AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯಿಂದ ಮಹಾರಾಷ್ಟ್ರಕ್ಕೆ ಕಂಟೈನರ್​ನಲ್ಲಿ ಹಣ ಬಂದಿದೆ: ಬಿಕೆ ಹರಿಪ್ರಸಾದ್ ಆರೋಪ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಅಕ್ರಮ ಹಣಕಾಸು ಬಗ್ಗೆ ಕಾಂಗ್ರೆಸ್ ಎಂಎಲ್​ಸಿ ಹರಿಪ್ರಸಾದ್ ಆರೋಪ ಮಾಡಿದ್ದಾರೆ. ಕಂಟೇನರ್​ಗಳಲ್ಲಿ ಹಣ ಬಂದಿದ್ದು, ತೂಕದ ಮೂಲಕ ಖರ್ಚು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಕರ್ನಾಟಕದ ಉಪಚುನಾವಣೆ ಗೆಲುವಿನ ಬಗ್ಗೆಯೂ ಮಾತನಾಡಿದ್ದು, ಚುನಾವಣಾ ಆಯೋಗ ಬಿಜೆಪಿಯ ಅಂಗವಾಗಿ ಬಿಟ್ಟಿದೆ ಎಂದಿದ್ದಾರೆ.

ಬಿಜೆಪಿಯಿಂದ ಮಹಾರಾಷ್ಟ್ರಕ್ಕೆ ಕಂಟೈನರ್​ನಲ್ಲಿ ಹಣ ಬಂದಿದೆ: ಬಿಕೆ ಹರಿಪ್ರಸಾದ್ ಆರೋಪ
ಬಿಜೆಪಿಯಿಂದ ಮಹಾರಾಷ್ಟ್ರಕ್ಕೆ ಕಂಟೈನರ್​ನಲ್ಲಿ ಹಣ ಬಂದಿದೆ: ಬಿಕೆ ಹರಿಪ್ರಸಾದ್ ಆರೋಪ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Nov 24, 2024 | 2:52 PM

Share

ಮಂಗಳೂರು, ನವೆಂಬರ್​ 24: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮಹಾ ವಿಕಾಸ ಅಘಾಡಿ (ಎಂವಿಎ) ಸೋಲಾಗಿದೆ. ಬಿಜೆಪಿಯಿಂದ ಮಹಾರಾಷ್ಟ್ರಕ್ಕೆ ಕಂಟೈನರ್​ನಲ್ಲಿ ಹಣ ಬಂದಿದೆ. ಹಣ ಎಣಿಸುವ ಮಷಿನ್ ಬಿಟ್ಟು ತೂಕದ ಲೆಕ್ಕದಲ್ಲಿ ಖರ್ಚು ಮಾಡಿದ್ದಾರೆ ಎಂದು ಕಾಂಗ್ರೆಸ್ ಎಂಎಲ್​ಸಿ ಹರಿಪ್ರಸಾದ್​ (BK Hariprasad) ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ತೂಕದ ಲೆಕ್ಕದಲ್ಲಿ ಹಣ ಖರ್ಚು ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ಆರೋಪಿಸಿದ್ದಾರೆ.

ಕರ್ನಾಟಕದಲ್ಲಿ ಹಣ, ಹೆಂಡ ನೀಡಿದ್ದಾಗಿ ಒಪ್ಪಿಕೊಂಡ ಹರಿಪ್ರಸಾದ್

ರಾಜ್ಯದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ಇತಿಹಾಸ ಸೃಷ್ಟಿಸಿದೆ. ಕರ್ನಾಟಕದಲ್ಲಿ ಎಲ್ಲೂ ಸಹ ಕೋಮು ಸೌಹಾರ್ದ ಕದಡಲು ಅವಕಾಶ ನೀಡಿಲ್ಲ. ರಾಜ್ಯದಲ್ಲಿ ಬೇರೆ ಪಕ್ಷಗಳು ಭಾರಿ ಹಣದ ಹೊಳೆ ಹರಿಸಿತ್ತು. ನಾವು ಕೂಡ ಅವರಿಗಿಂತ ಹೆಚ್ಚು ಪೈಪೋಟಿ ನೀಡಿದ್ದೇವೆ. ನಾವೇನು ಖಾವಿ ತೊಟ್ಟ ಸನ್ಯಾಸಿಗಳಲ್ಲ ಎಂದಿದ್ದಾರೆ.

ಇದನ್ನೂ ಓದಿ: ವಿಪಕ್ಷಗಳಿಗೆ ಸೆಡ್ಡು ಹೊಡೆಯಲು ತಂತ್ರ: ಡಿಸೆಂಬರ್ 5ರಂದು ಹಾಸನದಲ್ಲಿ ಸಿದ್ದರಾಮಯ್ಯ ಅಭಿಮಾನಿಗಳ ಸಮಾವೇಶ

ಅವರ ಹಣ, ಹೆಂಡಕ್ಕೆ ನಾವು ತಕ್ಕ ಉತ್ತರ ಕೊಟ್ಟಿದ್ದೇವೆ. ಆ ಮೂಲಕ ಕರ್ನಾಟಕದಲ್ಲಿ ಹಣ, ಹೆಂಡ ನೀಡಿದ್ದಾಗಿ ಒಪ್ಪಿಕೊಂಡರು. ನಮ್ಮ ಕೆಲಸದ ಮೂಲಕ ಕೂಡ ಉತ್ತರ ಕೊಟ್ಟಿದ್ದೇವೆ. ಬಿಜೆಪಿ ಚುನಾವಣೆಗೂ ಮೊದಲು ಸುಳ್ಳು ವದಂತಿ ಹಬ್ಬಿಸಿದ್ದರು. ಗ್ಯಾರಂಟಿ, ವಕ್ಫ್ ವಿಚಾರ ಪ್ರಸ್ತಾಪಿಸಿ ಅಪಪ್ರಚಾರ ಮಾಡಿದರು.

ಚುನಾವಣಾ ಆಯೋಗ ಬಿಜೆಪಿಯ ಅಂಗವಾಗಿ ಬಿಟ್ಟಿದೆ

ಬಿಜೆಪಿಯಲ್ಲಿ ಕಾಂಗ್ರೆಸ್​​ಗಿಂತ ಡಬಲ್​ ಕುಟುಂಬ ರಾಜಕಾರಣ ಇದೆ. ಒಂದೊಂದು ಕುಟುಂಬದಲ್ಲಿ 10 ಜ‌ನರು ರಾಜಕಾರಣದಲ್ಲಿ ಇದ್ದಾರೆ. ಕಾಂಗ್ರೆಸ್​ ಮೇಲೆ ಸುಮ್ಮನೆ ಗೂಬೆ ಕೂರಿಸುತ್ತಾರೆ. ಬಿಜೆಪಿಯವರು ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣ ನೋಡದೆ, ನಮ್ಮ ತಟ್ಟೆಯ ನೊಣ ನೋಡುತ್ತಿದ್ದಾರೆ. ನಾವು ಕೊಟ್ಟಿರುವ ಕಾರ್ಯಕ್ರಮಗಳಿಂದ ಶಿಗ್ಗಾಂವಿಯಲ್ಲಿ ಗೆದ್ದಿದ್ದೇವೆ. ನಾವು ಕಾಂಗ್ರೆಸ್​​ ಪಕ್ಷದವರು ಗೂಬೆ ಅಲ್ಲ ಅಂತ ಬಿಜೆಪಿಗೆ ಗೊತ್ತಿಲ್ಲ. ಇಡಿ, ಐಟಿ ಬಳಸಿ ಸರ್ಕಾರ ಬೀಳಿಸಲು ಬಿಜೆಪಿ ಪ್ರಯತ್ನ ಮಾಡಿದೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಚನ್ನಪಟ್ಟಣ ಫಲಿತಾಂಶ: ನಿಖಿಲ್ ಸೋಲಿನ ಬೆನ್ನಲ್ಲೇ ಜೆಡಿಎಸ್​ಗೆ ಶುರುವಾಯ್ತು ಹೊಸ ಆತಂಕ!

ಸಿಎಂ ಬದಲಾಗುತ್ತಾರೆ ಅಂತಾ ಕೆಲವರು ತಿರುಕನ ಕನಸು ಕಾಣುತ್ತಿದ್ದರು. ಅಪ್ಪನ ತೆಕ್ಕೆಯಲ್ಲಿ ಬೆಳೆದವರು ಹೇಳಿದ ಹಾಗೆ ಆಗಲ್ಲ. ಸಿಎಂ ಬದಲಾವಣೆ ಯಡಿಯೂರಪ್ಪನವರ ಸಹಿ ಮಾಡಿದ ಹಾಗೇ ಅಲ್ಲ. ಚುನಾವಣಾ ಆಯೋಗ ಬಿಜೆಪಿಯ ಅಂಗವಾಗಿ ಬಿಟ್ಟಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಇರಾನ್ ಯುದ್ಧದ ನಡುವೆ ಹಾರ್ಮುಜ್ ಜಲಸಂಧಿ ದಾಟಿದ ಎಲ್​ಪಿಜಿ ಹೊತ್ತ 2 ಹಡಗುಗಳು
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!
ಪ್ರೀತಿ ನೀಡಲು ಪ್ರಾಣಿಯೇ ಆಗಬೇಕಿಲ್ಲ, ಮನುಷ್ಯತ್ವವೊಂದಿದ್ದರೆ ಸಾಕು!
ರಿಶಿ ಸುನಾಕ್ ಹೆಂಡತಿ ಕನ್ನಡದಲ್ಲಿ ಎಷ್ಟು ಚೆನ್ನಾಗಿ ಮಾತಾಡ್ತಾರೆ ಗೊತ್ತಾ?
ರಿಶಿ ಸುನಾಕ್ ಹೆಂಡತಿ ಕನ್ನಡದಲ್ಲಿ ಎಷ್ಟು ಚೆನ್ನಾಗಿ ಮಾತಾಡ್ತಾರೆ ಗೊತ್ತಾ?
ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ಗಾಗಿ ರಾಜಧಾನಿ ಜನರ ಕ್ಯೂ!
ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ಗಾಗಿ ರಾಜಧಾನಿ ಜನರ ಕ್ಯೂ!
ಟ್ರಕ್​ನಿಂದ ಹಾರಿ ಪ್ರಾಣ ಉಳಿಸಿಕೊಂಡು, 17 ಕಿ.ಮೀ ನಡೆದ ನಾಯಿಗಳು
ಟ್ರಕ್​ನಿಂದ ಹಾರಿ ಪ್ರಾಣ ಉಳಿಸಿಕೊಂಡು, 17 ಕಿ.ಮೀ ನಡೆದ ನಾಯಿಗಳು
ತೆಲುಗಿಗೆ ಹೊರಟ ಕಿರಣ್​ ರಾಜ್, ನಮ್ರತಾ, ಭವ್ಯಾ
ತೆಲುಗಿಗೆ ಹೊರಟ ಕಿರಣ್​ ರಾಜ್, ನಮ್ರತಾ, ಭವ್ಯಾ
ಲಿಯಾರಿಯ ಬೀದಿ ಬೀದಿಗಳಲ್ಲಿ ಭಾರತೀಯ ಸೀಕ್ರೆಟ್ ಏಜೆಂಟ್​ಗಳಿಗಾಗಿ ಹುಡುಕಾಟ?
ಲಿಯಾರಿಯ ಬೀದಿ ಬೀದಿಗಳಲ್ಲಿ ಭಾರತೀಯ ಸೀಕ್ರೆಟ್ ಏಜೆಂಟ್​ಗಳಿಗಾಗಿ ಹುಡುಕಾಟ?
'ಬಂದರೋ ಬಂದರೋ ಭಾವ ಬಂದರೋ' ಎಂದು ರಿಕ್ಕಿ ರೈ ಲಾಯರ್ ಕಾಲೆಳೆದ ಪೊಲೀಸರು!
'ಬಂದರೋ ಬಂದರೋ ಭಾವ ಬಂದರೋ' ಎಂದು ರಿಕ್ಕಿ ರೈ ಲಾಯರ್ ಕಾಲೆಳೆದ ಪೊಲೀಸರು!
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಡ್ರೈವರ್ ಟ್ಯಾಲೆಂಟ್ ಮೆಚ್ಚಬೇಕೆಂದ ಲಾಯರ್!
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಡ್ರೈವರ್ ಟ್ಯಾಲೆಂಟ್ ಮೆಚ್ಚಬೇಕೆಂದ ಲಾಯರ್!
ರಘು ಜಿಮ್ ಅಲ್ಲಿ ಫಿಟ್ನೆಸ್​ ಎಕ್ಸ್​​ಪರ್ಟ್ ಆದ ರಕ್ಷಿತಾ ಶೆಟ್ಟಿ
ರಘು ಜಿಮ್ ಅಲ್ಲಿ ಫಿಟ್ನೆಸ್​ ಎಕ್ಸ್​​ಪರ್ಟ್ ಆದ ರಕ್ಷಿತಾ ಶೆಟ್ಟಿ