AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲ ಬಾರಿಗೆ ಬಿಜೆಪಿ ತೆಕ್ಕೆಗೆ ಹಾಸನ ನಗರಸಭೆ; ಬಹುಮತಕ್ಕೆ ಹತ್ತಿರವಿದ್ದರೂ ಜೆಡಿಎಸ್​ಗೆ ನಿರಾಸೆ

ಜೆಡಿಎಸ್ ಹಾಸನ ನಗರಸಭೆಯಲ್ಲಿ ಓರ್ವ ಪಕ್ಷೇತರ ಸದಸ್ಯನ ನೆರವಿನಿಂದ ಅಧಿಕಾರಕ್ಕೇರುವ ಕನಸು ಕಂಡಿತ್ತು. ಆದರೆ ಮೀಸಲಾತಿ ನೆರವಿನಿಂದ ಬಿಜೆಪಿ ಸದಸ್ಯರು ಅಧಿಕಾರ ಸ್ವೀಕರಿಸಿದ್ದು ಜೆಡಿಎಸ್​ನಿಂದ ಹಾಸನ ನಗರ ಸಭೆಯ ಅಧಿಕಾರ ಕೈತಪ್ಪಿದೆ.

ಇದೇ ಮೊದಲ ಬಾರಿಗೆ ಬಿಜೆಪಿ ತೆಕ್ಕೆಗೆ ಹಾಸನ ನಗರಸಭೆ; ಬಹುಮತಕ್ಕೆ ಹತ್ತಿರವಿದ್ದರೂ ಜೆಡಿಎಸ್​ಗೆ ನಿರಾಸೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jun 19, 2021 | 9:52 PM

Share

ಹಾಸನ: ಇದೇ ಮೊದಲ ಬಾರಿಗೆ ಹಾಸನ ನಗರಸಭೆ ಬಿಜೆಪಿ ತೆಕ್ಕೆಗೆ ಒಲಿದಿದೆ. ಜೆಡಿಎಸ್ ಪಕ್ಷ ಬಹುಮತಕ್ಕೆ ಹತ್ತಿರವಿದ್ದರೂ ಅಧಿಕಾರದಿಂದ ವಂಚಿತವಾಗಿದೆ. 35 ಸದಸ್ಯ ಬಲದ ನಗರಸಭೆಯಲ್ಲಿ 17 ಸ್ಥಾನ ಗೆದ್ದಿದ್ದ ಜೆಡಿಎಸ್​ಗೆ ನಿರಾಸೆ ಮೂಡಿದ್ದರೆ 13 ಸ್ಥಾನ ಗೆದ್ದಿದ್ದ ಬಿಜೆಪಿಗೆ ಅಧ್ಯಕ್ಷ ಸ್ಥಾನ ಒಲಿದಿದೆ.

ಜೆಡಿಎಸ್ ಹಾಸನ ನಗರಸಭೆಯಲ್ಲಿ ಓರ್ವ ಪಕ್ಷೇತರ ಸದಸ್ಯನ ನೆರವಿನಿಂದ ಅಧಿಕಾರಕ್ಕೇರುವ ಕನಸು ಕಂಡಿತ್ತು. ಆದರೆ ಮೀಸಲಾತಿ ನೆರವಿನಿಂದ ಬಿಜೆಪಿ ಸದಸ್ಯರು ಅಧಿಕಾರ ಸ್ವೀಕರಿಸಿದ್ದು ಜೆಡಿಎಸ್​ನಿಂದ ಹಾಸನ ನಗರ ಸಭೆಯ ಅಧಿಕಾರ ಕೈತಪ್ಪಿದೆ. ಬಿಜೆಪಿ ನಗರಸಭೆ ಸದಸ್ಯರಾದ ಮೋಹನ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಉಪಾಧ್ಯಕ್ಷರಾಗಿ ಮಂಗಳಾ ಪ್ರದೀಪ್ ಅಧಿಕಾರ ಸ್ವೀಕರಿಸಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇದ್ದಿದ್ದ ಕಾರಣ ಜೆಡಿಎಸ್​ ಕೈಯಿಂದ ಹಾಸನ ನಗರಸಭೆಯ ಅಧ್ಯಕ್ಷ ಸ್ಥಾನ ಕೈಬಿಟ್ಟಿತ್ತು. ಆದರೆ ಜೆಡಿಎಸ್​ನಿಂದ ಆಯ್ಕೆಯಾಗಿದ್ದ ನಗರಸಭೆ ಸದಸ್ಯರು ಉಪಾಧ್ಯಕ್ಷ ಸ್ಥಾನಕ್ಕೂ ಮೀಸಲಾತಿ ಇದ್ದ ಕಾರಣದಿಂದಲೇ ಅರ್ಜಿ ಸಲ್ಲಿಸಲಿಲ್ಲ. ಹೀಗಾಗಿ ಉಪಾಧ್ಯಕ್ಷ ಸ್ಥಾನವೂ ಜೆಡಿಎಸ್​ ಕೈಬಿಟ್ಟಿದೆ. ಶಾಸಕ‌ ಪ್ರೀತಂಗೌಡ ಸಮ್ಮುಖದಲ್ಲಿ ಮೋಹನ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಮಂಗಳಾ ಪ್ರದೀಪ್ ಅಧಿಕಾರ ಸ್ವೀಕರಿಸಿದ್ದಾರೆ. ಕೇವಲ 13 ಸ್ಥಾನ ಗೆದ್ದರೂ ಮೀಸಲಾತಿ ನೆರವಿನಿಂದ ಬಿಜೆಪಿ ಇದೇ ಮೊದಲ ಬಾರಿಗೆ ಹಾಸನ ನಗರಸಭೆಯಲ್ಲಿ ಅಧಿಕಾರ ಪಡೆದಿದೆ.

ಇದನ್ನೂ ಓದಿ: Karnataka Unlock: 2ನೇ ಹಂತದ ಅನ್​ಲಾಕ್: ಸೋಮವಾರದಿಂದಲೇ 16 ಜಿಲ್ಲೆಗಳಲ್ಲಿ ಸರ್ಕಾರಿ ಬಸ್ ಓಡಾಟ ಆರಂಭ, ಎಲ್ಲಾ ಅಂಗಡಿ ಓಪನ್, ಶರತ್ತುಗಳು ಅನ್ವಯ

ಕೊವಿಡ್ ನಡುವೆಯೇ ಕರ್ನಾಟಕದಲ್ಲಿ 3,272 ಬಾಲ್ಯವಿವಾಹ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕಡಿಮೆ: ಸಚಿವೆ ಶಶಿಕಲಾ ಜೊಲ್ಲೆ

(BJP Won Hassan Municipal election in first time JDS lost)

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?