ಮಂಗಳೂರು ಪಾಲಿಕೆ ಬಿಜೆಪಿ ಮಡಿಲಿಗೆ, ಖಾತೆ ತೆರೆಯದ ಜೆಡಿಎಸ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಬಿಜೆಪಿ ಮಡಿಲಿಗೆ ಬಿದ್ದಿದೆ. ಒಟ್ಟು 60 ವಾರ್ಡ್​ಗಳ ಪೈಕಿ 44ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇನ್ನು ಕಾಂಗ್ರೆಸ್ 14, 2 ವಾರ್ಡ್​ಗಳಲ್ಲಿ ಎಸ್​ಡಿಪಿಐಗೆ ಗೆಲುವು ಕಂಡಿದೆ. ಜೆಡಿಎಸ್ ಯಾವುದೇ ಸ್ಥಾನ ಗಳಿಸುವಲ್ಲಿ ವಿಫಲವಾಗಿದೆ. ಕೋಲಾರ ನಗರಸಭೆ ಫಲಿತಾಂಶ ಅತಂತ್ರ: ಕೋಲಾರ ನಗರಸಭೆ ಚುನಾವಣೆ ಫಲಿತಾಂಶ ಅತಂತ್ರವಾಗಿದೆ.35 ವಾರ್ಡ್‌ಗಳ ಪೈಕಿ 12 ವಾರ್ಡ್‌ಗಳಲ್ಲಿ ಕಾಂಗ್ರೆಸ್, 8 ವಾರ್ಡ್‌ಗಳಲ್ಲಿ ಜೆಡಿಎಸ್, 3 ವಾರ್ಡ್‌ಗಳಲ್ಲಿ ಬಿಜೆಪಿ ಮತ್ತು 12 ವಾರ್ಡ್‌ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ. […]

ಮಂಗಳೂರು ಪಾಲಿಕೆ ಬಿಜೆಪಿ ಮಡಿಲಿಗೆ, ಖಾತೆ ತೆರೆಯದ ಜೆಡಿಎಸ್
ಸಾಧು ಶ್ರೀನಾಥ್​

Updated on: Nov 14, 2019 | 7:18 PM

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಬಿಜೆಪಿ ಮಡಿಲಿಗೆ ಬಿದ್ದಿದೆ. ಒಟ್ಟು 60 ವಾರ್ಡ್​ಗಳ ಪೈಕಿ 44ರಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇನ್ನು ಕಾಂಗ್ರೆಸ್ 14, 2 ವಾರ್ಡ್​ಗಳಲ್ಲಿ ಎಸ್​ಡಿಪಿಐಗೆ ಗೆಲುವು ಕಂಡಿದೆ. ಜೆಡಿಎಸ್ ಯಾವುದೇ ಸ್ಥಾನ ಗಳಿಸುವಲ್ಲಿ ವಿಫಲವಾಗಿದೆ.

ಕೋಲಾರ ನಗರಸಭೆ ಫಲಿತಾಂಶ ಅತಂತ್ರ:
ಕೋಲಾರ ನಗರಸಭೆ ಚುನಾವಣೆ ಫಲಿತಾಂಶ ಅತಂತ್ರವಾಗಿದೆ.35 ವಾರ್ಡ್‌ಗಳ ಪೈಕಿ 12 ವಾರ್ಡ್‌ಗಳಲ್ಲಿ ಕಾಂಗ್ರೆಸ್, 8 ವಾರ್ಡ್‌ಗಳಲ್ಲಿ ಜೆಡಿಎಸ್, 3 ವಾರ್ಡ್‌ಗಳಲ್ಲಿ ಬಿಜೆಪಿ ಮತ್ತು 12 ವಾರ್ಡ್‌ಗಳಲ್ಲಿ ಪಕ್ಷೇತರ ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ.

ಇನ್ನು, ಮುಳಬಾಗಿಲು ನಗರಸಭೆ ಚುನಾವಣೆ ಫಲಿತಾಂಶವೂ ಅತಂತ್ರಗೊಂಡಿದೆ. 31 ವಾರ್ಡ್‌ಗಳ ಕೋಲಾರ ಜಿಲ್ಲೆ ಮುಳಬಾಗಿಲು ನಗರಸಭೆ 10 ವಾರ್ಡ್‌ಗಳಲ್ಲಿ ಜೆಡಿಎಸ್, 7 ವಾರ್ಡ್‌ಗಳಲ್ಲಿ ಕಾಂಗ್ರೆಸ್, 2 ವಾರ್ಡ್‌ಗಳಲ್ಲಿ ಬಿಜೆಪಿ, 12ರಲ್ಲಿ ಪಕ್ಷೇತರರು ಗೆಲುವು ಕಂಡಿದ್ದಾರೆ.

Published On - 12:21 pm, Thu, 14 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us