AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿನಿ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ; ಬೆಂಗಳೂರಿನಲ್ಲಿ ಅಶೋಕ್ ಸೇರಿ ಬಿಜೆಪಿ ಶಾಸಕರೇ ಗೈರು!

ಕೆಎಂಎಫ್​ನ ನಂದಿನಿ ಹಾಲಿನ ದರ ಹೆಚ್ಚಳ ಖಂಡಿಸಿ ಪ್ರತಿಪಕ್ಷ ಬಿಜೆಪಿ ಇಂದು ಕರ್ನಾಟಕದಾದ್ಯಂತ ಪ್ರತಿಭಟನೆ ನಡೆಸಿದೆ. ಹಲವು ಕಡೆಗಳಲ್ಲಿ ವಿಭಿನ್ನವಾಗಿ ಪ್ರತಿಭಟನೆ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಯಾವ ಜಿಲ್ಲೆಗಳಲ್ಲಿ ಯಾವ ರೀತಿ ಪ್ರತಿಭಟನೆ ನಡೆಯಿತು ಎಂಬ ಮಾಹಿತಿ ಇಲ್ಲಿದೆ.

ನಂದಿನಿ ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ; ಬೆಂಗಳೂರಿನಲ್ಲಿ ಅಶೋಕ್ ಸೇರಿ ಬಿಜೆಪಿ ಶಾಸಕರೇ ಗೈರು!
ಚಿಕ್ಕಮಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆImage Credit source: PTI
ಕಿರಣ್​ ಸೂರ್ಯ
| Edited By: |

Updated on: Jun 29, 2024 | 5:39 PM

Share

ಬೆಂಗಳೂರು, ಜೂನ್ 29: ನಂದಿನಿ ಹಾಲಿನ ದರ ಏರಿಕೆ ನಿರ್ಧಾರ ಖಂಡಿಸಿ ರಾಜ್ಯದ ಹಲವೆಡೆ ಬಿಜೆಪಿ ವಿಭಿನ್ನವಾಗಿ ಪ್ರತಿಭಟನೆ ನಡೆಸಿತು. ರಸ್ತೆ ಮೇಲೆ ಹಸುಗಳನ್ನು ತಂದು, ರಸ್ತೆ ಮೇಲೆಯೇ ಹಾಲು ಕಾಯಿಸಿ, ಹೆಗಲ ಮೇಲೆ ನೇಗಿಲು-ಗುದ್ದಲಿ ಹೊತ್ಕೊಂಡು ಘೋಷಣೆ ಕೂಗಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಬಿಜೆಪಿ ಕಾರ್ಯಕರ್ತರು ಹಸುಗಳನ್ನು ಕರೆತಂದು ಪ್ರತಿಭಟಿಸಿದರು. ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲಾಯಿತು. ಕೈಯಲ್ಲಿ ಹಾಲಿನ ಪ್ಯಾಕೆಟ್‌ ಹಿಡಿದು ಬಂದಿದ್ದ ಪ್ರತಿಭಟನಾಕಾರರು, ರಸ್ತೆ ತಡೆದು ಅಲ್ಲಿಯೇ ಹಾಲನ್ನ ಕಾಯಿಸಿದರು. ಆದರೆ, ವಿಪಕ್ಷ ನಾಯಕ ಆರ್.ಅಶೋಕ್ ಸೇರಿ ಬೆಂಗಳೂರಿನ ಬಿಜೆಪಿ ಶಾಸಕರು ಗೈರಾ ಎದ್ದು ಕಾಣಿಸಿತು.

ಇದೇ ವೇಳೆ ಬಿಜೆಪಿ ಎಂಎಲ್‌ಸಿ ಎನ್‌ ರವಿಕುಮಾರ್‌ ಸರ್ಕಾರದ ವಿರುದ್ಧ ಕಿಡಿಕಾರಿದರು.

ಅತ್ತ ಮಂಡ್ಯದಲ್ಲೂ ಬಿಜೆಪಿ ರೈತ ಮೋರ್ಚಾದಿಂದ ಸಂಜಯ್ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು. ಹೆಗಲ ಮೇಲೆ ನೇಗಿಲು-ಗುದ್ದಲಿ ಹೊತ್ಕೊಂಡಿದ್ದ ಬಿಜೆಪಿ ಕಾರ್ಯಕರ್ತರು ಹಸುಗಳನ್ನ ಬಳಸಿ ರಸ್ತೆ ತಡೆ ನಡೆಸಿದರು. ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ ಪ್ರತಿಭಟನಾಕಾರರು ಹಳೇ ಬೆಂಗಳೂರು-ಮೈಸೂರು ಹೆದ್ದಾರಿ ತಡೆದರು.

ತುಮಕೂರಿನಲ್ಲೂ ಬಿಜೆಪಿ ಪರವಾಗಿ ರಸ್ತೆಗೆ ಬಂದ ಹಸುಗಳು!

ತುಮಕೂರಿನಲ್ಲೂ ಬಿಜೆಪಿ ವಿಭಿನ್ನವಾಗಿ ಪ್ರತಿಭಟಿಸಿತು. ಡಿಸಿ ಕಚೇರಿ ಬಳಿ ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್‌ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಗಣಿಜಿಲ್ಲೆ ಬಳ್ಳಾರಿಯಲ್ಲೂ ಬಿಜೆಪಿ ರೈತ ಮೋರ್ಚಾ ಹಾಲಿನ ದರ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಪ್ರತಿಭಟಿಸಿತು. ರೈತರನ್ನ ಪಾತಾಳಕ್ಕೆ ತಳ್ಳಿದ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ ಧಿಕ್ಕಾರ, ಧಿಕ್ಕಾರ ಎಂದು ಘೋಷಣೆ ಕೂಗಲಾಯಿತು. ಹಸುಗಳ ಜತೆಗೆ ಬಕೆಟ್‌ಗಳನ್ನ ಹಿಡಿದುಕೊಂಡು ಪ್ರತಿಭಟನಾಕಾರರು ಕಿಡಿಕಾರಿದಾರು.

ಇದನ್ನೂ ಓದಿ: ನಂದಿನಿ ಹಾಲಿನ ದರ ಹೆಚ್ಚಳದಿಂದ ದೂದ್ ಪೇಡ, ಧಾರವಾಡ ಪೇಡ ದರ ಏರಿಕೆ; ಜೇಬು ಸುಡಲಿದೆ ಐಸ್ ಕ್ರೀಂ, ಮಿಲ್ಕ್ ಶೇಕ್

ಹಾಲು ದರ ಏರಿಕೆ, ರೈತರಿಗೆ ಹಾಲಿನ ಪ್ರೋತ್ಸಾಹ ಧನ ನೀಡದಿರುವುದನ್ನು ಖಂಡಿಸಿ ಶಿವಮೊಗ್ಗದಲ್ಲೂ ಬಿಜೆಪಿ ಪ್ರತಿಭಟಿಸಿದೆ. ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಪ್ರತಿಭಟನಾಕಾರರು ಯತ್ನಿಸಿದರು. ಆದರೆ, ಕಚೇರಿ ಮುಂಭಾಗವೇ ಬ್ಯಾರಿಕೇಡ್ ಹಾಕಿ ಪೊಲೀಸರು ತಡೆದರು. ಈ ವೇಳೆ ಪ್ರತಿಭಟನಾಕಾರರು-ಪೊಲೀಸರ ನಡುವೆ ವಾಗ್ವಾದ ನಡೆಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು