ವಿವಸ್ತ್ರಗೊಳಿಸಿ ಹಲ್ಲೆ, ಕಂಡಕ್ಟರ್​ಗೆ ಟಾರ್ಚರ್: ಇವೇ ಕಾಂಗ್ರೆಸ್​ ಸರ್ಕಾರದ ಅಸಲಿ ಮಹಿಳಾ ಸಬಲೀಕರಣವೆಂದ ಬಿಜೆಪಿ

ಮಹಿಳೆಯರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡುವುದು, ಮಹಿಳೆಯರ ಮೂಗನ್ನು ಕತ್ತರಿಸುವುದು, ಮಹಿಳಾ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮಾಡುವುದು, ಮಹಿಳೆಯರಿಗೆ ಅವಾಚ್ಯ ಶಬ್ದಗಳಲ್ಲಿ ನಿಂದಿಸುವುದು, ಇವೇ ಕಾಂಗ್ರೆಸ್​ ಸರ್ಕಾರದ ಅಸಲಿ ಮಹಿಳಾ ಸಬಲೀಕರಣ ನೀತಿಗಳು. ಮೊದಲು ರಾಜ್ಯದ ಮಹಿಳೆಯರಿಗೆ ರಕ್ಷಣೆ ನೀಡುವ ಕೆಲಸ ಮಾಡಿ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ.

ವಿವಸ್ತ್ರಗೊಳಿಸಿ ಹಲ್ಲೆ, ಕಂಡಕ್ಟರ್​ಗೆ ಟಾರ್ಚರ್: ಇವೇ ಕಾಂಗ್ರೆಸ್​ ಸರ್ಕಾರದ ಅಸಲಿ ಮಹಿಳಾ ಸಬಲೀಕರಣವೆಂದ ಬಿಜೆಪಿ
ಪ್ರಾತಿನಿಧಿಕ ಚಿತ್ರ
Follow us
|

Updated on:Mar 17, 2024 | 6:11 PM

ಬೆಂಗಳೂರು, ಮಾರ್ಚ್​​ 17: ಮಹಿಳೆಯರ ಸಬಲೀಕರಣಕ್ಕಾಗಿ ಜಾರಿ ಮಾಡಿರುವ ಶಕ್ತಿ ಯೋಜನೆ ಇದೀಗ ಮಹಿಳಾ ಕಂಡಕ್ಟರ್​ (conductor) ಗಳಿಗೆ ಮುಳುವಾದಂತಾಗಿದೆ. ಏಕೆಂದರೆ ಶಕ್ತಿ‌ ಯೋಜನೆಗಾಗಿ ಹಗಲು ರಾತ್ರಿ ಶ್ರಮಿಸುವ ಮಹಿಳಾ ಕಂಡಕ್ಟರ್​ಗೆ ಅಧಿಕಾರಿಗಳಿಂದ ಟಾರ್ಚರ್​​ ಆರೋಪ ಕೇಳಿಬಂದಿದೆ. ಇದಕ್ಕೆ ಸಾಕ್ಷಿವೆಂಬತೆ ಕೆಎಸ್​ಆರ್​​ಟಿಸಿ ಮಹಿಳಾ ಕಂಡಕ್ಟರ್​ ಒಬ್ಬರು ವಿಡಿಯೋ ಮಾಡಿ ಕಣ್ಣಿರಿಟ್ಟಿದ್ದಾರೆ. ಸದ್ಯ ಈ ವಿಚಾರವಾಗಿ ನಿಮಗೆ ನಿಜಕ್ಕೂ ಮಹಿಳೆಯರ ಮೇಲೆ ಕಿಂಚಿತ್ತು ಕಾಳಜಿ ಇದ್ದರೆ ಮೊದಲು ರಾಜ್ಯದ ಮಹಿಳೆಯರಿಗೆ ರಕ್ಷಣೆ ನೀಡುವ ಕೆಲಸ ಮಾಡಿ ಎಂದು ಸರ್ಕಾರಕ್ಕೆ ಬಿಜೆಪಿ ವಾಗ್ದಾಳಿ ಮಾಡಿದೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಬಿಜೆಪಿ, ಮಹಿಳೆಯರನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡುವುದು, ಮಹಿಳೆಯರ ಮೂಗನ್ನು ಕತ್ತರಿಸುವುದು, ಮಹಿಳಾ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮಾಡುವುದು, ಮಹಿಳೆಯರಿಗೆ ಅವಾಚ್ಯ ಶಬ್ದಗಳಲ್ಲಿ ನಿಂದಿಸುವುದು, ಇವೇ ಕಾಂಗ್ರೆಸ್​ ಸರ್ಕಾರದ ಅಸಲಿ ಮಹಿಳಾ ಸಬಲೀಕರಣ ನೀತಿಗಳು ಎಂದು ಕಿಡಿಕಾರಿದೆ.

ಬಿಜೆಪಿ ಟ್ವೀಟ್ 

ಬಿಎಂಟಿಸಿ ಮಹಿಳಾ ಕಂಡಕ್ಟರ್‌‌ಗೆ ಅವರ ಮೇಲಧಿಕಾರಿಗಳು ಇನ್ನಿಲ್ಲದಂತೆ ನೀಡಿದ ಕಿರುಕುಳದ ಬಗ್ಗೆ ದೂರು ನೀಡಿ ನಾಲ್ಕು ದಿನಗಳಾದರೂ ಯಾವುದೇ ಕ್ರಮವಿಲ್ಲ, ಕನಿಷ್ಟ ದೂರು ನೀಡಿದ ಮಹಿಳೆಗೆ ಸಾಂತ್ವನವೂ ಹೇಳಿಲ್ಲ. ಸಿಎಂ ಸಿದ್ದರಾಮಯ್ಯ ಅವರೇ, ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರೇ, ಇದೇನಾ ನೀವು ಮಹಿಳೆಯರಿಗೆ ನೀಡಿದ “ಶಕ್ತಿ” ಎಂದು ಪ್ರಶ್ನೆ ಮಾಡಿದೆ.

ಇದನ್ನೂ ಓದಿ: KSRTC ಮಹಿಳಾ ಕಂಡಕ್ಟರ್​ಗಳಿಗೆ ಅಧಿಕಾರಿಗಳಿಂದ ಟಾರ್ಚರ್; ಕಣ್ಣೀರು ಹಾಕಿ ನೋವು ಹೇಳಿಕೊಂಡ ಸಿಬ್ಬಂದಿ

ಡಿಪೋ ಮ್ಯಾನೇಜರ್ ಎಂ.ಕೃಷ್ಣಪ್ಪ ಅವರು ಬೇಗ ಬಂದರೂ ಲೇಟ್ ಆಗಿ ಡ್ಯೂಟಿ ನೀಡುತ್ತಿದ್ದಾರೆ. ಎಷ್ಟೇ ತಡವಾದರೂ ಕೆಲಸ ಮುಗಿಸಿ ಮನೆಗೆ ಹೋಗುವಂತೆ ಟಾರ್ಚರ್ ನೀಡುತ್ತಿದ್ದಾರೆ ಅಂತ ಆರೋಪ ಮಾಡಲಾಗಿದೆ. ಡಿಪೋದ ಇತರೆ ಅಧಿಕಾರಿಗಳ ಗಮನಕ್ಕೂ ತಂದರೂ ಅವರಿಂದಲೂ ಟಾರ್ಚರ್ ಅಂತೆ. ಅಧಿಕಾರಿಗಳ ಟಾರ್ಚರ್​​ಗೆ ರೋಸಿ ಸಾರಿಗೆ ಸಚಿವರಿಗೆ ಪತ್ರ ಬರೆಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:08 pm, Sun, 17 March 24

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ