AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಪೋಟ; 6 ಮಂದಿಗೆ ಗಾಯ

ನಿಲ್ದಾಣದ ಎರಡನೇ ಟರ್ಮಿನಲ್​ ನಿರ್ಮಾಣ ಕಾಮಗಾರಿ ಕೆಲಸ ಕೆಲ ದಿನಗಳಿಂದ ನಡೆಯುತ್ತಿದೆ. ಹಾಗಾಗಿ ಕೆಳ ಸೇತುವೆಯಲ್ಲಿ ರಾಸಾಯನಿಕ ಡಬ್ಬಿಗಳನ್ನು, ಸಲಕರಣೆಗಳನ್ನು ಇಡಲಾಗಿತ್ತು. ನಿನ್ನೆ (ಭಾನುವಾರ) ರಾಸಾಯನಿಕ ಡಬ್ಬಿಗಳ ಸ್ಟೋಟಗೊಂಡ ಪರಿಣಾಮ ಘಟನೆ ಸಂಭವಿಸಿದೆ.

ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಪೋಟ; 6 ಮಂದಿಗೆ ಗಾಯ
ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಪೋಟ
TV9 Web
| Edited By: |

Updated on:Jun 07, 2021 | 11:48 AM

Share

ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಟೋಟ ಸಂಭವಿಸಿದೆ. ಘಟನೆಯಲ್ಲಿ 6 ಜನ ಕೆಲಸಗಾರರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿಲ್ದಾಣದ ಎರಡನೇ ಟರ್ಮಿನಲ್​ ನಿರ್ಮಾಣ ಕಾಮಗಾರಿ ಕೆಲಸ ಕೆಲ ದಿನಗಳಿಂದ ನಡೆಯುತ್ತಿದೆ. ಹಾಗಾಗಿ ಕೆಳ ಸೇತುವೆಯಲ್ಲಿ ರಾಸಾಯನಿಕ ಡಬ್ಬಿಗಳನ್ನು, ಸಲಕರಣೆಗಳನ್ನು ಇಡಲಾಗಿತ್ತು. ನಿನ್ನೆ (ಭಾನುವಾರ) ರಾಸಾಯನಿಕ ಡಬ್ಬಿಗಳ ಸ್ಟೋಟಗೊಂಡ ಪರಿಣಾಮ ಘಟನೆ ಸಂಭವಿಸಿದೆ. ಕೆಲಸ ಮಾಡುತ್ತಿದ್ದ 6 ಮಂದಿ ಕಾರ್ಮಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. 

ಗಾಯಾಳುಗಳು ಅವಿನಾಶ್​, ಸಿರಾಜ್​, ಪ್ರಶಾಂತ್​, ಗೌತಮ್​, ಅಜಯ್​ಕುಮಾರ್​ ಮತ್ತು ನಾಗೇಶ್​ರಾವ್​ ಎಂದು ತಿಳಿದು ಬಂದಿದೆ. ಸ್ಪೋಟವಾದ ಸಂದರ್ಭದಲ್ಲಿ ಕಾರ್ಮಿಕರ ಕೂಗು ಕೇಳಿ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಬಂದು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಹೊತ್ತಿಉರಿಯುತ್ತಿದ್ದ ಬೆಂಕಿಯನ್ನು ಆರಿಸಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆ ದಾಖಲು ಮಾಡಲಾಗಿದೆ. ಸಿರಾಜ್​ ಮತ್ತು ಅವಿನಾಶ್​ಗೆ ಶೇ.40ರಷ್ಟು ಸುಟ್ಟಗಾಯಗಳಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ.

ಬೆಂಗಳೂರಿನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ‌ನಿಲ್ಥಾಣಕ್ಕೆ ಆಗಮಿಸುವ ವಾಹನಗಳು ಕಿರಿದಾದ ರಸ್ತೆಯಲ್ಲಿಯೇ ಸಂಚರಿಸುತ್ತಿದ್ದ ಕಾರಣ ಏರ್ಪೋಟ್ ಆವರಣದಲ್ಲಿ 5 ಪಥಗಳ ರಸ್ತೆ ಅಗಲೀಕರಣ ಕಾಮಗಾರಿ ಭರದಿಂದ ನಡೆಯುತ್ತಿದೆ. ಈ ವೇಳೆ ರಸ್ತೆಗೆ ಬಿಳಿ ಪಟ್ಟಿಗಳನ್ನು ಹಚ್ಚಲು ಕಾರ್ಮಿಕರು ನಿನ್ನೆ ಕೆಲಸಕ್ಕೆ ಬಂದಿದ್ದರು. ಬಳಿಯ ಬೇಕಾದ ಬಣ್ಣವನ್ನು ರಾಸಾಯನಿಕಗಳ ಜತೆಗೆ ಮಿಶ್ರಣ ಮಾಡಿ ಸಿಲೆಂಡ್​ ಬಳಸಿ ಕಾಯಿಸುತ್ತಿದ್ದರು, ಈ ವೇಳೆ ಗ್ಯಾಸ್​ ಸೋರಿಕೆಯಾಗಿ ಸಿಲಿಂಡರ್​ ಸ್ಟೋಟಗೊಂಡಿದೆ.

ಇದನ್ನೂ ಓದಿ:

ಬಿಳಿಕಲ್ಲು ಕ್ವಾರಿಯಲ್ಲಿ ಸ್ಪೋಟ: ಕಾರ್ಮಿಕ ದುರ್ಮರಣ

ದಾವಣಗೆರೆ ಕಾಶೀಪುರ ಬಳಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 8 ಜಿಲೆಟಿನ್ ಕಡ್ಡಿ, ಎಲೆಕ್ಟ್ರಾನಿಕ್ ಡಿಟೋನೇಟರ್ ವಶ

Published On - 11:37 am, Mon, 7 June 21

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ