Air India: ಬೆಂಗಳೂರಿಂದ ತೆರಳುತ್ತಿದ್ದ ಏರ್​​ ಇಂಡಿಯಾ ವಿಮಾನದ ಊಟದಲ್ಲಿ ಬ್ಲೇಡ್​ ಪತ್ತೆ: ದಂಗಾದ ಪ್ರಯಾಣಿಕ

ಏರ್ ಇಂಡಿಯಾ ವಿಮಾನದಲ್ಲಿ ನೀಡಲಾದ ಊಟದಲ್ಲಿ ಲೋಹದ ತುಂಡು ಒಂದು ಕಾಣಿಸಿದ್ದು, ಅದು ಬ್ಲೇಡ್‌ನಂತೆ ಕಾಣುತ್ತಿತ್ತು. ಕೆಲವು ಸೆಕೆಂಡ್​ ಅದನ್ನು ಜಗಿದ ನಂತರವೇ ನನಗೆ ಅದರ ಅನುಭವವಾಯಿತು. ಅದೃಷ್ಟವಶಾತ್, ಯಾವುದೇ ಹಾನಿ ಸಂಭವಿಸಿಲ್ಲ ಎಂದು ಪ್ರಯಾಣಿಕ ಹೇಳಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಿದ ಏರ್ ಇಂಡಿಯಾ ಊಟದಲ್ಲಿ ಬ್ಲೇಡ್​ ಪತ್ತೆ ಆಗಿರುವುದನ್ನು ದೃಢಪಡಿಸಿದೆ.

Air India: ಬೆಂಗಳೂರಿಂದ ತೆರಳುತ್ತಿದ್ದ ಏರ್​​ ಇಂಡಿಯಾ ವಿಮಾನದ ಊಟದಲ್ಲಿ ಬ್ಲೇಡ್​ ಪತ್ತೆ: ದಂಗಾದ ಪ್ರಯಾಣಿಕ
ಬೆಂಗಳೂರಿಂದ ತೆರಳುತ್ತಿದ್ದ ಏರ್​​ ಇಂಡಿಯಾ ವಿಮಾನದ ಊಟದಲ್ಲಿ ಬ್ಲೇಡ್​ ಪತ್ತೆ: ದಂಗಾದ ಪ್ರಯಾಣಿಕ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jun 17, 2024 | 4:57 PM

ದೆಹಲಿ, ಜೂನ್​ 17: ಏರ್​​ ಇಂಡಿಯಾ ವಿಮಾನದಲ್ಲಿ (Air India) ನೀಡಲಾಗುವ ಊಟದಲ್ಲಿ ಬ್ಲೇಡ್ (blade)​ ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಊಟದಲ್ಲಿ ಪತ್ತೆಯಾದ ಬ್ಲೇಡ್​ ಕಂಡು ಪ್ರಯಾಣಿಕರು ಶಾಕ್​ ಆಗಿದ್ದಾರೆ. ಜೂನ್​​ 9ರಂದು ಬೆಂಗಳೂರಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ವಿಮಾನದಲ್ಲಿ ಘಟನೆ ನಡೆದಿದೆ. ಸದ್ಯ ಏರ್‌ಇಂಡಿಯಾ ವಿಮಾನ ಸಂಸ್ಥೆಗೆ ಪ್ರಯಾಣಿಕ ದೂರು ನೀಡಿದ್ದು, ಏರ್‌ ಇಂಡಿಯಾ ವಿಮಾನ‌ಯಾನ ಸಂಸ್ಥೆಯಿಂದ ತನಿಖೆ ನಡೆದಿದೆ.

ಏರ್ ಇಂಡಿಯಾ ವಿಮಾನದಲ್ಲಿ ನೀಡಲಾದ ಊಟದಲ್ಲಿ ಲೋಹದ ತುಂಡು ಒಂದು ಕಾಣಿಸಿದ್ದು, ಅದು ಬ್ಲೇಡ್‌ನಂತೆ ಕಾಣುತ್ತಿತ್ತು. ಕೆಲವು ಸೆಕೆಂಡ್​ ಅದನ್ನು ಜಗಿದ ನಂತರವೇ ನನಗೆ ಅದರ ಅನುಭವವಾಯಿತು. ಅದೃಷ್ಟವಶಾತ್, ಯಾವುದೇ ಹಾನಿ ಸಂಭವಿಸಿಲ್ಲ. ಆದರೆ ಒಂದು ವೇಳೆ ಮಗುವಿಗೆ ತಿನ್ನಿಸುವ ಆಹಾರದಲ್ಲಿ ಈ ರೀತಯಾಗಿ ಲೋಹದ ತುಂಡು ಅಥವಾ ಬ್ಲೇಡ್ ಇದ್ದರೆ ಏನು ಮಾಡುವುದು ಎಂದು ಪ್ರಯಾಣಿಕರು ಫೋಟೋ ಸಹಿತ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಸದ್ಯ ಘಟನೆ ಬಗ್ಗೆ ತನಿಖೆ ನಡೆಸಿದ ಏರ್ ಇಂಡಿಯಾ ನಮ್ಮ ವಿಮಾನವೊಂದರಲ್ಲಿ ಪ್ರಯಾಣಿಕರಿಗೆ ನೀಡಲಾದ ಊಟದಲ್ಲಿ ಬ್ಲೇಡ್​ ಪತ್ತೆ ಆಗಿರುವುದನ್ನು ದೃಢಪಡಿಸಿದೆ.

ಇದನ್ನೂ ಓದಿ: ಐಸ್​ಕ್ರೀಂನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ, ಕಂಪನಿಯ ಪರವಾನಗಿ ರದ್ದು

ತನಿಖೆ ಮಾಡಲಾಗಿದ್ದು, ಇದು ನಮ್ಮ ಅಡುಗೆದಾರರ ಸೌಲಭ್ಯಗಳಲ್ಲಿ ಬಳಸಲಾದ ತರಕಾರಿ ಸಂಸ್ಕರಣಾ ಯಂತ್ರದಿಂದ ಬಂದಿದೆ ಎಂದು ತಿಳಿದುಬಂದಿದೆ. ನಾವು ಯಾವುದೇ ಗಟ್ಟಿಯಾದ ತರಕಾರಿಯನ್ನು ಕತ್ತರಿಸಿದ ನಂತರ ಎಲ್ಲವನ್ನು ಪರೀಕ್ಷಿಸಲಾಗುವುದು ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಮೈಸೂರಲ್ಲಿಂದು ಬೆಳ್ಳಂಬೆಳಗ್ಗೆಯೇ ಮಳೆ, ಮಕ್ಕಳನ್ನು ಶಾಲೆಗೆ ಕಳಿಸಲು ತಾಪತ್ರಯ
ಮೈಸೂರಲ್ಲಿಂದು ಬೆಳ್ಳಂಬೆಳಗ್ಗೆಯೇ ಮಳೆ, ಮಕ್ಕಳನ್ನು ಶಾಲೆಗೆ ಕಳಿಸಲು ತಾಪತ್ರಯ
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
Daily Devotional: ಬ್ರಾಹ್ಮೀ ಮುಹೂರ್ತದ ಮಹತ್ವ ತಿಳಿದುಕೊಳ್ಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
‘ಎಲ್ಲರಿಗೂ ಹೊಟ್ಟೆ ಉರಿ ಸರ್​’: ದರ್ಶನ್​ ನೋಡಲು ಬಂದ ಅಭಿಮಾನಿಯ ಮಾತು ಕೇಳಿ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ