ಶಾಂಗ್ರಿಲಾ ಹೋಟೆಲ್‌ನಲ್ಲಿ ATM ಸರ್ಕಾರದ ಗೌಪ್ಯ ಸಭೆಯ ರಹಸ್ಯವೇನು? ಫೋಟೋ ಸಮೇತ ಪ್ರಶ್ನಿಸಿದ ಬಿಜೆಪಿ

ಬಿಬಿಎಂಪಿ ಚುನಾವಣೆ ಸಂಬಂಧ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ನಡೆಸಿರುವ ಬಗ್ಗೆ ಬಿಜೆಪಿ ಪ್ರಶ್ನಿಸಿದೆ.

ಶಾಂಗ್ರಿಲಾ ಹೋಟೆಲ್‌ನಲ್ಲಿ ATM ಸರ್ಕಾರದ ಗೌಪ್ಯ ಸಭೆಯ ರಹಸ್ಯವೇನು? ಫೋಟೋ ಸಮೇತ ಪ್ರಶ್ನಿಸಿದ ಬಿಜೆಪಿ
Follow us
|

Updated on: Jun 13, 2023 | 6:17 PM

ಬೆಂಗಳೂರು: ಈಗಾಗಲೇ ಲೋಕಸಭಾ ಚುನಾವಣೆಯಲ್ಲಿ(Lokasabha Elections 2024) 20 ಸ್ಥಾನಗಳನ್ನ ಗೆಲ್ಲುವ ಗುರಿ ಹೊಂದಿರುವ ಕಾಂಗ್ರೆಸ್‌ (Congress) ಹಲವು ತಂತ್ರಗಾರಿಕೆಯ ಜೊತೆಗೆ ಸಚಿವರ ಹೆಗಲಿಗೆ ಲೋಕಸಭಾ ಚುನಾವಣಾ ಜವಾಬ್ಧಾರಿಯನ್ನ ನೀಡಿದೆ. ಅದಕ್ಕೂ ಮುನ್ನವೇ ಬಿಬಿಎಂಪಿ ಚುನಾವಣೆಯನ್ನ(BBMP Elections) ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಈ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೀವಾಲಾ ನೇತೃತ್ವದಲ್ಲಿ ಚುನಾವಣಾ ಪೂರ್ವ ಸಿದ್ದತೆಗಳ ಕುರಿತಾಗಿ ಚರ್ಚೆ ನಡೆಯಿತು. ಇನ್ನು ಈ ಸಭೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಸಹ ಪಾಲ್ಗೊಂಡಿರುವುದಕ್ಕೆ ಬಿಜೆಪಿ(BJP) ಕೆಂಡಾಮಂಡಲವಾಗಿದೆ.

ಹೌದು.. ಬಿಬಿಎಂಪಿ ಚುನಾವಣೆ ತಯಾರಿ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ಜೊತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಉಪಸ್ಥಿತಿಗೆ ಬಿಜೆಪಿ ಕಿಡಿಕಾರಿದೆ. ಟ್ವೀಟ್​ ಮೂಲಕ ಕಾಂಗ್ರೆಸ್​ ವಿರುದ್ಧ ಆಕ್ರೋಶ ವ್ಯಕ್ತಿಪಡಿಸಿರುವ ಬಿಜೆಪಿ, ಶಾಂಗ್ರಿಲಾ ಹೋಟೆಲ್‌ನಲ್ಲಿ ATM ಸರ್ಕಾರದ ಗೌಪ್ಯ ಸಭೆಯ ರಹಸ್ಯವೇನು? ಸರ್ಕಾರದೊಟ್ಟಿಗಾಗಲಿ, BBMP ಒಟ್ಟಿಗಾಗಲಿ ಸುರ್ಜೇವಾಲಗೆ ಸಂಬಂಧವಿಲ್ಲ. ರಣದೀಪ್​​ ಸುರ್ಜೇವಾಲಗೆ ಬಿಬಿಎಂಪಿ ಉನ್ನತ ಅಧಿಕಾರಿಗಳೊಟ್ಟಿಗೇನು ಕೆಲಸ? ಎಂದು ಪ್ರಶ್ನಿಸಿದೆ.

ಯಾವುದೇ ಅಧಿಕೃತ ಸಂಬಂಧವಿಲ್ಲದ ಸುರ್ಜೇವಾಲರಿಗೆ ಏನು ಕೆಲಸ? ಇದು 85% ಡೀಲ್‌ ಫಿಕ್ಸಿಂಗ್ ಸಭೆಯೇ ಎಂದು ರಾಜ್ಯ ಬಿಜೆಪಿ ಟಾಂಗ್​​ ನೀಡಿದ್ದು, ಈ ಬಗ್ಗೆ ಉತ್ತರಿಸಿ ಮಾನ್ಯ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರವರೇ ಎಂದು ಬಿಜೆಪಿ ಟ್ವೀಟ್ ಮೂಲಕ ಆಗ್ರಹಿಸಿದೆ.

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ