AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲ ಬಾರಿಗೆ ಬಿಜೆಪಿ ತೆಕ್ಕೆಗೆ ಹಾಸನ ನಗರಸಭೆ; ಬಹುಮತಕ್ಕೆ ಹತ್ತಿರವಿದ್ದರೂ ಜೆಡಿಎಸ್​ಗೆ ನಿರಾಸೆ

ಜೆಡಿಎಸ್ ಹಾಸನ ನಗರಸಭೆಯಲ್ಲಿ ಓರ್ವ ಪಕ್ಷೇತರ ಸದಸ್ಯನ ನೆರವಿನಿಂದ ಅಧಿಕಾರಕ್ಕೇರುವ ಕನಸು ಕಂಡಿತ್ತು. ಆದರೆ ಮೀಸಲಾತಿ ನೆರವಿನಿಂದ ಬಿಜೆಪಿ ಸದಸ್ಯರು ಅಧಿಕಾರ ಸ್ವೀಕರಿಸಿದ್ದು ಜೆಡಿಎಸ್​ನಿಂದ ಹಾಸನ ನಗರ ಸಭೆಯ ಅಧಿಕಾರ ಕೈತಪ್ಪಿದೆ.

ಇದೇ ಮೊದಲ ಬಾರಿಗೆ ಬಿಜೆಪಿ ತೆಕ್ಕೆಗೆ ಹಾಸನ ನಗರಸಭೆ; ಬಹುಮತಕ್ಕೆ ಹತ್ತಿರವಿದ್ದರೂ ಜೆಡಿಎಸ್​ಗೆ ನಿರಾಸೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jun 19, 2021 | 9:52 PM

Share

ಹಾಸನ: ಇದೇ ಮೊದಲ ಬಾರಿಗೆ ಹಾಸನ ನಗರಸಭೆ ಬಿಜೆಪಿ ತೆಕ್ಕೆಗೆ ಒಲಿದಿದೆ. ಜೆಡಿಎಸ್ ಪಕ್ಷ ಬಹುಮತಕ್ಕೆ ಹತ್ತಿರವಿದ್ದರೂ ಅಧಿಕಾರದಿಂದ ವಂಚಿತವಾಗಿದೆ. 35 ಸದಸ್ಯ ಬಲದ ನಗರಸಭೆಯಲ್ಲಿ 17 ಸ್ಥಾನ ಗೆದ್ದಿದ್ದ ಜೆಡಿಎಸ್​ಗೆ ನಿರಾಸೆ ಮೂಡಿದ್ದರೆ 13 ಸ್ಥಾನ ಗೆದ್ದಿದ್ದ ಬಿಜೆಪಿಗೆ ಅಧ್ಯಕ್ಷ ಸ್ಥಾನ ಒಲಿದಿದೆ.

ಜೆಡಿಎಸ್ ಹಾಸನ ನಗರಸಭೆಯಲ್ಲಿ ಓರ್ವ ಪಕ್ಷೇತರ ಸದಸ್ಯನ ನೆರವಿನಿಂದ ಅಧಿಕಾರಕ್ಕೇರುವ ಕನಸು ಕಂಡಿತ್ತು. ಆದರೆ ಮೀಸಲಾತಿ ನೆರವಿನಿಂದ ಬಿಜೆಪಿ ಸದಸ್ಯರು ಅಧಿಕಾರ ಸ್ವೀಕರಿಸಿದ್ದು ಜೆಡಿಎಸ್​ನಿಂದ ಹಾಸನ ನಗರ ಸಭೆಯ ಅಧಿಕಾರ ಕೈತಪ್ಪಿದೆ. ಬಿಜೆಪಿ ನಗರಸಭೆ ಸದಸ್ಯರಾದ ಮೋಹನ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಉಪಾಧ್ಯಕ್ಷರಾಗಿ ಮಂಗಳಾ ಪ್ರದೀಪ್ ಅಧಿಕಾರ ಸ್ವೀಕರಿಸಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇದ್ದಿದ್ದ ಕಾರಣ ಜೆಡಿಎಸ್​ ಕೈಯಿಂದ ಹಾಸನ ನಗರಸಭೆಯ ಅಧ್ಯಕ್ಷ ಸ್ಥಾನ ಕೈಬಿಟ್ಟಿತ್ತು. ಆದರೆ ಜೆಡಿಎಸ್​ನಿಂದ ಆಯ್ಕೆಯಾಗಿದ್ದ ನಗರಸಭೆ ಸದಸ್ಯರು ಉಪಾಧ್ಯಕ್ಷ ಸ್ಥಾನಕ್ಕೂ ಮೀಸಲಾತಿ ಇದ್ದ ಕಾರಣದಿಂದಲೇ ಅರ್ಜಿ ಸಲ್ಲಿಸಲಿಲ್ಲ. ಹೀಗಾಗಿ ಉಪಾಧ್ಯಕ್ಷ ಸ್ಥಾನವೂ ಜೆಡಿಎಸ್​ ಕೈಬಿಟ್ಟಿದೆ. ಶಾಸಕ‌ ಪ್ರೀತಂಗೌಡ ಸಮ್ಮುಖದಲ್ಲಿ ಮೋಹನ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಮಂಗಳಾ ಪ್ರದೀಪ್ ಅಧಿಕಾರ ಸ್ವೀಕರಿಸಿದ್ದಾರೆ. ಕೇವಲ 13 ಸ್ಥಾನ ಗೆದ್ದರೂ ಮೀಸಲಾತಿ ನೆರವಿನಿಂದ ಬಿಜೆಪಿ ಇದೇ ಮೊದಲ ಬಾರಿಗೆ ಹಾಸನ ನಗರಸಭೆಯಲ್ಲಿ ಅಧಿಕಾರ ಪಡೆದಿದೆ.

ಇದನ್ನೂ ಓದಿ: Karnataka Unlock: 2ನೇ ಹಂತದ ಅನ್​ಲಾಕ್: ಸೋಮವಾರದಿಂದಲೇ 16 ಜಿಲ್ಲೆಗಳಲ್ಲಿ ಸರ್ಕಾರಿ ಬಸ್ ಓಡಾಟ ಆರಂಭ, ಎಲ್ಲಾ ಅಂಗಡಿ ಓಪನ್, ಶರತ್ತುಗಳು ಅನ್ವಯ

ಕೊವಿಡ್ ನಡುವೆಯೇ ಕರ್ನಾಟಕದಲ್ಲಿ 3,272 ಬಾಲ್ಯವಿವಾಹ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕಡಿಮೆ: ಸಚಿವೆ ಶಶಿಕಲಾ ಜೊಲ್ಲೆ

(BJP Won Hassan Municipal election in first time JDS lost)

ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’
ಕಿರುತೆರೆಯಲ್ಲಿ ಪ್ರಸಾರ ಕಾಣಲು ರೆಡಿ ಆಯ್ತು ‘ಕಾಂತಾರ: ಚಾಪ್ಟರ್ 1’
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ