AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲ ಬಾರಿಗೆ ಬಿಜೆಪಿ ತೆಕ್ಕೆಗೆ ಹಾಸನ ನಗರಸಭೆ; ಬಹುಮತಕ್ಕೆ ಹತ್ತಿರವಿದ್ದರೂ ಜೆಡಿಎಸ್​ಗೆ ನಿರಾಸೆ

ಜೆಡಿಎಸ್ ಹಾಸನ ನಗರಸಭೆಯಲ್ಲಿ ಓರ್ವ ಪಕ್ಷೇತರ ಸದಸ್ಯನ ನೆರವಿನಿಂದ ಅಧಿಕಾರಕ್ಕೇರುವ ಕನಸು ಕಂಡಿತ್ತು. ಆದರೆ ಮೀಸಲಾತಿ ನೆರವಿನಿಂದ ಬಿಜೆಪಿ ಸದಸ್ಯರು ಅಧಿಕಾರ ಸ್ವೀಕರಿಸಿದ್ದು ಜೆಡಿಎಸ್​ನಿಂದ ಹಾಸನ ನಗರ ಸಭೆಯ ಅಧಿಕಾರ ಕೈತಪ್ಪಿದೆ.

ಇದೇ ಮೊದಲ ಬಾರಿಗೆ ಬಿಜೆಪಿ ತೆಕ್ಕೆಗೆ ಹಾಸನ ನಗರಸಭೆ; ಬಹುಮತಕ್ಕೆ ಹತ್ತಿರವಿದ್ದರೂ ಜೆಡಿಎಸ್​ಗೆ ನಿರಾಸೆ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jun 19, 2021 | 9:52 PM

Share

ಹಾಸನ: ಇದೇ ಮೊದಲ ಬಾರಿಗೆ ಹಾಸನ ನಗರಸಭೆ ಬಿಜೆಪಿ ತೆಕ್ಕೆಗೆ ಒಲಿದಿದೆ. ಜೆಡಿಎಸ್ ಪಕ್ಷ ಬಹುಮತಕ್ಕೆ ಹತ್ತಿರವಿದ್ದರೂ ಅಧಿಕಾರದಿಂದ ವಂಚಿತವಾಗಿದೆ. 35 ಸದಸ್ಯ ಬಲದ ನಗರಸಭೆಯಲ್ಲಿ 17 ಸ್ಥಾನ ಗೆದ್ದಿದ್ದ ಜೆಡಿಎಸ್​ಗೆ ನಿರಾಸೆ ಮೂಡಿದ್ದರೆ 13 ಸ್ಥಾನ ಗೆದ್ದಿದ್ದ ಬಿಜೆಪಿಗೆ ಅಧ್ಯಕ್ಷ ಸ್ಥಾನ ಒಲಿದಿದೆ.

ಜೆಡಿಎಸ್ ಹಾಸನ ನಗರಸಭೆಯಲ್ಲಿ ಓರ್ವ ಪಕ್ಷೇತರ ಸದಸ್ಯನ ನೆರವಿನಿಂದ ಅಧಿಕಾರಕ್ಕೇರುವ ಕನಸು ಕಂಡಿತ್ತು. ಆದರೆ ಮೀಸಲಾತಿ ನೆರವಿನಿಂದ ಬಿಜೆಪಿ ಸದಸ್ಯರು ಅಧಿಕಾರ ಸ್ವೀಕರಿಸಿದ್ದು ಜೆಡಿಎಸ್​ನಿಂದ ಹಾಸನ ನಗರ ಸಭೆಯ ಅಧಿಕಾರ ಕೈತಪ್ಪಿದೆ. ಬಿಜೆಪಿ ನಗರಸಭೆ ಸದಸ್ಯರಾದ ಮೋಹನ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಉಪಾಧ್ಯಕ್ಷರಾಗಿ ಮಂಗಳಾ ಪ್ರದೀಪ್ ಅಧಿಕಾರ ಸ್ವೀಕರಿಸಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಇದ್ದಿದ್ದ ಕಾರಣ ಜೆಡಿಎಸ್​ ಕೈಯಿಂದ ಹಾಸನ ನಗರಸಭೆಯ ಅಧ್ಯಕ್ಷ ಸ್ಥಾನ ಕೈಬಿಟ್ಟಿತ್ತು. ಆದರೆ ಜೆಡಿಎಸ್​ನಿಂದ ಆಯ್ಕೆಯಾಗಿದ್ದ ನಗರಸಭೆ ಸದಸ್ಯರು ಉಪಾಧ್ಯಕ್ಷ ಸ್ಥಾನಕ್ಕೂ ಮೀಸಲಾತಿ ಇದ್ದ ಕಾರಣದಿಂದಲೇ ಅರ್ಜಿ ಸಲ್ಲಿಸಲಿಲ್ಲ. ಹೀಗಾಗಿ ಉಪಾಧ್ಯಕ್ಷ ಸ್ಥಾನವೂ ಜೆಡಿಎಸ್​ ಕೈಬಿಟ್ಟಿದೆ. ಶಾಸಕ‌ ಪ್ರೀತಂಗೌಡ ಸಮ್ಮುಖದಲ್ಲಿ ಮೋಹನ್ ಅಧ್ಯಕ್ಷರಾಗಿ, ಉಪಾಧ್ಯಕ್ಷರಾಗಿ ಮಂಗಳಾ ಪ್ರದೀಪ್ ಅಧಿಕಾರ ಸ್ವೀಕರಿಸಿದ್ದಾರೆ. ಕೇವಲ 13 ಸ್ಥಾನ ಗೆದ್ದರೂ ಮೀಸಲಾತಿ ನೆರವಿನಿಂದ ಬಿಜೆಪಿ ಇದೇ ಮೊದಲ ಬಾರಿಗೆ ಹಾಸನ ನಗರಸಭೆಯಲ್ಲಿ ಅಧಿಕಾರ ಪಡೆದಿದೆ.

ಇದನ್ನೂ ಓದಿ: Karnataka Unlock: 2ನೇ ಹಂತದ ಅನ್​ಲಾಕ್: ಸೋಮವಾರದಿಂದಲೇ 16 ಜಿಲ್ಲೆಗಳಲ್ಲಿ ಸರ್ಕಾರಿ ಬಸ್ ಓಡಾಟ ಆರಂಭ, ಎಲ್ಲಾ ಅಂಗಡಿ ಓಪನ್, ಶರತ್ತುಗಳು ಅನ್ವಯ

ಕೊವಿಡ್ ನಡುವೆಯೇ ಕರ್ನಾಟಕದಲ್ಲಿ 3,272 ಬಾಲ್ಯವಿವಾಹ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕಡಿಮೆ: ಸಚಿವೆ ಶಶಿಕಲಾ ಜೊಲ್ಲೆ

(BJP Won Hassan Municipal election in first time JDS lost)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?