AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಬಿಜೆಪಿ ನಾಯಕರಿಗೆ ನಾಯಕತ್ವ- ಶಿಸ್ತಿನ ಪಾಠ ಮಾಡಿದ ಬಿ.ಎಲ್. ಸಂತೋಷ್

ರಾಜ್ಯದಲ್ಲಿ ವಿರೋಧ ಪಕ್ಷ ಬಿಜೆಪಿ, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಗಮನ ಸೆಳೆಯುವ ಹೋರಾಟ ರೂಪಿಸುವಲ್ಲಿ ವಿಫಲವಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ಇನ್ನೊಂದೆಡೆ ಬಣ ಬಡಿದಾಟ ಜೋರಾಗಿದ್ದು, ಈ ಸಂಬಂಧ ನಾಯಕರ ನಡೆಗೆ ಕೆಳ ಹಂತದ ಮುಖಂಡರು, ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಈ ಎಲ್ಲಾ ವಿಚಾರಗಳನ್ನಿಟ್ಟುಕೊಂಡು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ರಾಜ್ಯ ನಾಯಕರಿಗೆ ಶಿಸ್ತಿನ ಪಾಠ ಮಾಡಿದ್ದಾರೆ. ಅಲ್ಲದೇ ಕೆಲವರಿಗೆ ಪರೋಕ್ಷವಾಗಿ ಮುಟ್ಟಿ ನೋಡಿಕೊಳ್ಳುವಂತೆ ಟಾಂಗ್ ಕೊಟ್ಟಿದ್ದಾರೆ.

ರಾಜ್ಯ ಬಿಜೆಪಿ ನಾಯಕರಿಗೆ ನಾಯಕತ್ವ- ಶಿಸ್ತಿನ ಪಾಠ ಮಾಡಿದ ಬಿ.ಎಲ್. ಸಂತೋಷ್
Bl Santosh
ಕಿರಣ್​ ಹನಿಯಡ್ಕ
| Edited By: |

Updated on: Sep 19, 2025 | 8:32 PM

Share

ಬೆಂಗಳೂರು, (ಸೆಪ್ಟೆಂಬರ್ 19): ಬಿಜೆಪಿ ಚಿಂತನಾ ಸಭೆಯ ( karnataka BJP Chintan Sabhe) ಸಮಾರೋಪ ಭಾಷಣದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ (BL Santosh) ಅವರು ರಾಜ್ಯ ಬಿಜೆಪಿ ನಾಯಕರಿಗೆ ಶಿಸ್ತಿನ ಪಾಠ ಮಾಡಿದ್ದಾರೆ. ಹಾಗೇ ನಾಯಕತ್ವ ಗುಣ ಬಗ್ಗೆಯೂ ಹೇಳಿದ್ದಾರೆ. ಪಕ್ಷದಲ್ಲಿ ಆಂತರಿಕ ಸ್ಫರ್ಧೆ ಇರಬೇಕು. ಅದು ಅಶಿಸ್ತಿನ ಹಂತಕ್ಕೆ ಹೋಗಬಾರದು. ಹಿಂದೆ ಎಲ್ಲಾ ಹಂತದಲ್ಲೂ ತಪ್ಪಾಗಿದೆ ಹೌದು. ಅದನ್ನು ಸರಿಪಡಿಸಿಕೊಂಡು ಹೋಗಬೇಕು. ಆರೋಪ ಬೇಡ. ಪಕ್ಷದಲ್ಲಿ ನಾಯಕರು ಮಾತನಾಡುವಾಗ ಪರಸ್ಪರ ನೇರವಾಗಿಯೇ ಮಾತಾಡಿ. ಮಧ್ಯವರ್ತಿಗಳನ್ನು ಇಟ್ಟುಕೊಂಡು ಮಾತನಾಡಬೇಕಿಲ್ಲ ಎಂದು ಪರೋಕ್ಷವಾಗಿ ಶಾಲಲ್ಲಿ ಕಲ್ಲು ಸೂತ್ಕೊಂಡ ಹೊಡೆದಂಗೆ ಹೇಳಿದರು.

ಎಲ್ಲಾ ಸರ್ವೇಗಳಲ್ಲೂ ಕಾಂಗ್ರೆಸ್ ಗೆ ಕಡಿಮೆ ಸ್ಥಾನಗಳು ಬಂದಿವೆ. ನಾವು ಯಾವುದೇ ಹೋರಾಟ ಕೈಗೆತ್ತಿಕೊಂಡರೂ ಕಾಂಗ್ರೆಸ್ ಮತ್ತೊಂದು ವಿಷಯ ಹುಡುಕಿ ವಿಷಯಾಂತರ ಮಾಡಿಬಿಡುತ್ತದೆ. ಧರ್ಮಸ್ಥಳ ವಿಚಾರದಲ್ಲಿ ಏನೂ ಇಲ್ಲ ಅಂತಾದಾಗ ಚಾಮುಂಡಿ ಬೆಟ್ಟ ವಿಚಾರ ತಂದರು. ನಾಯಕರು ಕಾರ್ಯಕರ್ತರ ಕೈಗೆ ಸಿಕ್ಕುವಂತಿರಬೇಕು. ಪಕ್ಷದಲ್ಲಿ ಒಟ್ಟಾಗಿ ಹೋಗುವ ಕೆಲಸ ಆಗಬೇಕು. ಸ್ಪಷ್ಟತೆ ಇಲ್ಲದೇ ಯಾವುದೇ ಅನಗತ್ಯ ಹೇಳಿಕೆಗಳನ್ನು ನೀಡಬೇಡಿ ಎಂದು ಕಿವಿಮಾತು ಹೇಳಿದರು.

ಕಾರ್ಯಕರ್ತರ ಅಭಿಲಾಷೆ ಅರಿತು ಮುಂಚೂಣಿ ನಾಯಕರು ನಡೆದುಕೊಳ್ಳಬೇಕು. ನಾಯಕರ ಮಧ್ಯೆ ಒಗ್ಗಟ್ಟು, ಸಮನ್ವಯ ಕೊರತೆ ಇದೆ ಎಂದು ಕಾರ್ಯಕರ್ತರಿಗೆ ಅನ್ನಿಸಿದರೆ ಅದು ಇದೆ ಅಂತಲೇ ಅರ್ಥ, ಅದನ್ನು ಸರಿಪಡಿಸಿಕೊಳ್ಳಿ. ರಾಜ್ಯ ಸರ್ಕಾರ ಜನಪ್ರಿಯತೆ ಕಳೆದುಕೊಂಡಿರುವ ಸದಾವಕಾಶ ಬಳಸಿಕೊಳ್ಳಿ. ತಳಮಟ್ಟದಿಂದ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸಿ ಮುಂಬರುವ ಸ್ಥಳೀಯ ಸಂಸ್ಥೆ, ವಿಧಾನಸಭೆ ಚುನಾವಣೆಗೆ ವ್ಯವಸ್ಥಿತ ತಯಾರಿ ಇರಲಿ ಎಂದು ಸಲಹೆ ನೀಡಿದರು.

ಕಾಂಗ್ರೆಸ್ ತಪ್ಪಿನಿಂದ ಗೆಲ್ಲುವಂತಾಗಬಾರದು

ಮೊದಲು ನಿಮ್ಮನ್ನು ನೀವು ಆತ್ಮಾವಲೋಕನ ಮಾಡಿಕೊಳ್ಳಿ. ನಂತರ ಬೇರೆಯವರಿಗೆ ಸಲಹೆ ಕೊಡುವ ಕೆಲಸ ಮಾಡಿ. 6 ತಿಂಗಳಿನಿಂದ ನೀವೇನು‌ ಮಾತನಾಡಿದ್ದೀರಿ ಎಂಬುದನ್ನು ರಿವ್ಯೂ ಮಾಡಿಕೊಳ್ಳಿ. ಆಗ ನೀವೇನು ತಪ್ಪು ಮಾಡಿದ್ದೀರಿ ಅಂತಾ ನಿಮಗೆ ಗೊತ್ತಾಗುತ್ತದೆ. ಈಗ ರಾಜ್ಯದಲ್ಲಿ ಸರ್ವೆ ಮಾಡಿದರೆ ಕಾಂಗ್ರೆಸ್ 60 ಸ್ಥಾನದಲ್ಲಿ ಬರಬಹುದು. ಹಾಗಂತ‌ ಗೆದ್ದುಬಿಡುತ್ತೀರಿ ಎಂದಲ್ಲ, ಕಾಂಗ್ರೆಸ್ ತಪ್ಪಿನಿಂದ ಗೆಲ್ಲುವಂತಾಗಬಾರದು. ಗೆಲುವಿಗೆ ನಿಮ್ಮ ಸಾಮರ್ಥ್ಯ ಏನು ಎಂಬುದು ಮುಖ್ಯ. ಚಿಂತನಾ ಸಭೆಯನ್ನು ಅಶೋಕ್ ಮತ್ತು ವಿಜಯೇಂದ್ರ‌ ಯಶಸ್ವಿಯಾಗಿ ನಡೆಸಿದ್ದಾರೆ. ಇದನ್ನು ಮುಂದುವರಿಸಿಕೊಂಡು ಹೋಗುವಂತೆ ಇಬ್ಬರಿಗೂ ಸಲಹೆ ನೀಡುತ್ತೇನೆ‌ ಎಂದರು.

ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದ ಸ್ಫೋಟದ ಹೊಸ ವಿಡಿಯೋ ವೈರಲ್
ರಾಜಸ್ಥಾನದ ಕೆಮಿಕಲ್ ಫ್ಯಾಕ್ಟರಿಯಲ್ಲಿ ನಡೆದ ಸ್ಫೋಟದ ಹೊಸ ವಿಡಿಯೋ ವೈರಲ್
ದಾರಿ ಬಿಡುವ ವಿಚಾರಕ್ಕೆ ಬಸ್- ಆಟೋ ಚಾಲಕ ಹೊಡೆದಾಟ, ವಿಡಿಯೋ ನೋಡಿ
ದಾರಿ ಬಿಡುವ ವಿಚಾರಕ್ಕೆ ಬಸ್- ಆಟೋ ಚಾಲಕ ಹೊಡೆದಾಟ, ವಿಡಿಯೋ ನೋಡಿ
ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
ಬಾಲ್ಕನಿಯಲ್ಲಿ ಬಟ್ಟೆ ಒಣಗಿಸುವಾಗ ಕಾಲು ಜಾರಿ ಕೆಳಗೆ ಬಿದ್ದ ಮಹಿಳೆ
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ನೋಡಿ ಖುಷಿಯಿಂದ ವಾಪಸ್ ಹೊರಟ ವಿಜಯಲಕ್ಷ್ಮಿ
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಮಗಳ ಮದುವೆ ಸಾಲ ತೀರಿಸೋಕೆ ದುಡಿಯುತ್ತಿದ್ದ ಅಪ್ಪ-ಮಗ ಒಟ್ಟಿಗೆ ಸಾವು
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಚಿವ ಸ್ಥಾನಕ್ಕೆ ರಾಜೀನಾಮೆ: ಸ್ಪಷ್ಟನೆ ಕೊಟ್ಟ SS ಮಲ್ಲಿಕಾರ್ಜುನ್
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಸಿದ್ದಾರೂಢರ ಮಹಾರಥೋತ್ಸವದಲ್ಲಿ ಭಕ್ತ ಸಾಗರ: ಎತ್ತ ನೋಡಿದ್ರೂ ಜನವೋ ಜನ
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು
ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು