AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಪೋಟ; 6 ಮಂದಿಗೆ ಗಾಯ

ನಿಲ್ದಾಣದ ಎರಡನೇ ಟರ್ಮಿನಲ್​ ನಿರ್ಮಾಣ ಕಾಮಗಾರಿ ಕೆಲಸ ಕೆಲ ದಿನಗಳಿಂದ ನಡೆಯುತ್ತಿದೆ. ಹಾಗಾಗಿ ಕೆಳ ಸೇತುವೆಯಲ್ಲಿ ರಾಸಾಯನಿಕ ಡಬ್ಬಿಗಳನ್ನು, ಸಲಕರಣೆಗಳನ್ನು ಇಡಲಾಗಿತ್ತು. ನಿನ್ನೆ (ಭಾನುವಾರ) ರಾಸಾಯನಿಕ ಡಬ್ಬಿಗಳ ಸ್ಟೋಟಗೊಂಡ ಪರಿಣಾಮ ಘಟನೆ ಸಂಭವಿಸಿದೆ.

ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಪೋಟ; 6 ಮಂದಿಗೆ ಗಾಯ
ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಪೋಟ
TV9 Web
| Edited By: |

Updated on:Jun 07, 2021 | 11:48 AM

Share

ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಟೋಟ ಸಂಭವಿಸಿದೆ. ಘಟನೆಯಲ್ಲಿ 6 ಜನ ಕೆಲಸಗಾರರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿಲ್ದಾಣದ ಎರಡನೇ ಟರ್ಮಿನಲ್​ ನಿರ್ಮಾಣ ಕಾಮಗಾರಿ ಕೆಲಸ ಕೆಲ ದಿನಗಳಿಂದ ನಡೆಯುತ್ತಿದೆ. ಹಾಗಾಗಿ ಕೆಳ ಸೇತುವೆಯಲ್ಲಿ ರಾಸಾಯನಿಕ ಡಬ್ಬಿಗಳನ್ನು, ಸಲಕರಣೆಗಳನ್ನು ಇಡಲಾಗಿತ್ತು. ನಿನ್ನೆ (ಭಾನುವಾರ) ರಾಸಾಯನಿಕ ಡಬ್ಬಿಗಳ ಸ್ಟೋಟಗೊಂಡ ಪರಿಣಾಮ ಘಟನೆ ಸಂಭವಿಸಿದೆ. ಕೆಲಸ ಮಾಡುತ್ತಿದ್ದ 6 ಮಂದಿ ಕಾರ್ಮಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. 

ಗಾಯಾಳುಗಳು ಅವಿನಾಶ್​, ಸಿರಾಜ್​, ಪ್ರಶಾಂತ್​, ಗೌತಮ್​, ಅಜಯ್​ಕುಮಾರ್​ ಮತ್ತು ನಾಗೇಶ್​ರಾವ್​ ಎಂದು ತಿಳಿದು ಬಂದಿದೆ. ಸ್ಪೋಟವಾದ ಸಂದರ್ಭದಲ್ಲಿ ಕಾರ್ಮಿಕರ ಕೂಗು ಕೇಳಿ ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಬಂದು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಹೊತ್ತಿಉರಿಯುತ್ತಿದ್ದ ಬೆಂಕಿಯನ್ನು ಆರಿಸಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆ ದಾಖಲು ಮಾಡಲಾಗಿದೆ. ಸಿರಾಜ್​ ಮತ್ತು ಅವಿನಾಶ್​ಗೆ ಶೇ.40ರಷ್ಟು ಸುಟ್ಟಗಾಯಗಳಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದಾರೆ.

ಬೆಂಗಳೂರಿನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ‌ನಿಲ್ಥಾಣಕ್ಕೆ ಆಗಮಿಸುವ ವಾಹನಗಳು ಕಿರಿದಾದ ರಸ್ತೆಯಲ್ಲಿಯೇ ಸಂಚರಿಸುತ್ತಿದ್ದ ಕಾರಣ ಏರ್ಪೋಟ್ ಆವರಣದಲ್ಲಿ 5 ಪಥಗಳ ರಸ್ತೆ ಅಗಲೀಕರಣ ಕಾಮಗಾರಿ ಭರದಿಂದ ನಡೆಯುತ್ತಿದೆ. ಈ ವೇಳೆ ರಸ್ತೆಗೆ ಬಿಳಿ ಪಟ್ಟಿಗಳನ್ನು ಹಚ್ಚಲು ಕಾರ್ಮಿಕರು ನಿನ್ನೆ ಕೆಲಸಕ್ಕೆ ಬಂದಿದ್ದರು. ಬಳಿಯ ಬೇಕಾದ ಬಣ್ಣವನ್ನು ರಾಸಾಯನಿಕಗಳ ಜತೆಗೆ ಮಿಶ್ರಣ ಮಾಡಿ ಸಿಲೆಂಡ್​ ಬಳಸಿ ಕಾಯಿಸುತ್ತಿದ್ದರು, ಈ ವೇಳೆ ಗ್ಯಾಸ್​ ಸೋರಿಕೆಯಾಗಿ ಸಿಲಿಂಡರ್​ ಸ್ಟೋಟಗೊಂಡಿದೆ.

ಇದನ್ನೂ ಓದಿ:

ಬಿಳಿಕಲ್ಲು ಕ್ವಾರಿಯಲ್ಲಿ ಸ್ಪೋಟ: ಕಾರ್ಮಿಕ ದುರ್ಮರಣ

ದಾವಣಗೆರೆ ಕಾಶೀಪುರ ಬಳಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 8 ಜಿಲೆಟಿನ್ ಕಡ್ಡಿ, ಎಲೆಕ್ಟ್ರಾನಿಕ್ ಡಿಟೋನೇಟರ್ ವಶ

Published On - 11:37 am, Mon, 7 June 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?