AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India: ಬೆಂಗಳೂರಿಂದ ತೆರಳುತ್ತಿದ್ದ ಏರ್​​ ಇಂಡಿಯಾ ವಿಮಾನದ ಊಟದಲ್ಲಿ ಬ್ಲೇಡ್​ ಪತ್ತೆ: ದಂಗಾದ ಪ್ರಯಾಣಿಕ

ಏರ್ ಇಂಡಿಯಾ ವಿಮಾನದಲ್ಲಿ ನೀಡಲಾದ ಊಟದಲ್ಲಿ ಲೋಹದ ತುಂಡು ಒಂದು ಕಾಣಿಸಿದ್ದು, ಅದು ಬ್ಲೇಡ್‌ನಂತೆ ಕಾಣುತ್ತಿತ್ತು. ಕೆಲವು ಸೆಕೆಂಡ್​ ಅದನ್ನು ಜಗಿದ ನಂತರವೇ ನನಗೆ ಅದರ ಅನುಭವವಾಯಿತು. ಅದೃಷ್ಟವಶಾತ್, ಯಾವುದೇ ಹಾನಿ ಸಂಭವಿಸಿಲ್ಲ ಎಂದು ಪ್ರಯಾಣಿಕ ಹೇಳಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಿದ ಏರ್ ಇಂಡಿಯಾ ಊಟದಲ್ಲಿ ಬ್ಲೇಡ್​ ಪತ್ತೆ ಆಗಿರುವುದನ್ನು ದೃಢಪಡಿಸಿದೆ.

Air India: ಬೆಂಗಳೂರಿಂದ ತೆರಳುತ್ತಿದ್ದ ಏರ್​​ ಇಂಡಿಯಾ ವಿಮಾನದ ಊಟದಲ್ಲಿ ಬ್ಲೇಡ್​ ಪತ್ತೆ: ದಂಗಾದ ಪ್ರಯಾಣಿಕ
ಬೆಂಗಳೂರಿಂದ ತೆರಳುತ್ತಿದ್ದ ಏರ್​​ ಇಂಡಿಯಾ ವಿಮಾನದ ಊಟದಲ್ಲಿ ಬ್ಲೇಡ್​ ಪತ್ತೆ: ದಂಗಾದ ಪ್ರಯಾಣಿಕ
ಹರೀಶ್ ಜಿ.ಆರ್​.
| Edited By: |

Updated on: Jun 17, 2024 | 4:57 PM

Share

ದೆಹಲಿ, ಜೂನ್​ 17: ಏರ್​​ ಇಂಡಿಯಾ ವಿಮಾನದಲ್ಲಿ (Air India) ನೀಡಲಾಗುವ ಊಟದಲ್ಲಿ ಬ್ಲೇಡ್ (blade)​ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಊಟದಲ್ಲಿ ಪತ್ತೆಯಾದ ಬ್ಲೇಡ್​ ಕಂಡು ಪ್ರಯಾಣಿಕರು ಶಾಕ್​ ಆಗಿದ್ದಾರೆ. ಜೂನ್​​ 9ರಂದು ಬೆಂಗಳೂರಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ವಿಮಾನದಲ್ಲಿ ಘಟನೆ ನಡೆದಿದೆ. ಸದ್ಯ ಏರ್‌ಇಂಡಿಯಾ ವಿಮಾನ ಸಂಸ್ಥೆಗೆ ಪ್ರಯಾಣಿಕ ದೂರು ನೀಡಿದ್ದು, ಏರ್‌ ಇಂಡಿಯಾ ವಿಮಾನ‌ಯಾನ ಸಂಸ್ಥೆಯಿಂದ ತನಿಖೆ ನಡೆದಿದೆ.

ಏರ್ ಇಂಡಿಯಾ ವಿಮಾನದಲ್ಲಿ ನೀಡಲಾದ ಊಟದಲ್ಲಿ ಲೋಹದ ತುಂಡು ಒಂದು ಕಾಣಿಸಿದ್ದು, ಅದು ಬ್ಲೇಡ್‌ನಂತೆ ಕಾಣುತ್ತಿತ್ತು. ಕೆಲವು ಸೆಕೆಂಡ್​ ಅದನ್ನು ಜಗಿದ ನಂತರವೇ ನನಗೆ ಅದರ ಅನುಭವವಾಯಿತು. ಅದೃಷ್ಟವಶಾತ್, ಯಾವುದೇ ಹಾನಿ ಸಂಭವಿಸಿಲ್ಲ. ಆದರೆ ಒಂದು ವೇಳೆ ಮಗುವಿಗೆ ತಿನ್ನಿಸುವ ಆಹಾರದಲ್ಲಿ ಈ ರೀತಯಾಗಿ ಲೋಹದ ತುಂಡು ಅಥವಾ ಬ್ಲೇಡ್ ಇದ್ದರೆ ಏನು ಮಾಡುವುದು ಎಂದು ಪ್ರಯಾಣಿಕರು ಫೋಟೋ ಸಹಿತ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಸದ್ಯ ಘಟನೆ ಬಗ್ಗೆ ತನಿಖೆ ನಡೆಸಿದ ಏರ್ ಇಂಡಿಯಾ ನಮ್ಮ ವಿಮಾನವೊಂದರಲ್ಲಿ ಪ್ರಯಾಣಿಕರಿಗೆ ನೀಡಲಾದ ಊಟದಲ್ಲಿ ಬ್ಲೇಡ್​ ಪತ್ತೆ ಆಗಿರುವುದನ್ನು ದೃಢಪಡಿಸಿದೆ.

ಇದನ್ನೂ ಓದಿ: ಐಸ್​ಕ್ರೀಂನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ, ಕಂಪನಿಯ ಪರವಾನಗಿ ರದ್ದು

ತನಿಖೆ ಮಾಡಲಾಗಿದ್ದು, ಇದು ನಮ್ಮ ಅಡುಗೆದಾರರ ಸೌಲಭ್ಯಗಳಲ್ಲಿ ಬಳಸಲಾದ ತರಕಾರಿ ಸಂಸ್ಕರಣಾ ಯಂತ್ರದಿಂದ ಬಂದಿದೆ ಎಂದು ತಿಳಿದುಬಂದಿದೆ. ನಾವು ಯಾವುದೇ ಗಟ್ಟಿಯಾದ ತರಕಾರಿಯನ್ನು ಕತ್ತರಿಸಿದ ನಂತರ ಎಲ್ಲವನ್ನು ಪರೀಕ್ಷಿಸಲಾಗುವುದು ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ