Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಸಭೆ ಬಿಜೆಪಿ ಕಚೇರಿಗೆ ಸ್ಥಳಾಂತರ; ಭೇಟಿಗೆ ತುದಿಗಾಲಲ್ಲಿ ನಿಂತಿರುವ ಹಲವು ಶಾಸಕರು

ಈ ಮಧ್ಯೆ ಅರುಣ್ ಸಿಂಗ್​ ಭೇಟಿಗೆ ಡಿಸಿಎಂಗಳಾದ ಡಾ. ಅಶ್ವತ್ಥ್ ನಾರಾಯಣ, ಲಕ್ಷ್ಮಣ ಸವದಿ, ಸಚಿವರಾದ ಮುರುಗೇಶ್​ ನಿರಾಣಿ, ಉಮೇಶ್​ ಕತ್ತಿ, ಶಶಿಕಲಾ ಜೊಲ್ಲೆ, ಬಿ.ಶ್ರೀರಾಮುಲು, ಎಂಟಿಬಿ ನಾಗರಾಜ್​, ಎಂಟಿಬಿ ನಾಗರಾಜ್, ಗೋಪಾಲಯ್ಯ, ಸಿ.ಪಿ.ಯೋಗೇಶ್ವರ್ ಸೇರಿ ಹಲವರು ಕಾಯುತ್ತಿದ್ದಾರೆ.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಸಭೆ ಬಿಜೆಪಿ ಕಚೇರಿಗೆ ಸ್ಥಳಾಂತರ; ಭೇಟಿಗೆ ತುದಿಗಾಲಲ್ಲಿ ನಿಂತಿರುವ ಹಲವು ಶಾಸಕರು
ಅರುಣ್​ ಸಿಂಗ್​
Follow us
TV9 Web
| Updated By: Lakshmi Hegde

Updated on: Jun 17, 2021 | 10:40 AM

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯದ್ದೇ ಬಿಸಿಬಿಸಿ ಚರ್ಚೆ. ಅದರಲ್ಲೂ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ರವರು ನಿನ್ನೆ ಇಲ್ಲಿಗೆ ಆಗಮಿಸಿದ ಮೇಲಂತೂ ಬಿಜೆಪಿ ರಾಜಕೀಯ ವಲಯದಲ್ಲಿ ಬಿರುಸಿನ ಕಾರ್ಯಚಟುವಟಿಕೆ ಶುರುವಾಗಿದೆ. ಇವತ್ತಂತೂ ಅನೇಕ ಶಾಸಕರು ಅರುಣ್​ ಸಿಂಗ್​​ರನ್ನು ಭೇಟಿ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ ಇಂದಿನ ಸಭೆಯನ್ನು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ವರ್ಗಾಯಿಸಿದ್ದಾರೆ. ಇಂದು ಕುಮಾರಕೃಪಾ ಗೆಸ್ಟ್​​ಹೌಸ್​​​ನಲ್ಲಿ ಸಭೆ ನಡೆಯುವುದಿತ್ತು. ಆದರೆ ಕೊನೇ ಕ್ಷಣದಲ್ಲಿ ಅರುಣ್​ ಸಿಂಗ್​ ಅದನ್ನು ಬಿಜೆಪಿ ಕಚೇರಿಗೆ ಸ್ಥಳಾಂತರಿಸಿದ್ದಾರೆ.

ನನ್ನನ್ನು ಭೇಟಿ ಮಾಡಲು ಬರುವವರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರೂ ಸಿಗಲಿ. ಬಿಜೆಪಿ ಕಚೇರಿಯಲ್ಲಿ ಸಭೆ ಮಾಡಿದರೆ ನಮ್ಮಿಬ್ಬರನ್ನೂ ಭೇಟಿಯಾಗಬಹುದಾಗಿದೆ ಎಂದು ಅರುಣ್​ ಸಿಂಗ್ ಹೇಳಿದ್ದಾರೆ ಎನ್ನಲಾಗಿದೆ. ಇಂದು ಬಿಜೆಪಿಯ ಸಂಸದರು, ಶಾಸಕರು, ಪರಿಷತ್​ ಸದಸ್ಯರ ಜತೆ ಅರುಣ್​ ಸಿಂಗ್​ ಸಭೆ ನಡೆಸಲಿದ್ದಾರೆ.

ಈ ಮಧ್ಯೆ ಅರುಣ್ ಸಿಂಗ್​ ಭೇಟಿಗೆ ಡಿಸಿಎಂಗಳಾದ ಡಾ. ಅಶ್ವತ್ಥ್ ನಾರಾಯಣ, ಲಕ್ಷ್ಮಣ ಸವದಿ, ಸಚಿವರಾದ ಮುರುಗೇಶ್​ ನಿರಾಣಿ, ಉಮೇಶ್​ ಕತ್ತಿ, ಶಶಿಕಲಾ ಜೊಲ್ಲೆ, ಬಿ.ಶ್ರೀರಾಮುಲು, ಎಂಟಿಬಿ ನಾಗರಾಜ್​, ಎಂಟಿಬಿ ನಾಗರಾಜ್, ಗೋಪಾಲಯ್ಯ, ಸಿ.ಪಿ.ಯೋಗೇಶ್ವರ್ ಸೇರಿ ಹಲವರು ಕಾಯುತ್ತಿದ್ದಾರೆ. ಇನ್ನು ಕೊವಿಡ್​ ಸೆಂಟರ್​​ನಲ್ಲಿದ್ದ ರೇಣುಕಾಚಾರ್ಯ ಈಗಾಗಲೇ ಬೆಂಗಳೂರಿಗೆ ಬಂದಿದ್ದು, ಅರುಣ್​ ಸಿಂಗ್​ ಭೇಟಿಗೆ ಕಾಯುತ್ತಿದ್ದಾರೆ. ಇನ್ನು ಪಕ್ಷದ ವಿರುದ್ಧ ಈಗಾಗಲೇ ಅಸಮಾಧಾನಗೊಂಡಿರುವ ಬಸನಗೌಡ ಪಾಟೀಲ್​ ಯತ್ನಾಳ್​, ಅರವಿಂದ್ ಬೆಲ್ಲದ್​ ವಿರುದ್ಧ ಅರುಣ್​ ಸಿಂಗ್​ಗೆ ದೂರು ನೀಡಲೂ ಕೆಲವು ಶಾಸಕರು ಕಾಯುತ್ತಿದ್ದಾರೆಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಜುಲೈ ತಿಂಗಳ 3ನೇ ವಾರದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ, ಹೇಗಿದೆ ಗೊತ್ತಾ ಶಿಕ್ಷಣ ಇಲಾಖೆ ತಯಾರಿ

ಹತ್ತು ದಿನಗಳಿಂದ ಅರಬಗಟ್ಟ ಕೊವಿಡ್ ಕೇರ್ ಸೆಂಟರ್​ನಲ್ಲಿ ಇದ್ದ ರೇಣುಕಾಚಾರ್ಯ ಬೆಂಗಳೂರಿಗೆ ದೌಡು

ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಮಧ್ಯಪ್ರದೇಶದ ಆನಂದಪುರ ಧಾಮದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಗಂಭೀರವಾಗಿ ಗಾಯಗೊಂಡಿರುವ ಪತಿ ಕಲಬುರಗಿ ಜಿಲ್ಲಾಸ್ಪತ್ರೆಗೆ ದಾಖಲು
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ