AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಲಾಕ್ ಅಂಡ್ ವೈಟ್ ದಂಧೆ ಕೇಸ್ ಪ್ರಕರಣ; ಇನ್ನೆರಡು ದಿನಗಳಲ್ಲಿ EDಗೆ ಹಸ್ತಾಂತರ ಸಾಧ್ಯತೆ​

ಕೇರಳಾದಲ್ಲಿ ಇದ್ದುಕೊಂಡು ಕೋಟಿ ಕೋಟಿ ಹಣವನ್ನು ವರ್ಗಾವಣೆ ಮಾಡ್ತಿದ್ದ ರಿಯಾಜ್, ಕೇರಳದಿಂದ ಹಣವನ್ನು ಕೋರಿಯರ್ ಮೂಲಕ ನಗರಕ್ಕೆ ಕಳುಹಿಸುತ್ತಿದ್ದ. ವಾಟ್ಸಪ್ ಮೂಲಕ ಕೊಡೋ ಅಕೌಂಟ್ ನಂಬರ್​ಗೆ ಇಂತಿಷ್ಟು ಹಣ ಹಾಕುವಂತೆ ಸೂಚನೆ ಮಾಡಲಾಗುತ್ತಿತ್ತು.

ಬ್ಲಾಕ್ ಅಂಡ್ ವೈಟ್ ದಂಧೆ ಕೇಸ್ ಪ್ರಕರಣ; ಇನ್ನೆರಡು ದಿನಗಳಲ್ಲಿ EDಗೆ ಹಸ್ತಾಂತರ ಸಾಧ್ಯತೆ​
ಫೈಜಲ್, ಸಾಲಿಹ್, ಅಬ್ದುಲ್ ಮನಾಫ್, ಮಹಮದ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Mar 27, 2022 | 11:43 AM

Share

ಬೆಂಗಳೂರು: ಪುಟ್ಟೆನಹಳ್ಳಿಯಲ್ಲಿ ಪತ್ತೆಯಾದ ಬ್ಲಾಕ್ ಅಂಡ್ ವೈಟ್ (Black and white) ದಂಧೆ ಕೇಸ್​ ಬಗೆದಷ್ಟು ಬಯಲಾಗುತ್ತಿದೆ. ನೂರಾರು ಕೋಟಿಯ ಕಿಂಗ್​ಪಿನ್ ಸಿಗದೆ ಪೊಲೀಸರು ಸುಸ್ತಾಗಿದ್ದಾರೆ. ಕಳೆದ ನಾಲ್ಕು ತಿಂಗಳ ಹಿಂದೆ ಸಿಕ್ಕ ಸುಳಿವು ಹಿಡಿದು ಪುಟ್ಟೇನಹಳ್ಳಿ ಪೊಲೀಸರು ಬೆನ್ನು ಹತ್ತಿದ್ದರು. ಈ ವೇಳೆ ಕೇರಳ ಟು ಬೆಂಗಳೂರು ಬರೋಬ್ಬರಿ 600 ಕೋಟಿ ರೂ. ವರ್ಗಾವಣೆಯಾಗಿರುವ ಸಂಗತಿ ಪತ್ತೆಯಾಗಿದ್ದು, ಪ್ರಕರಣದಲ್ಲಿ ನಾಲ್ಕು ಆರೋಪಿಗಳು ಸಿಕ್ಕಿದ್ರೂ ಪ್ರಮುಖ ಆರೋಪಿಯ ಸುಳಿವಿರಲಿಲ್ಲ. ನಾಲ್ಕು ತಿಂಗಳ‌ ಕಾರ್ಯಾಚರಣೆ ಬಳಿಕ‌ ಕೇರಳಾದಿಂದ ಪುಟ್ಟೇನಹಳ್ಳಿ ಪೊಲೀಸರು ಬರಿಗೈಲಿ ವಾಪಸ್ಸಾಗಿದ್ದಾರೆ. ಕಳೆದ ವರ್ಷ ಡಿಸೆಂಬರ್ ನಿಂದ ಇದುವರೆಗೂ ನಾಲ್ಕು ತಿಂಗಳು ಕೇರಳಾ ಸುತ್ತಾಡಿದ್ದ ಪೊಲೀಸರು, ನಾಲ್ಕು ತಿಂಗಳು ಹುಡುಕಾಟ ಮಾಡಿದ್ರೂ ಪ್ರಮುಖ ಆರೋಪಿ ರಿಯಾಜ್ ಸುಳಿವು ಸಿಕ್ಕಿಲ್ಲ. ಕಳೆದ ಡಿಸೆಂಬರ್ ೩ ರಂದು ಎಟಿಎಂ ಮಿಷನ್​ನಲ್ಲಿ ಹಣ ವರ್ಗಾವಣೆ ಮಾಡಿದ್ದ ನಾಲ್ವರ ಬಂಧನ ಆಗಿತ್ತು. ಫೈಜಲ್, ಸಾಲಿಹ್, ಅಬ್ದುಲ್ ಮನಾಫ್, ಮಹಮದ್​ ಪುಟ್ಟೇನಹಳ್ಳಿ ಪೊಲೀಸರು ಬಂಧನ ಮಾಡಿದ್ದರು. ಬ್ಲಾಕ್ ಅಂಡ್ ವೈಟ್ ದಂಧೆ ಹಿಂದೆ ಇರೋ ಕಿಂಗ್ ಪಿನ್ ರಿಯಾಜ್ ಅಂತ ಆರೋಪಿಗಳು ಬಾಯಿಬಿಟ್ಟಿದ್ದಾರೆ.

ಕೇರಳಾದಲ್ಲಿ ಇದ್ದುಕೊಂಡು ಕೋಟಿ ಕೋಟಿ ಹಣವನ್ನು ವರ್ಗಾವಣೆ ಮಾಡ್ತಿದ್ದ ರಿಯಾಜ್, ಕೇರಳದಿಂದ ಹಣವನ್ನು ಕೋರಿಯರ್ ಮೂಲಕ ನಗರಕ್ಕೆ ಕಳುಹಿಸುತ್ತಿದ್ದ. ವಾಟ್ಸಪ್ ಮೂಲಕ ಕೊಡೋ ಅಕೌಂಟ್ ನಂಬರ್​ಗೆ ಇಂತಿಷ್ಟು ಹಣ ಹಾಕುವಂತೆ ಸೂಚನೆ ಮಾಡಲಾಗುತ್ತಿತ್ತು. ರಿಯಾಜ್ ಕೊಟ್ಟ ಮೆಸೇಜ್​ನಂತೆ ಹಣ ಹಾಕ್ತಾ ಇದ್ದ ನಾಲ್ವರ ಟೀಂ, ನಾಲ್ವರ ತಂಡ 6 ತಿಂಗಳಲ್ಲಿ‌ 3500 ಅಕೌಂಟ್​ಗಳಿಗೆ ಹಣ ಡೆಪಾಸಿಟ್ ಮಾಡಿದ್ದಾರೆ. ಆದ್ರೆ ಹವಾಲ ಮೂಲವನ್ನು ಪತ್ತೆ ಮಾಡುವಲ್ಲಿ ನಗರ ಪೊಲೀಸರು ವಿಫಲರಾಗಿದ್ದಾರೆ. ಈಗ ಇಡೀ ಪ್ರಕರಣವನ್ನು ಪುಟ್ಟೇನಹಳ್ಳಿ ಪೊಲೀಸರು ಇಡಿಗೆ ವರ್ಗಾವಣೆ ಮಾಡಲಿದ್ದಾರೆ. ಬ್ಲಾಕ್ ಅಂಡ್ ವೈಟ್ ಕೇಸ್ ತನಿಖೆ ಇಡಿ ಕೈಗೆತ್ತಿಕೊಳ್ಳಲಿದೆ. ಇನ್ನೇರಡು ದಿನಗಳಲ್ಲಿ ಪ್ರಕರಣ ಹಸ್ತಾಂತರ ಸಾಧ್ಯತೆಯಿದ್ದು, ಈಗಾಗಲೇ  ಇಡಿ ಅಧಿಕಾರಿಗಳು ಕೆಲ ಮಾಹಿತಿ ಪಡೆದುಕೊಂಡಿದ್ದಾರೆ. ಮಾಹಿತಿ ಆಧರಿಸಿ ಇಡಿ ಆರೋಪಿಗಳ ವಿಚಾರಣೆ ನಡೆಸಲಿದೆ. ಈ ಬಳಿಕ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಾಧ್ಯತೆಯಿದ್ದು, ಬ್ಲಾಕ್ ಅಂಡ್ ವೈಟ್ ಹಿಂದೆ ವಿದೇಶದ ಲಿಂಕ್ ಶಂಕೆ ವ್ಯಕ್ತವಾಗಿದೆ.

ಕೇರಳಾ ಮೂಲದ ಕಿಂಗ್ ಪಿನ್ಗಳು ನಗರವನ್ನು ದಂಧೆಯ ಅಡ್ಡೆಯನ್ನಾಗಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ನಾಲ್ವರ ಟೀಂ ಜೂನ್ ನಲ್ಲಿ ಬೆಂಗಳೂರಿಗೆ ಆಗಮಿಸಿತ್ತು. ಫೈಜಲ್, ಅಬ್ದುಲ್ ಮುನಾಫ್, ಫಾಸಿಲ್, ಮೊಹಮ್ಮದ್ ಸಾಲಿಯರ ಗ್ಯಾಂಗ್ ಕಂಡು ಕಾಣದಂತೆ ದೂರದಲ್ಲಿದ್ದ ಕಿಂಗ್ ಪಿನ್ ರಿಯಾಜ್ ಜೊತೆ ಸಂಪರ್ಕ ಹೊಂದಿರುತ್ತಿತ್ತು. ಕಿಂಗ್ ಪಿನ್ ರಿಯಾಜ್ ಹೇಳಿದಂತೆ ಕಂಪ್ಲೀಟ್ ಬ್ಲಾಕ್ ಅಂಡ್ ವೈಟ್ ದಂಧೆ ನಡೆಯುತಿತ್ತು.

ಇದನ್ನು ಓದಿ:

ಖಾಸಗಿ ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡುವ ಹಕ್ಕು ಸರ್ಕಾರಕ್ಕಿಲ್ಲ: CFI ಸಂಘಟನೆ ಗರಂ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ