AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಫಲಿತಾಂಶ ಏನು ಹೇಳಿದೆ ಎಂದು ಸಿದ್ದರಾಮಯ್ಯ ತಿಳಿಸಲಿ: ಸುನೀಲ್ ಕುಮಾರ್

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಪೈಕಿ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್​​ಗಢ ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾರ್ಕಳ ಬಿಜೆಪಿ ಶಾಸಕ ಸುನೀಲ್ ಕುಮಾರ್, ಎಲ್ಲಾ ರಾಜ್ಯಗಳಲ್ಲೂ ಕಾಂಗ್ರೆಸ್ ಬರುತ್ತದೆ ಎಂದು ಹೇಳುತ್ತಿದ್ದ ಸಿದ್ದರಾಮಯ್ಯ ಅವರು ಚುನಾವಣೆ ಫಲಿತಾಂಶದ ಬಗ್ಗೆ ಹೇಳಲಿ ಎಂದರು.

ಚುನಾವಣೆ ಫಲಿತಾಂಶ ಏನು ಹೇಳಿದೆ ಎಂದು ಸಿದ್ದರಾಮಯ್ಯ ತಿಳಿಸಲಿ: ಸುನೀಲ್ ಕುಮಾರ್
ಸುನೀಲ್ ಕುಮಾರ್ ಮತ್ತು ಸಿದ್ದರಾಮಯ್ಯ
ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Dec 03, 2023 | 3:03 PM

Share

ಉಡುಪಿ, ಡಿ.3: ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್​​ಗಢ ಜನರು ಚುನಾವಣೆಯಲ್ಲಿ ಬಿಜೆಪಿ ಕೈಹಿಡಿದಿದ್ದಾರೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ (Sunil Kumar) ಹೇಳಿದ್ದಾರೆ. ಉಡುಪಿಯಲ್ಲಿ (Udupi) ಮಾತನಾಡಿದ ಅವರು, ನಾವು ಕಳೆದುಕೊಂಡಿದ್ದ ಎರಡು ರಾಜ್ಯಗಳನ್ನು ವಾಪಸ್ ಪಡೆದಿದ್ದೇವೆ. ಮಧ್ಯಪ್ರದೇಶದಲ್ಲಿ ಐದನೇ ಬಾರಿಗೆ ಬಿಜೆಪಿ ಗೆಲುವು ಸಾಧಿಸಿದೆ ಎಂದರು.

ತೆಲಂಗಾಣದಲ್ಲಿ ನಮ್ಮ ಶಕ್ತಿ ವೃದ್ಧಿಯಾಗಿದೆ. ಕೇವಲ ಒಂದು ಸೀಟು ಇದ್ದ ತೆಲಂಗಾಣದಲ್ಲಿ ಈ ಬಾರಿ 10 ಸೀಟುಗಳು ಬಂದಿವೆ. ಶಕ್ತಿ ವೃದ್ಧಿಯಾದ ಬಗ್ಗೆ ನಮಗೆ ಸಮಾಧಾನ ಮತ್ತು ಖುಷಿಯಿದೆ. ಚುನಾವಣೆ ಫಲಿತಾಂಶ ನಮಗೆ ಲೋಕಸಭಾ ಚುನಾವಣೆಗೆ ಶಕ್ತಿ ತುಂಬಲಿದೆ. ತೆಲಂಗಾಣದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂದು ಯಾವತ್ತೂ ಹೇಳಿಲ್ಲ. ಚುನಾವಣೆ ಗೆಲ್ಲಲು ಗ್ಯಾರಂಟಿಯೇ ಕಾರಣ ಎಂದು ಹೇಳಲು ಸಾಧ್ಯವಿಲ್ಲ. ಶಾಶ್ವತ ಯೋಜನೆಗಳ ಬಗ್ಗೆ ಜನ ಯಾವತ್ತೂ ಮನ್ನಣೆ ನೀಡುತ್ತಾರೆ ಎಂದರು.

ತೆಲಂಗಾಣದಲ್ಲಿ ದೊಡ್ಡ ಪ್ರಮಾಣದಲ್ಲಿ ಸ್ಥಾನ ಗೆಲ್ಲುವ ವಿಶ್ವಾಸ ಇತ್ತು. ಪಕ್ಷದ ಆಂತರಿಕ ಸರ್ವೆಗಳಲ್ಲಿ 15 ಸ್ಥಾನ ಗೆಲ್ಲುವ ವಿಶ್ವಾಸವಿತ್ತು. ಬಂದಿರುವ ಫಲಿತಾಂಶ ಬಹುತೇಕ ಹತ್ತಿರ ಇದೆ. ತೆಲಂಗಾಣದಲ್ಲಿ ಸರ್ಕಾರದ ವಿರುದ್ಧ ಅಭಿಪ್ರಾಯ ಮೂಡಿಸುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು. ನಾವು ಮಾಡಿದ ಜನಾಂಧೋಲನಗಳ ಲಾಭ ಕಾಂಗ್ರೆಸ್ ಪಡೆದಿದೆ ಎಂದರು.

ಇದನ್ನೂ ಓದಿ: ರಾಜಸ್ಥಾನ, ಛತ್ತೀಸಗಡ್ ಹಾಗೂ ಮಧ್ಯಪ್ರದೇಶದಲ್ಲಿ ಮುನ್ನಡೆ; ಕರ್ನಾಟಕ ಬಿಜೆಪಿ ನಾಯಕರು ಹೇಳಿದ್ದಿಷ್ಟು

ಈ ಚುನಾವಣೆ ಲೋಕಸಭಾ ಚುನಾವಣೆಗೆ ಸ್ಫೂರ್ತಿ ಕೊಟ್ಟಿದೆ, ಕಾರ್ಯಕರ್ತರಿಗೆ ಹುಮ್ಮಸ್ಸು ನೀಡಿದೆ. ಕಾಂಗ್ರೆಸ್ ನೇತೃತ್ವವೇ ಇಲ್ಲದ ಪಕ್ಷ. ಬಿಜೆಪಿಯಲ್ಲಿ ನೇತೃತ್ವ, ದೂರಗಾಮಿ ಆಲೋಚನೆಗಳಿವೆ. ಜಗತ್ತು ಒಪ್ಪಿಕೊಳ್ಳುವ ನಾಯಕತ್ವ ಬಿಜೆಪಿಯಲ್ಲಿದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ 28 ಸ್ಥಾನ ಗೆಲ್ಲುವ ಗುರಿಯಿದೆ. ಈಗ ಚುನಾವಣೆ ನಡೆದರೂ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ರಾಜಸ್ಥಾನ ಮಧ್ಯ ಪ್ರದೇಶ ಎಲ್ಲಾ ಕಡೆ ಗೆಲ್ಲುತ್ತೇವೆ ಎಂದು ಸಿದ್ದರಾಮಯ್ಯ ಉತ್ಸಾಹದಲ್ಲಿದ್ದರು. ಚುನಾವಣೆ ಫಲಿತಾಂಶ ಏನು ಹೇಳಿದೆ ಅನ್ನೋದನ್ನು ಸಿದ್ದರಾಮಯ್ಯ ತಿಳಿಸಲಿ ಎಂದರು.

ಸರ್ಕಾರ ಅಸ್ತಿತ್ವಕ್ಕೆ ಬಂದು ಎಂಟು ತಿಂಗಳಲ್ಲಿ ಇಷ್ಟೊಂದು ವಿರೋಧಿ ಜನಾಭಿಪ್ರಾಯ ಮೂಡಿರುವುದು ಯಾವತ್ತು ಕಂಡಿಲ್ಲ. ಎಂಟು ತಿಂಗಳಲ್ಲಿ ರಾಜ್ಯ ಸರ್ಕಾರ ಜನಮನ್ನಣೆ ಕಳೆದುಕೊಂಡಿದೆ. ಅದು ಲೋಕಸಭಾ ಚುನಾವಣೆಯಲ್ಲಿ ಗೊತ್ತಾಗುತ್ತದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Prajwal Amin
Prajwal Amin

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ