AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಡ್​ ನ್ಯೂಸ್​ ಕೊಟ್ಟ BMRCL: ನಮ್ಮ ಮೆಟ್ರೋ ಜಾಲ ವಿಸ್ತರಣೆ; ಎಲ್ಲಿಂದ ಎಲ್ಲಿಗೆ ಹೊಸ ಸಂಪರ್ಕ?

ಪ್ರಯಾಣಿಕರಿಗೆ ನಮ್ಮ ಮೆಟ್ರೋ ಮತ್ತೊಂದು ಗುಡ್​ ನ್ಯೂಸ್​ ಕೊಟ್ಟಿದೆ. ಬೆಂಗಳೂರಿಂದ ಹೊಸ ಏರಿಯಾ ಮತ್ತು ಊರುಗಳಿಗೆ ಮೆಟ್ರೋ ಜಾಲ ವಿಸ್ತರಣೆಯಾಗಲಿದ್ದು, ತಿಂಗಳ ಕೊನೆಯ ವಾರ ಅಥವಾ ನವೆಂಬರ್ ಮೊದಲ ವಾರದಲ್ಲಿ ರಾಜ್ಯ ಸರ್ಕಾರಕ್ಕೆ ಬಿಎಂಆರ್​ಸಿಎಲ್ ವರದಿ ಸಲ್ಲಿಸಲಿದೆ. ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡ್ತಿದ್ದಂತೆ‌ DPR ಸಿದ್ಧವಾಗಲಿದ್ದು, ಅದನ್ನು ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳುಹಿಸಲಿದೆ.

ಗುಡ್​ ನ್ಯೂಸ್​ ಕೊಟ್ಟ BMRCL: ನಮ್ಮ ಮೆಟ್ರೋ ಜಾಲ ವಿಸ್ತರಣೆ; ಎಲ್ಲಿಂದ ಎಲ್ಲಿಗೆ ಹೊಸ ಸಂಪರ್ಕ?
ನಮ್ಮ ಮೆಟ್ರೋ
ಕಿರಣ್​ ಸೂರ್ಯ
| Edited By: |

Updated on:Oct 24, 2025 | 3:08 PM

Share

ಬೆಂಗಳೂರು, ಅಕ್ಟೋಬರ್​ 24: ಹಳದಿ ಮಾರ್ಗದ ಕಾರ್ಯಚರಣೆಯ ಆರಂಭದ ಬೆನ್ನಲ್ಲೇ ಪ್ರಯಾಣಿಕರಿಗೆ ನಮ್ಮ ಮೆಟ್ರೋ (Namma Metro) ಮತ್ತೊಂದು ಗುಡ್​ ನ್ಯೂಸ್​ ಕೊಟ್ಟಿದೆ. ಬೆಂಗಳೂರಿಂದ 8 ಏರಿಯಾ, ಊರುಗಳಿಗೆ ಮೆಟ್ರೋ ವಿಸ್ತರಣೆಗೆ ನಿರ್ಧರಿಸಲಾಗಿದ್ದು, 3A, 4ನೇ ಹಂತದಲ್ಲಿ 236 ಕಿ.ಮೀ. ಮೆಟ್ರೋ ಜಾಲ ವಿಸ್ತರಣೆಗೆ BMRCL ಮುಂದಾಗಿದೆ. ಸದ್ಯ ಕಾರ್ಯಾಚರಣೆ ನಡೆಸುತ್ತಿರುವ ಗ್ರೀನ್, ಪರ್ಪಲ್, ಯೆಲ್ಲೋ ಲೈನ್ ಗಳು​​ ಸೇರಿ ಪಿಂಕ್, ಆರೆಂಜ್ ಬ್ಲ್ಯೂ ಲೈನ್​ನಿಂದ 203.67 ಕಿಮೀ ಮೆಟ್ರೋ ಜಾಲವಿದೆ. ಇದನ್ನು ಮತ್ತೆ 236 ಕಿಲೋ ಮೀಟರ್​​ ವಿಸ್ತರಣೆ ಮಾಡುವ ಮೂಲಕ ಒಟ್ಟು 450 ಕಿ.ಮೀ.ಗೆ ಹೆಚ್ಚಿಸಲು ವರದಿ ರೆಡಿಯಾಗಿದೆ. ಈ ತಿಂಗಳ ಕೊನೆಯ ವಾರ ಅಥವಾ ನವೆಂಬರ್ ಮೊದಲ ವಾರದಲ್ಲಿ ರಾಜ್ಯ ಸರ್ಕಾರಕ್ಕೆ ಬಿಎಂಆರ್​ಸಿಎಲ್ ವರದಿ ಸಲ್ಲಿಸಲಿದೆ. ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡ್ತಿದ್ದಂತೆ‌ DPR ಸಿದ್ಧವಾಗಲಿದ್ದು, ಅದನ್ನುರಾಜ್ಯ ಸರ್ಕಾರ ಕೇಂದ್ರಕ್ಕೆ ಕಳುಹಿಸಲಿದೆ.

ಎಲ್ಲಿಂದ ಎಲ್ಲಿಗೆ ಮೆಟ್ರೋ ಸೇವೆ ವಿಸ್ತರಣೆ?

  • ಸಿಲ್ಕ್ ಇನ್ಸ್ಟಿಟ್ಯೂಟ್ TO ಹಾರೋಹಳ್ಳಿ 24 ಕಿ.ಮೀ.
  • ಬೊಮ್ಮಸಂದ್ರ TO ಅತ್ತಿಬೆಲೆ 11 ಕಿ.ಮೀ.
  • ಚಲ್ಲಘಟ್ಟ TO ಬಿಡದಿ 15 ಕಿ.ಮೀ.
  • ಕಡಬಗೆರೆ TO ತಾವರೆಕೆರೆ ವಿಲೇಜ್ 6 ಕಿ.ಮೀ.
  • ಮಾದಾವರ TO ತುಮಕೂರು 59.6 ಕಿ.ಮೀ.
  • ಸರ್ಜಾಪುರ ಟು ಹೆಬ್ಬಾಳ 37 ಕಿ.ಮೀ.
  • ಕೆ.ಆರ್.ಪುರ TO ಹೊಸಕೋಟೆ 16.30 ಕಿ.ಮೀ.
  • ಕಾಳೇನ ಅಗ್ರಹಾರ TO ಜಿಗಣಿ 68 ಕಿ.ಮೀ.

ಇದನ್ನೂ ಓದಿ: ಪೆಟ್ರೋಲ್ ಕದಿಯುವಾಗ ಸಿಕ್ಕಿಬಿದ್ದ ವ್ಯಕ್ತಿ, ಮೆಟ್ರೋ ಸಿಬ್ಬಂದಿಗಳ ಮೇಲೆ ಚಾಕುವಿನಿಂದ ಹಲ್ಲೆ

ಮತ್ತೊಂದೆಡೆ ಬೆಂಗಳೂರು ಮತ್ತು ತಮಿಳುನಾಡಿನ ಹೊಸೂರು ನಡುವೆ ದಕ್ಷಿಣ ಭಾರತದ ಮೊದಲ ಅಂತಾರಾಜ್ಯ ಮೆಟ್ರೋ ಮಾರ್ಗ ನಿರ್ಮಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಹಿನ್ನಡೆಯಾಗಿದೆ. ಈ ಬಗ್ಗೆ ಈಗಾಗಲೇ BMRCL ಸ್ಪಷ್ಟನೆ ನೀಡಿದ್ದು, ತಾಂತ್ರಿಕವಾಗಿ ಇದು ಸಾಧ್ಯವಿಲ್ಲ ಎಂದು ತಿಳಿಸಿತ್ತು. ಚೆನ್ನೈ ಮೆಟ್ರೋ ರೈಲು ಲಿಮಿಟೆಡ್  ನಡೆಸಿದ ಅಧ್ಯಯನದ ಪ್ರಕಾರ, 23 ಕಿ.ಮೀ. ಉದ್ದದ ಹೊಸೂರು-ಬೊಮ್ಮಸಂದ್ರ ಕಾರಿಡಾರ್‌ಗೆ 25 ಕೆವಿ ಎಸಿ ಓವರ್‌ಹೆಡ್ ವಿದ್ಯುತ್ ಶಕ್ತಿ ಬಳಕೆಗೆ ಪ್ರಸ್ತಾಪವಿತ್ತು. ಆದರೆ, ನಮ್ಮ ಮೆಟ್ರೋ ಜಾಲ ಬಳಸುತ್ತಿರುವುದು 750 ಕೆವಿ ಡಿಸಿ ವಿದ್ಯುತ್ ಶಕ್ತಿಯಾದ್ದರಿಂದ ಇವುಗಳಲ್ಲಿ ವ್ಯತ್ಯಾಸ ಕಂಡುಬಂದಿತ್ತು. ಹೀಗಾಗಿ ಈ ಎರಡು ವಿಭಿನ್ನ ವಿದ್ಯುತ್ ಶಕ್ತಿ ವ್ಯವಸ್ಥೆ ಸಂಯೋಜನೆ ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರಕ್ಕೆ BMRCL ಈಗಾಲೇ ಸ್ಪಷ್ಟಪಡಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:00 pm, Fri, 24 October 25

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ