AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಸಭೆ ಬಿಜೆಪಿ ಕಚೇರಿಗೆ ಸ್ಥಳಾಂತರ; ಭೇಟಿಗೆ ತುದಿಗಾಲಲ್ಲಿ ನಿಂತಿರುವ ಹಲವು ಶಾಸಕರು

ಈ ಮಧ್ಯೆ ಅರುಣ್ ಸಿಂಗ್​ ಭೇಟಿಗೆ ಡಿಸಿಎಂಗಳಾದ ಡಾ. ಅಶ್ವತ್ಥ್ ನಾರಾಯಣ, ಲಕ್ಷ್ಮಣ ಸವದಿ, ಸಚಿವರಾದ ಮುರುಗೇಶ್​ ನಿರಾಣಿ, ಉಮೇಶ್​ ಕತ್ತಿ, ಶಶಿಕಲಾ ಜೊಲ್ಲೆ, ಬಿ.ಶ್ರೀರಾಮುಲು, ಎಂಟಿಬಿ ನಾಗರಾಜ್​, ಎಂಟಿಬಿ ನಾಗರಾಜ್, ಗೋಪಾಲಯ್ಯ, ಸಿ.ಪಿ.ಯೋಗೇಶ್ವರ್ ಸೇರಿ ಹಲವರು ಕಾಯುತ್ತಿದ್ದಾರೆ.

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಸಭೆ ಬಿಜೆಪಿ ಕಚೇರಿಗೆ ಸ್ಥಳಾಂತರ; ಭೇಟಿಗೆ ತುದಿಗಾಲಲ್ಲಿ ನಿಂತಿರುವ ಹಲವು ಶಾಸಕರು
ಅರುಣ್​ ಸಿಂಗ್​
TV9 Web
| Edited By: |

Updated on: Jun 17, 2021 | 10:40 AM

Share

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯದ್ದೇ ಬಿಸಿಬಿಸಿ ಚರ್ಚೆ. ಅದರಲ್ಲೂ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ರವರು ನಿನ್ನೆ ಇಲ್ಲಿಗೆ ಆಗಮಿಸಿದ ಮೇಲಂತೂ ಬಿಜೆಪಿ ರಾಜಕೀಯ ವಲಯದಲ್ಲಿ ಬಿರುಸಿನ ಕಾರ್ಯಚಟುವಟಿಕೆ ಶುರುವಾಗಿದೆ. ಇವತ್ತಂತೂ ಅನೇಕ ಶಾಸಕರು ಅರುಣ್​ ಸಿಂಗ್​​ರನ್ನು ಭೇಟಿ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಈ ಮಧ್ಯೆ ಇಂದಿನ ಸಭೆಯನ್ನು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ವರ್ಗಾಯಿಸಿದ್ದಾರೆ. ಇಂದು ಕುಮಾರಕೃಪಾ ಗೆಸ್ಟ್​​ಹೌಸ್​​​ನಲ್ಲಿ ಸಭೆ ನಡೆಯುವುದಿತ್ತು. ಆದರೆ ಕೊನೇ ಕ್ಷಣದಲ್ಲಿ ಅರುಣ್​ ಸಿಂಗ್​ ಅದನ್ನು ಬಿಜೆಪಿ ಕಚೇರಿಗೆ ಸ್ಥಳಾಂತರಿಸಿದ್ದಾರೆ.

ನನ್ನನ್ನು ಭೇಟಿ ಮಾಡಲು ಬರುವವರಿಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರೂ ಸಿಗಲಿ. ಬಿಜೆಪಿ ಕಚೇರಿಯಲ್ಲಿ ಸಭೆ ಮಾಡಿದರೆ ನಮ್ಮಿಬ್ಬರನ್ನೂ ಭೇಟಿಯಾಗಬಹುದಾಗಿದೆ ಎಂದು ಅರುಣ್​ ಸಿಂಗ್ ಹೇಳಿದ್ದಾರೆ ಎನ್ನಲಾಗಿದೆ. ಇಂದು ಬಿಜೆಪಿಯ ಸಂಸದರು, ಶಾಸಕರು, ಪರಿಷತ್​ ಸದಸ್ಯರ ಜತೆ ಅರುಣ್​ ಸಿಂಗ್​ ಸಭೆ ನಡೆಸಲಿದ್ದಾರೆ.

ಈ ಮಧ್ಯೆ ಅರುಣ್ ಸಿಂಗ್​ ಭೇಟಿಗೆ ಡಿಸಿಎಂಗಳಾದ ಡಾ. ಅಶ್ವತ್ಥ್ ನಾರಾಯಣ, ಲಕ್ಷ್ಮಣ ಸವದಿ, ಸಚಿವರಾದ ಮುರುಗೇಶ್​ ನಿರಾಣಿ, ಉಮೇಶ್​ ಕತ್ತಿ, ಶಶಿಕಲಾ ಜೊಲ್ಲೆ, ಬಿ.ಶ್ರೀರಾಮುಲು, ಎಂಟಿಬಿ ನಾಗರಾಜ್​, ಎಂಟಿಬಿ ನಾಗರಾಜ್, ಗೋಪಾಲಯ್ಯ, ಸಿ.ಪಿ.ಯೋಗೇಶ್ವರ್ ಸೇರಿ ಹಲವರು ಕಾಯುತ್ತಿದ್ದಾರೆ. ಇನ್ನು ಕೊವಿಡ್​ ಸೆಂಟರ್​​ನಲ್ಲಿದ್ದ ರೇಣುಕಾಚಾರ್ಯ ಈಗಾಗಲೇ ಬೆಂಗಳೂರಿಗೆ ಬಂದಿದ್ದು, ಅರುಣ್​ ಸಿಂಗ್​ ಭೇಟಿಗೆ ಕಾಯುತ್ತಿದ್ದಾರೆ. ಇನ್ನು ಪಕ್ಷದ ವಿರುದ್ಧ ಈಗಾಗಲೇ ಅಸಮಾಧಾನಗೊಂಡಿರುವ ಬಸನಗೌಡ ಪಾಟೀಲ್​ ಯತ್ನಾಳ್​, ಅರವಿಂದ್ ಬೆಲ್ಲದ್​ ವಿರುದ್ಧ ಅರುಣ್​ ಸಿಂಗ್​ಗೆ ದೂರು ನೀಡಲೂ ಕೆಲವು ಶಾಸಕರು ಕಾಯುತ್ತಿದ್ದಾರೆಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಜುಲೈ ತಿಂಗಳ 3ನೇ ವಾರದಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ, ಹೇಗಿದೆ ಗೊತ್ತಾ ಶಿಕ್ಷಣ ಇಲಾಖೆ ತಯಾರಿ

ಹತ್ತು ದಿನಗಳಿಂದ ಅರಬಗಟ್ಟ ಕೊವಿಡ್ ಕೇರ್ ಸೆಂಟರ್​ನಲ್ಲಿ ಇದ್ದ ರೇಣುಕಾಚಾರ್ಯ ಬೆಂಗಳೂರಿಗೆ ದೌಡು

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ