AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namma Metro ಮೆಟ್ರೋ ಪ್ರಯಾಣಿಕರ ಗಮನಕ್ಕೆ.. ಮೆಟ್ರೋ ರೈಲಿನಲ್ಲಿ ಶೀಘ್ರವೇ ಟೋಕನ್ ವ್ಯವಸ್ಥೆ ಶುರು

ಸ್ಮಾರ್ಟ್ ಕಾರ್ಡ್ ಕಡ್ಡಾಯದಿಂದ ಆದಾಯಕ್ಕೆ ಭಾರಿ ಹೊಡೆತ ಬಿದ್ದಿದೆ. ಹೀಗಾಗಿ ಕೊವಿಡ್ ಆತಂಕದಿಂದ ಸ್ಥಗಿತಗೊಂಡಿದ್ದ ಟೋಕನ್ ವ್ಯವಸ್ಥೆಯನ್ನು ಮತ್ತೆ ಆರಂಭಿಸಲು BMRCL ವ್ಯವಸ್ಥೆ ಮಾಡಿಕೊಳ್ಳುತ್ತಿದೆ.

Namma Metro ಮೆಟ್ರೋ ಪ್ರಯಾಣಿಕರ ಗಮನಕ್ಕೆ.. ಮೆಟ್ರೋ ರೈಲಿನಲ್ಲಿ ಶೀಘ್ರವೇ ಟೋಕನ್ ವ್ಯವಸ್ಥೆ ಶುರು
ನಮ್ಮ ಮೆಟ್ರೋ (ಸಾಂಕೇತಿಕ ಚಿತ್ರ)
TV9 Web
| Updated By: ಆಯೇಷಾ ಬಾನು|

Updated on: Jun 30, 2021 | 11:51 AM

Share

ಬೆಂಗಳೂರು: ಕೊರೊನಾ 2ನೇ ಅಲೆ ನಿಯಂತ್ರಣಕ್ಕೆ ಕರ್ನಾಟಕದಲ್ಲಿ ಹೇರಲಾಗಿದ್ದ ಲಾಕ್ಡೌನ್ ಹಂತಹಂತವಾಗಿ ಸಡಿಲಿಕೆ ಮಾಡಲಾಗುತ್ತಿದೆ. ಸದ್ಯ ಸುಮಾರು 2 ತಿಂಗಳ ನಂತರ ಮೆಟ್ರೋ ಸಂಚಾರಕ್ಕೆ ಸರ್ಕಾರ ಅನುಮತಿ ನೀಡಿತ್ತು. ಆದ್ರೆ ಟೋಕನ್ ವ್ಯವಸ್ಥೆ ಸ್ಥಗಿತಗೊಳಿಸಲಾಗಿತ್ತು. ಹೋಗಾಗಿ ಕಾರ್ಡ್ ಇಲ್ಲದವರು ಮೆಟ್ರೋದಲ್ಲಿ ಸಂಚರಿಸುವುದು ಕಷ್ಟವಾಗುತ್ತಿತ್ತು. ಸದ್ಯ ಈಗ ಮತ್ತೆ ಮೆಟ್ರೋ ರೈಲಿನಲ್ಲಿ ಟೋಕನ್ ವ್ಯವಸ್ಥೆ ಆರಂಭಿಸಲು ಚಿಂತನೆ ನಡೆಯುತ್ತಿದೆ.

ಸ್ಮಾರ್ಟ್ ಕಾರ್ಡ್ ಕಡ್ಡಾಯದಿಂದ ಆದಾಯಕ್ಕೆ ಭಾರಿ ಹೊಡೆತ ಬಿದ್ದಿದೆ. ಹೀಗಾಗಿ ಕೊವಿಡ್ ಆತಂಕದಿಂದ ಸ್ಥಗಿತಗೊಂಡಿದ್ದ ಟೋಕನ್ ವ್ಯವಸ್ಥೆಯನ್ನು ಮತ್ತೆ ಆರಂಭಿಸಲು BMRCL ವ್ಯವಸ್ಥೆ ಮಾಡಿಕೊಳ್ಳುತ್ತಿದೆ. ಕೊವಿಡ್ ಪೂರ್ವದಲ್ಲಿ ನಿತ್ಯ 5 ಲಕ್ಷ ಜನರು ಪ್ರಯಾಣ ಮಾಡುತ್ತಿದ್ದರು. ಆದ್ರೆ 2021ರ ಮಾರ್ಚ್, ಏಪ್ರಿಲ್ನಲ್ಲಿ ಸರಾಸರಿ 1.5 ಲಕ್ಷ ಜನ ಮಾತ್ರ ಪ್ರಯಾಣಿಸಿದ್ದಾರೆ. ನಿನ್ನೆ ಕೇವಲ 59 ಸಾವಿರ ಜನರಷ್ಟೇ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಪ್ರಯಾಣಿಕರ ಸಂಖ್ಯೆ ಕುಸಿತಕ್ಕೆ ‘ಸ್ಮಾರ್ಟ್ ಕಾರ್ಡ್’ ಕಾರಣವಾಗುತ್ತಿದೆ ಹೀಗಾಗಿ ಸದ್ಯದಲ್ಲೇ ಟೋಕನ್ ವ್ಯವಸ್ಥೆ ಮಾಡಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.

ಕೊವಿಡ್ ಪೂರ್ವದಲ್ಲಿ ಶೇ40% ಪ್ರಯಾಣಿಕರು ಟೋಕನ್ ಬಳಸಿಯೇ ಪ್ರಯಾಣಿಸುತ್ತಿದ್ರು. ಸದ್ಯ ಟೋಕನ್ ಇಲ್ಲದೆ ಇರುವ ಕಾರಣ ಸ್ಮಾರ್ಟ್ ಕಾರ್ಡ್ಗೆ 150 ರೂಪಾಯಿ ನೀಡಿ ಪ್ರಯಾಣಿಸಬೇಕಿದೆ. ಹೀಗಾಗಿ ಬೆಂಗಳೂರಿಗೆ ಬಂದು ಹೋಗುವ ಪ್ರಯಾಣಿಕರು ಮೆಟ್ರೋದತ್ತ ಸುಳಿಯುತ್ತಿಲ್ಲ. ಸದ್ಯ ಮೆಟ್ರೋದಲ್ಲಿ 50% ರಷ್ಟು ಜನರು ಸಂಚರಿಸಲು ಮಾತ್ರ ಅವಕಾಶ ನೀಡಲಾಗಿದೆ. ಮೂರನೇ ಹಂತದ ಅನ್ಲಾಕ್ನಲ್ಲಿ ದಿನವಿಡೀ ಮೆಟ್ರೋ ಸಂಚಾರ ಆರಂಭವಾಗುವ ಸಾಧ್ಯತೆ ಇದೆ.

ಮೆಟ್ರೋ ಬೆಳಗ್ಗೆ 7ರಿಂದ 11ಗಂಟೆವರೆಗೆ ಹಾಗೂ ಮಧ್ಯಾಹ್ನ 3ರಿಂದ ಸಂಜೆ 6 ಗಂಟೆಯವರೆಗೆ ಪ್ರತಿ 5ನಿಮಿಷಕ್ಕೆ ಒಂದರಂತೆ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಸಂಚಾರ ನಡೆಸುತ್ತಿದೆ. ಮೆಟ್ರೋ ನಿಲ್ದಾಣದಲ್ಲಿ ದೇಹದ ಉಷ್ಣಾಂಶ ತಪಾಸಣೆ, ಹ್ಯಾಂಡ್ ಸ್ಯಾನಿಟೈಸ್ ಕಡ್ಡಾಯ. ಮುಖಗವಸು ಧರಿಸಿದವರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು ಹಾಗೂ ಎಲ್ಲಾ ಸಂದರ್ಭದಲ್ಲೂ ದೈಹಿಕ ಅಂತರ ಪಾಲಿಸಲೇಬೇಕು. ಹಳದಿ ಬಣ್ಣದ ಪಟ್ಟಿಯಲ್ಲಿ ಮಾತ್ರ ಕುಳಿತು ಅಥವಾ ನಿಂತು ಪ್ರಯಾಣ ಮಾಡಬೇಕಿದ್ದು, ವಾರಾಂತ್ಯದ ಕರ್ಫ್ಯೂ ನಿಮಿತ್ತ ಶನಿವಾರ, ಭಾನುವಾರ ಮೆಟ್ರೋ ಸಂಚಾರ ಇರುವುದಿಲ್ಲ.

ಇದನ್ನೂ ಓದಿ: ನಮ್ಮ ಮೆಟ್ರೋ ಹೆಸರು ಬದಲಿಸುವಂತೆ ಸಿಎಂ ಯಡಿಯೂರಪ್ಪಗೆ ನಂಜಾವಧೂತ ಸ್ವಾಮೀಜಿ ಮನವಿ

ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ವಿಷ್ಣು ಸಮಾಧಿ ಮರು ನಿರ್ಮಾಣಕ್ಕೆ ಬಾಲಣ್ಣ ಪುತ್ರಿ ಗೀತಾ ಜಾಗ ಕೊಡ್ತಾರಾ?
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ