AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಯದ್ದೇ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಆರೋಪ

ಬಿಜೆಪಿ ನಾಯಕರು ಧರ್ಮಸ್ಥಳ ಸಮರ ಸಾರಿದ್ದಾರೆ. ಇಂದು ಧರ್ಮಸ್ಥಳದಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಷಡ್ಯಂತ್ರಕ್ಕೆ ತಿರುಗೇಟು ಕೊಟ್ಟಿದ್ದಾರೆ. ವೇದಿಕೆಯ ಮೇಲೆ ನಾಯಕರು ಸಿಡಿಲಬ್ಬರದ ಭಾಷಣ ಮಾಡಿದ್ರೆ, ವೇದಿಕೆ ಕೆಳಗೆ ಕೇಸರಿ ಧ್ವಜ, ಶಾಲುಗಳು ರಾರಾಜಿಸಿವೆ. ಇನ್ನು ಬಿಜೆಪಿಯ ಧರ್ಮಸ್ಥಳ ಚಲೋ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸಹ ತಿರುಗೇಟು ನೀಡಿದ್ದಾರೆ. ಇದೆಲ್ಲರದ ನಡುವೆ ಧರ್ಮಸ್ಥಳ ಕೇಸ್​ ನಲ್ಲಿ ಷಡ್ಯಂತ್ರ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇದೀಗ ಆ ಷಡ್ಯಂತ್ರದ ಗುಟ್ಟು ಬಿಚ್ಚಿಟ್ಟಿದ್ದಾರೆ.

ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿಯದ್ದೇ ಷಡ್ಯಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಫೋಟಕ ಆರೋಪ
Dk Shivakumar
ರಮೇಶ್ ಬಿ. ಜವಳಗೇರಾ
|

Updated on:Sep 01, 2025 | 9:41 PM

Share

ಬೆಂಗಳೂರು, (ಸೆಪ್ಟೆಂಬರ್ 01): ಕೇಸರಿ ಕಹಳೆ, ಎಲ್ಲಿ ನೋಡಿದ್ರೂ ಕೇಸರಿ ಧ್ವಜ, ಎಲ್ಲಿ ಕಣ್ಣಾಯಿಸಿದರೂ ಕೇಸರಿ ಶಾಲುಗಳ ಹಾರಾಟ. ಹೌದು.. ಬಿಜೆಪಿ ನಾಯಕರು ನಡೆಸಿದ ಧರ್ಮಸ್ಥಳ ಸ್ಥಳ ಚಲೋ ಫುಲ್ ಕೇಸರಿಮಯವಾಗಿತ್ತು. ಇಷ್ಟು ದಿನ ಷಡ್ಯಂತ್ರ ನಡೆಯುತ್ತಿದೆ ಎನ್ನುವುತ್ತಿದ್ದ ನಾಯಕರು ಇಂದು (ಸೆಪ್ಟೆಂಬರ್ 01) ಧರ್ಮಸ್ಥಳ ಚಲೋ ನಡೆಸಿ ರಾಜ್ಯ ಸರ್ಕಾರದ ನಡೆ ವಿರುದ್ಧ ವಾಗ್ದಾಳಿ ನಡೆಸಿದರು. ಇದೆಲ್ಲದರ ನಡುವೆ ಇದೇ ಧರ್ಮಸ್ಥಳದ ಪ್ರಕರಣದಲ್ಲಿ ಷಡ್ಯಂತ್ರ ನಡೆದಿದೆ ಎಂದು ಖುದ್ದು ಡಿಸಿಎಂ ಡಿಕೆ ಶಿವುವಕುಮಾರ್ ಹೊಸ ಬಾಂಬ್ ಸಿಡಿಸಿದ್ದರು. ಈ ಬಾಂಬ್ ರಾಜ್ಯ ರಾಜಕಾರಣದಲ್ಲಿ ಭಾರೀ ಕಂಪನ ಸೃಷ್ಟಿಸಿದ್ದು, ಷಡ್ಯಂತ್ರ ಯಾರದ್ದು ಇದೆ ಎಂದು ಹೇಳಬೇಕೆಂದು ವಿಪಕ್ಷ ನಾಯಕರು ಬಿಗಿಪಟ್ಟು ಹಿಡಿದಿದ್ದರು. ಅಲ್ಲದೇ ಈ ಬಗ್ಗೆ ಅಧಿವೇಶನದಲ್ಲೂ ಆಗ್ರಹಿಸಿದ್ದರು. ಆದರೂ ಬಾಯ್ಬಿಡದ ಡಿಕೆ ಶಿವಕುಮಾರ್, ಇಂದು ಷಡ್ಯಂತ್ರದ ಗುಟ್ಟು ಬಿಚ್ಚಿಟ್ಟಿದ್ದು, ಧರ್ಮಸ್ಥಳ ಪ್ರಕಣದಲ್ಲಿ ಬಿಜೆಪಿ ಮೂಲ ಕಾರ್ಯಕರ್ತರೇ ಷಡ್ಯಂತ್ರ ಮಾಡಿರುವುದು ಎಂದು ಗಂಭೀರ ಆರೋಪ ಮಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ಪ್ರಸ್ತುತ ಎಸ್‌ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ, ಈಗ ನಾಟಕ ಮಾಡುತ್ತಿರುವವರು ಅವರೇ . ಎನ್‌ಐಎ ತನಿಖೆಗೆ ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಕೇಳಿದಾಗ ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕು ಎಂದು ಬಿಜೆಪಿಯವರು ಎಂದೂ ಬಾಯಿ ಬಿಚ್ಚಲಿಲ್ಲ. ಬಿಜೆಪಿಯ ಮೂಲ ಕಾರ್ಯಕರ್ತರೇ ಧರ್ಮಸ್ಥಳದ ಮೇಲೆ ಕೆಟ್ಟ ಹೆಸರು ತರಬೇಕು ಎಂದು ಮಾಡಿರುವ ಕೆಲಸವಿದು ಎಂದು ನೇರವಾಗಿ ಆರೋಪಿಸಿದ್ದಾರೆ.

ಇದನ್ನೂ ಓದಿ:  ಇದು ಖಾಲಿ ಟ್ರಂಕ್, ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ ಎಂದ ಡಿಕೆ ಶಿವಕುಮಾರ್

ಇದರೊಂದಿಗೆ ಅತ್ತ ಧರ್ಮಸ್ಥಳದಲ್ಲಿ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಅಬ್ಬರಿಸಿದ್ರೆ ಇತ್ತ ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿಯಲ್ಲೇ 2 ಬಣಗಳಾಗಿವೆ, ಅವರದ್ದೇ ಷಡ್ಯಂತ್ರ . ಬಿಜೆಪಿ ಮೂಲ ಕಾರ್ಯಕರ್ತರೇ ಷಡ್ಯಂತ್ರ ಮಾಡಿರುವುದು ಎಂದು ಡಿ ಸ್ಫೋಟಕ ಆರೋಪ ಮಾಡಿದರು. ಈ ಮೂಲಕ ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ನಡೆದಿದೆ ಎಂದು ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾಗಿನಿಂದ ಈ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಡಿಕೆಶಿ ಹೇಳಿದಂತೆ ಇದರಲ್ಲಿ ಯಾರದ್ದು ಷಡ್ಯಂತ್ರ ಇರಬಹುದು ಎಂದು ನಿಗೂಢ ರಹಸ್ಯವಾಗಿತ್ತು. ಆದ್ರೆ, ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿಯವರದ್ದೇ ಷಡ್ಯಂತ್ರ ಎಂದು ಆರೋಪಿಸಿದ್ದು, ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿಸಿದ್ದಾರೆ.

ಅಂದು ಡಿಕೆಶಿ ಹೇಳಿದ್ದೇನು?

ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಇದನ್ನು ಯಾರು ಮಾಡಿದ್ದಾರೆ ಎಂದು ನಾನು ಹೇಳುವುದಿಲ್ಲ. ಧರ್ಮಸ್ಥಳದ ಆಡಳಿತ ಮಂಡಳಿ ಮೇಲೆ ಕಪ್ಪು ಚುಕ್ಕೆ ತರಲು ಅತ್ಯಂತ ವ್ಯವಸ್ಥಿತವಾಗಿ ಷಡ್ಯಂತ್ರ ರೂಪಿಸಲಾಗಿದೆ. ನಾನು ಧರ್ಮಸ್ಥಳ ಕ್ಷೇತ್ರ ಹಾಗೂ ಆ ದೇವಸ್ಥಾನದ ಮೇಲೆ ನಂಬಿಕೆ ಇರುವವನು. ನನಗೆ ಧರ್ಮಾಧಿಕಾರಿಗಳ ಮೇಲೂ ನಂಬಿಕೆ ಇದೆ. ಅವರ ಆಚಾರ ವಿಚಾರಗಳ ಬಗ್ಗೆ ಅರಿವಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದರು.

ಈ ಸಂಬಂಧ ವಿರೋಧ ಪಕ್ಷದ ನಾಯಕರು ಈ ಬಗ್ಗೆ ಉತ್ತರಿಸುವಂತೆ ಪಟ್ಟು ಹಿಡಿದಿದ್ದರು. ಷಡ್ಯಂತ್ರ ಅಂದ್ರೆ ಯಾರದ್ದು? ಏನು? ಎನ್ನುವ ಬಗ್ಗೆ ಡಿಕೆ ಶಿವಕುಮಾರ್ ಅವರು ಉತ್ತರಿಸಬೇಕೆಂದು ಅಧಿವೇಶನದಲ್ಲೂ ಆಗ್ರಹಿಸಿದ್ದರು. ಹೀಗಾಗಿ ಡಿಕೆಶಿ ಅವರ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿತ್ತು.

Published On - 9:40 pm, Mon, 1 September 25

Follow Us
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ