AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಡಿವಾಳ ವಿಧಿವಿಜ್ಞಾನ ಲ್ಯಾಬ್​ನಲ್ಲಿ ಸ್ಫೋಟ, 5 ವಿಜ್ಞಾನಿಗಳಿಗೆ ಗಾಯ

ಬೆಂಗಳೂರು: ಮಡಿವಾಳದ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಡೆಟೋನೇಟರ್ ಸ್ಫೋಟಗೊಂಡಿದೆ. 9 ಜೀವಂತ ಡೆಟೋನೇಟರ್​ಗಳ ಪರಿಶೀಲನೆ ವೇಳೆ ಈ ಸ್ಫೋಟ ಸಂಭವಿಸಿದ್ದು, 9 ಜೀವಂತ ಡೆಟೋನೇಟರ್​ಗಳ ಪೈಕಿ 1 ಡೆಟೋನೇಟರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಎಫ್​ಎಸ್​ಎಲ್​ನಲ್ಲಿದ್ದ ಐವರು ವಿಜ್ಞಾನಿಗಳಿಗೆ ಗಾಯಗಳಾಗಿವೆ. ಗಾಯಗೊಂಡ ವಿಜ್ಞಾನಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಆಗ್ನೇಯ ವಿಭಾಗದ ಡಿಸಿಪಿ ಇಶಾಪಂತ್ ಭೇಟಿ ನೀಡಿದ್ದು, ಮಡಿವಾಳ ಎಸಿಪಿ ಕರಿಬಸವನಗೌಡ ಹಾಗೂ ಪೊಲೀಸರು ದೌಡಾಯಿಸಿದ್ದಾರೆ. 25 ಗ್ರಾಂನಷ್ಟು ಸ್ಪೋಟಕ: […]

ಮಡಿವಾಳ ವಿಧಿವಿಜ್ಞಾನ ಲ್ಯಾಬ್​ನಲ್ಲಿ ಸ್ಫೋಟ, 5 ವಿಜ್ಞಾನಿಗಳಿಗೆ ಗಾಯ
ಸಾಧು ಶ್ರೀನಾಥ್​
|

Updated on:Nov 29, 2019 | 5:47 PM

Share

ಬೆಂಗಳೂರು: ಮಡಿವಾಳದ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಡೆಟೋನೇಟರ್ ಸ್ಫೋಟಗೊಂಡಿದೆ. 9 ಜೀವಂತ ಡೆಟೋನೇಟರ್​ಗಳ ಪರಿಶೀಲನೆ ವೇಳೆ ಈ ಸ್ಫೋಟ ಸಂಭವಿಸಿದ್ದು, 9 ಜೀವಂತ ಡೆಟೋನೇಟರ್​ಗಳ ಪೈಕಿ 1 ಡೆಟೋನೇಟರ್ ಸ್ಫೋಟಗೊಂಡಿದೆ.

ಘಟನೆಯಲ್ಲಿ ಎಫ್​ಎಸ್​ಎಲ್​ನಲ್ಲಿದ್ದ ಐವರು ವಿಜ್ಞಾನಿಗಳಿಗೆ ಗಾಯಗಳಾಗಿವೆ. ಗಾಯಗೊಂಡ ವಿಜ್ಞಾನಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಆಗ್ನೇಯ ವಿಭಾಗದ ಡಿಸಿಪಿ ಇಶಾಪಂತ್ ಭೇಟಿ ನೀಡಿದ್ದು, ಮಡಿವಾಳ ಎಸಿಪಿ ಕರಿಬಸವನಗೌಡ ಹಾಗೂ ಪೊಲೀಸರು ದೌಡಾಯಿಸಿದ್ದಾರೆ.

25 ಗ್ರಾಂನಷ್ಟು ಸ್ಪೋಟಕ: ಕೆಮಿಸ್ಟ್ರಿ ವಿಭಾಗದಲ್ಲಿ 25 ಗ್ರಾಂ ಸ್ಪೋಟಕ ಸಿಡಿದಿದೆ. ಇದರ ಪರಿಣಾಮ ದಲಾಯಿ ಸೇರಿದಂತೆ ಅಲ್ಲಿದ್ದವರಿಗೆ ಗಾಯಾವಾಗಿದೆ. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಡಿಜಿಪಿ ಪರಶಿವಮೂರ್ತಿ ತಿಳಿಸಿದ್ದಾರೆ.

ಘಟನೆಯಲ್ಲಿ ಸೀನಿಯರ್ ಸೈಂಟಿಫಿಕ್ ಅಫೀಸರ್ ಬೆರಳಿಗೆ ಗಾಯ: ರಾಯಚೂರು ಪಶ್ಚಿಮ‌ವಲಯದಿಂದ ಸ್ಪೋಟಕ ಬಂದಿತ್ತು. ಕೆಮಿಸ್ಟ್ರಿ ಲ್ಯಾಬ್ ನಲ್ಲಿ ಅನಾಲಿಸಿಸ್ ಮಾಡವಾಗ ಘಟನೆ ನಡೆದಿದೆ. ವಾಣಿ, ನವ್ಯ, ವಿಶ್ವನಾಥ್, ಶ್ರೀನಾಥ್, ಆಂಥೋಣಿ ಪ್ರಭು ದಲಾಯತ್, ಐವರು ವಿಜ್ಞಾನಿಗಳು ಸೇರಿದಂತೆ 7 ಜನರಿಗೆ ಗಾಯಗಳಾಗಿವೆ. ಇದೇ ಮೊದಲ ಬಾರಿ ಇಂತಹ ಘಟನೆ ನಡೆದಿದೆ.

ಸೀನಿಯರ್ ಸೈಂಟಿಫಿಕ್ ಅಫೀಸರ್ ಶ್ರೀನಾಥ್ ಬೆರಳಿಗೆ ಗಾಯವಾಗಿದೆ. ಸ್ಫೋಟಕ ಟಿಎಟಿಪಿ (ಟಾಯಸಿಟನ್ ಟ್ರಯಾಪೆರಾಸೈಟ್) ಇರಬಹುದೆಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ. ಹೆಚ್ಚಿನ ಮಾಹಿತಿಗಾಗಿ ತನಿಖೆ ನಡೆಸಬೇಕಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದ್ದಾರೆ.

Published On - 3:43 pm, Fri, 29 November 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ