AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಸ್ತ್ರಗೊಳಿಸಿ ಹಲ್ಲೆ, ಕಂಡಕ್ಟರ್​ಗೆ ಟಾರ್ಚರ್: ಇವೇ ಕಾಂಗ್ರೆಸ್​ ಸರ್ಕಾರದ ಅಸಲಿ ಮಹಿಳಾ ಸಬಲೀಕರಣವೆಂದ ಬಿಜೆಪಿ

ಮಹಿಳೆಯರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡುವುದು, ಮಹಿಳೆಯರ ಮೂಗನ್ನು ಕತ್ತರಿಸುವುದು, ಮಹಿಳಾ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮಾಡುವುದು, ಮಹಿಳೆಯರಿಗೆ ಅವಾಚ್ಯ ಶಬ್ದಗಳಲ್ಲಿ ನಿಂದಿಸುವುದು, ಇವೇ ಕಾಂಗ್ರೆಸ್​ ಸರ್ಕಾರದ ಅಸಲಿ ಮಹಿಳಾ ಸಬಲೀಕರಣ ನೀತಿಗಳು. ಮೊದಲು ರಾಜ್ಯದ ಮಹಿಳೆಯರಿಗೆ ರಕ್ಷಣೆ ನೀಡುವ ಕೆಲಸ ಮಾಡಿ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.

ವಿವಸ್ತ್ರಗೊಳಿಸಿ ಹಲ್ಲೆ, ಕಂಡಕ್ಟರ್​ಗೆ ಟಾರ್ಚರ್: ಇವೇ ಕಾಂಗ್ರೆಸ್​ ಸರ್ಕಾರದ ಅಸಲಿ ಮಹಿಳಾ ಸಬಲೀಕರಣವೆಂದ ಬಿಜೆಪಿ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on:Mar 17, 2024 | 6:11 PM

ಬೆಂಗಳೂರು, ಮಾರ್ಚ್​​ 17: ಮಹಿಳೆಯರ ಸಬಲೀಕರಣಕ್ಕಾಗಿ ಜಾರಿ ಮಾಡಿರುವ ಶಕ್ತಿ ಯೋಜನೆ ಇದೀಗ ಮಹಿಳಾ ಕಂಡಕ್ಟರ್​ (conductor) ಗಳಿಗೆ ಮುಳುವಾದಂತಾಗಿದೆ. ಏಕೆಂದರೆ ಶಕ್ತಿ‌ ಯೋಜನೆಗಾಗಿ ಹಗಲು ರಾತ್ರಿ ಶ್ರಮಿಸುವ ಮಹಿಳಾ ಕಂಡಕ್ಟರ್​ಗೆ ಅಧಿಕಾರಿಗಳಿಂದ ಟಾರ್ಚರ್​​ ಆರೋಪ ಕೇಳಿಬಂದಿದೆ. ಇದಕ್ಕೆ ಸಾಕ್ಷಿವೆಂಬತೆ ಕೆಎಸ್​ಆರ್​​ಟಿಸಿ ಮಹಿಳಾ ಕಂಡಕ್ಟರ್​ ಒಬ್ಬರು ವಿಡಿಯೋ ಮಾಡಿ ಕಣ್ಣಿರಿಟ್ಟಿದ್ದಾರೆ. ಸದ್ಯ ಈ ವಿಚಾರವಾಗಿ ನಿಮಗೆ ನಿಜಕ್ಕೂ ಮಹಿಳೆಯರ ಮೇಲೆ ಕಿಂಚಿತ್ತು ಕಾಳಜಿ ಇದ್ದರೆ ಮೊದಲು ರಾಜ್ಯದ ಮಹಿಳೆಯರಿಗೆ ರಕ್ಷಣೆ ನೀಡುವ ಕೆಲಸ ಮಾಡಿ ಎಂದು ಸರ್ಕಾರಕ್ಕೆ ಬಿಜೆಪಿ ವಾಗ್ದಾಳಿ ಮಾಡಿದೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಬಿಜೆಪಿ, ಮಹಿಳೆಯರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡುವುದು, ಮಹಿಳೆಯರ ಮೂಗನ್ನು ಕತ್ತರಿಸುವುದು, ಮಹಿಳಾ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮಾಡುವುದು, ಮಹಿಳೆಯರಿಗೆ ಅವಾಚ್ಯ ಶಬ್ದಗಳಲ್ಲಿ ನಿಂದಿಸುವುದು, ಇವೇ ಕಾಂಗ್ರೆಸ್​ ಸರ್ಕಾರದ ಅಸಲಿ ಮಹಿಳಾ ಸಬಲೀಕರಣ ನೀತಿಗಳು ಎಂದು ಕಿಡಿಕಾರಿದೆ.

ಬಿಜೆಪಿ ಟ್ವೀಟ್ 

ಬಿಎಂಟಿಸಿ ಮಹಿಳಾ ಕಂಡಕ್ಟರ್‌‌ಗೆ ಅವರ ಮೇಲಧಿಕಾರಿಗಳು ಇನ್ನಿಲ್ಲದಂತೆ ನೀಡಿದ ಕಿರುಕುಳದ ಬಗ್ಗೆ ದೂರು ನೀಡಿ ನಾಲ್ಕು ದಿನಗಳಾದರೂ ಯಾವುದೇ ಕ್ರಮವಿಲ್ಲ, ಕನಿಷ್ಟ ದೂರು ನೀಡಿದ ಮಹಿಳೆಗೆ ಸಾಂತ್ವನವೂ ಹೇಳಿಲ್ಲ. ಸಿಎಂ ಸಿದ್ದರಾಮಯ್ಯ ಅವರೇ, ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರೇ, ಇದೇನಾ ನೀವು ಮಹಿಳೆಯರಿಗೆ ನೀಡಿದ “ಶಕ್ತಿ” ಎಂದು ಪ್ರಶ್ನೆ ಮಾಡಿದೆ.

ಇದನ್ನೂ ಓದಿ: KSRTC ಮಹಿಳಾ ಕಂಡಕ್ಟರ್​ಗಳಿಗೆ ಅಧಿಕಾರಿಗಳಿಂದ ಟಾರ್ಚರ್; ಕಣ್ಣೀರು ಹಾಕಿ ನೋವು ಹೇಳಿಕೊಂಡ ಸಿಬ್ಬಂದಿ

ಡಿಪೋ ಮ್ಯಾನೇಜರ್ ಎಂ.ಕೃಷ್ಣಪ್ಪ ಅವರು ಬೇಗ ಬಂದರೂ ಲೇಟ್ ಆಗಿ ಡ್ಯೂಟಿ ನೀಡುತ್ತಿದ್ದಾರೆ. ಎಷ್ಟೇ ತಡವಾದರೂ ಕೆಲಸ ಮುಗಿಸಿ ಮನೆಗೆ ಹೋಗುವಂತೆ ಟಾರ್ಚರ್ ನೀಡುತ್ತಿದ್ದಾರೆ ಅಂತ ಆರೋಪ ಮಾಡಲಾಗಿದೆ. ಡಿಪೋದ ಇತರೆ ಅಧಿಕಾರಿಗಳ ಗಮನಕ್ಕೂ ತಂದರೂ ಅವರಿಂದಲೂ ಟಾರ್ಚರ್ ಅಂತೆ. ಅಧಿಕಾರಿಗಳ ಟಾರ್ಚರ್​​ಗೆ ರೋಸಿ ಸಾರಿಗೆ ಸಚಿವರಿಗೆ ಪತ್ರ ಬರೆಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:08 pm, Sun, 17 March 24

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ