂದು ಕೇಳಿದೆ. ಅವರ ತಂದೆ ‘ಇವತ್ತಿನವರೆಗೂ ಸಹ ನನಗೆ ಯಾವುದೇ ಫೋನ್ ಬಂದಿಲ್ಲ’ ಅಂತ ಹೇಳಿದರು ಎಂದರು.

ಪ್ರಾಂಜಲ್ ಕುಟುಂಬಕ್ಕೆ ಪರಿಹಾರದ ಹಣ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗೆ ಪತ್ರ ಬರೆದು ಮನವಿ ಮಾಡಿದ್ದೇನೆ ಎಂದು ಸೂರ್ಯ ಹೇಳಿದರು.

ಪರಿಹಾರದ ಹಣ ಬಿಡುಗಡೆ ವಿಚಾರವಾಗಿ ಮಾಧ್ಯಮದವರು ಮುಖ್ಯಮಂತ್ರಿಗಳ ಬಳಿ ಪ್ರಶ್ನೆ ಕೇಳಿದರೆ, ‘ಯಾರು ಪ್ರಾಂಜಲ್ ಅಂದ್ರೆ, ನಾವೆಲ್ಲಿ ಪರಿಹಾರ ಕೊಡ್ತೀವಿ ಅಂತ ಹೇಳಿದ್ವಿ’ ಎಂದು ಸಿಎಂ ಬೇಜವಾಬ್ದಾರಿಯುತವಾಗಿ ಮಾತನಾಡಿದ್ದಾರೆ. ಓರ್ವ ಯೋಧನ ಬಗ್ಗೆ ಹೀಗೆ ಮುಖ್ಯಮಂತ್ರಿಗಳು ಮಾತನಾಡಿದ್ದು ನೋಡಿ ಬಹಳ ಬೇಸರವಾಗಿದೆ ಎಂದು ತೇಜಸ್ವಿ ಸೂರ್ಯ ಹೇಳಿದರು.

ಇದನ್ನೂ ಓದಿ: ದೇಶಕ್ಕಾಗಿ ಮಣಿದ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ತಂದೆ ಹೇಳಿದ್ದೇನು ಗೊತ್ತಾ?

ಮಾಧ್ಯಮದವರ ಮುಂದೆಯೇ ಪ್ರಾಂಜಲ್ ಕುಟುಂಬಕ್ಕೆ 50 ಲಕ್ಷ ಪರಿಹಾರ ಕೊಡುತ್ತೇವೆ ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದರು. ಇದೀಗ ಅವರು ಯಾರೆಂಬುದೇ ಗೊತ್ತಿಲ್ಲವೆಂಬ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಇದರಿಂದ ಬೇರೆ ಯೋಧರಿಗೂ ಸಹ ನನ್ನ ಪರಿಸ್ಥಿತಿ ಹೀಗಾದರೆ ಎಂಬ ಯೋಚನೆ ಮೂಡಬಹುದು. ಮುಖ್ಯಮಂತ್ರಿಗಳು ಎಲ್ಲರ ಕ್ಷಮೆ ಕೇಳಬೇಕು ಎಂದು ಅವರು ಆಗ್ರಹಿಸಿದರು.

ಈ ಕೂಡಲೇ ಪರಿಹಾರದ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸುತ್ತೇನೆ. ಪ್ರಾಂಜಲ್ ಮೃತದೇಹ ಬೆಂಗಳೂರಿಗೆ ಬಂದಾಗ ಮುಖ್ಯಮಂತ್ರಿಗಳ ಕಣ್ಣಲ್ಲೂ ಸಹ ನೀರಿತ್ತು. ಅವರೂ ಸಹ ಭಾವುಕರಾಗಿದ್ದರು. ಆದರೆ, 15 ದಿನ ಆಯ್ತು, ಇನ್ನೂ ಪರಿಹಾರ ಬಿಡುಗಡೆ ಮಾಡಿಲ್ಲ. ಆದಷ್ಟು ಬೇಗ ಪರಿಹಾರ ಹಣ ಬಿಡುಗಡೆ ಮಾಡಬೇಕಾಗಿರುವುದು ಅವರ ಜವಾಬ್ದಾರಿ ಎಂದು ಸೂರ್ಯ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:35 pm, Mon, 4 December 23

ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ