AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಡ್​ ನ್ಯೂಸ್​ ಕೊಟ್ಟ BMRCL: ನಮ್ಮ ಮೆಟ್ರೋ ಜಾಲ ವಿಸ್ತರಣೆ; ಎಲ್ಲಿಂದ ಎಲ್ಲಿಗೆ ಹೊಸ ಸಂಪರ್ಕ?

ಪ್ರಯಾಣಿಕರಿಗೆ ನಮ್ಮ ಮೆಟ್ರೋ ಮತ್ತೊಂದು ಗುಡ್​ ನ್ಯೂಸ್​ ಕೊಟ್ಟಿದೆ. ಬೆಂಗಳೂರಿಂದ ಹೊಸ ಏರಿಯಾ ಮತ್ತು ಊರುಗಳಿಗೆ ಮೆಟ್ರೋ ಜಾಲ ವಿಸ್ತರಣೆಯಾಗಲಿದ್ದು, ತಿಂಗಳ ಕೊನೆಯ ವಾರ ಅಥವಾ ನವೆಂಬರ್ ಮೊದಲ ವಾರದಲ್ಲಿ ರಾಜ್ಯ ಸರ್ಕಾರಕ್ಕೆ ಬಿಎಂಆರ್​ಸಿಎಲ್ ವರದಿ ಸಲ್ಲಿಸಲಿದೆ. ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡ್ತಿದ್ದಂತೆ‌ DPR ಸಿದ್ಧವಾಗಲಿದ್ದು, ಅದನ್ನು ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳುಹಿಸಲಿದೆ.

ಗುಡ್​ ನ್ಯೂಸ್​ ಕೊಟ್ಟ BMRCL: ನಮ್ಮ ಮೆಟ್ರೋ ಜಾಲ ವಿಸ್ತರಣೆ; ಎಲ್ಲಿಂದ ಎಲ್ಲಿಗೆ ಹೊಸ ಸಂಪರ್ಕ?
ನಮ್ಮ ಮೆಟ್ರೋ
ಕಿರಣ್​ ಸೂರ್ಯ
| Edited By: |

Updated on:Oct 24, 2025 | 3:08 PM

Share

ಬೆಂಗಳೂರು, ಅಕ್ಟೋಬರ್​ 24: ಹಳದಿ ಮಾರ್ಗದ ಕಾರ್ಯಚರಣೆಯ ಆರಂಭದ ಬೆನ್ನಲ್ಲೇ ಪ್ರಯಾಣಿಕರಿಗೆ ನಮ್ಮ ಮೆಟ್ರೋ (Namma Metro) ಮತ್ತೊಂದು ಗುಡ್​ ನ್ಯೂಸ್​ ಕೊಟ್ಟಿದೆ. ಬೆಂಗಳೂರಿಂದ 8 ಏರಿಯಾ, ಊರುಗಳಿಗೆ ಮೆಟ್ರೋ ವಿಸ್ತರಣೆಗೆ ನಿರ್ಧರಿಸಲಾಗಿದ್ದು, 3A, 4ನೇ ಹಂತದಲ್ಲಿ 236 ಕಿ.ಮೀ. ಮೆಟ್ರೋ ಜಾಲ ವಿಸ್ತರಣೆಗೆ BMRCL ಮುಂದಾಗಿದೆ. ಸದ್ಯ ಕಾರ್ಯಾಚರಣೆ ನಡೆಸುತ್ತಿರುವ ಗ್ರೀನ್, ಪರ್ಪಲ್, ಯೆಲ್ಲೋ ಲೈನ್ ಗಳು​​ ಸೇರಿ ಪಿಂಕ್, ಆರೆಂಜ್ ಬ್ಲ್ಯೂ ಲೈನ್​ನಿಂದ 203.67 ಕಿಮೀ ಮೆಟ್ರೋ ಜಾಲವಿದೆ. ಇದನ್ನು ಮತ್ತೆ 236 ಕಿಲೋ ಮೀಟರ್​​ ವಿಸ್ತರಣೆ ಮಾಡುವ ಮೂಲಕ ಒಟ್ಟು 450 ಕಿ.ಮೀ.ಗೆ ಹೆಚ್ಚಿಸಲು ವರದಿ ರೆಡಿಯಾಗಿದೆ. ಈ ತಿಂಗಳ ಕೊನೆಯ ವಾರ ಅಥವಾ ನವೆಂಬರ್ ಮೊದಲ ವಾರದಲ್ಲಿ ರಾಜ್ಯ ಸರ್ಕಾರಕ್ಕೆ ಬಿಎಂಆರ್​ಸಿಎಲ್ ವರದಿ ಸಲ್ಲಿಸಲಿದೆ. ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡ್ತಿದ್ದಂತೆ‌ DPR ಸಿದ್ಧವಾಗಲಿದ್ದು, ಅದನ್ನುರಾಜ್ಯ ಸರ್ಕಾರ ಕೇಂದ್ರಕ್ಕೆ ಕಳುಹಿಸಲಿದೆ.

ಎಲ್ಲಿಂದ ಎಲ್ಲಿಗೆ ಮೆಟ್ರೋ ಸೇವೆ ವಿಸ್ತರಣೆ?

  • ಸಿಲ್ಕ್ ಇನ್ಸ್ಟಿಟ್ಯೂಟ್ TO ಹಾರೋಹಳ್ಳಿ 24 ಕಿ.ಮೀ.
  • ಬೊಮ್ಮಸಂದ್ರ TO ಅತ್ತಿಬೆಲೆ 11 ಕಿ.ಮೀ.
  • ಚಲ್ಲಘಟ್ಟ TO ಬಿಡದಿ 15 ಕಿ.ಮೀ.
  • ಕಡಬಗೆರೆ TO ತಾವರೆಕೆರೆ ವಿಲೇಜ್ 6 ಕಿ.ಮೀ.
  • ಮಾದಾವರ TO ತುಮಕೂರು 59.6 ಕಿ.ಮೀ.
  • ಸರ್ಜಾಪುರ ಟು ಹೆಬ್ಬಾಳ 37 ಕಿ.ಮೀ.
  • ಕೆ.ಆರ್.ಪುರ TO ಹೊಸಕೋಟೆ 16.30 ಕಿ.ಮೀ.
  • ಕಾಳೇನ ಅಗ್ರಹಾರ TO ಜಿಗಣಿ 68 ಕಿ.ಮೀ.

ಇದನ್ನೂ ಓದಿ: ಪೆಟ್ರೋಲ್ ಕದಿಯುವಾಗ ಸಿಕ್ಕಿಬಿದ್ದ ವ್ಯಕ್ತಿ, ಮೆಟ್ರೋ ಸಿಬ್ಬಂದಿಗಳ ಮೇಲೆ ಚಾಕುವಿನಿಂದ ಹಲ್ಲೆ

ಮತ್ತೊಂದೆಡೆ ಬೆಂಗಳೂರು ಮತ್ತು ತಮಿಳುನಾಡಿನ ಹೊಸೂರು ನಡುವೆ ದಕ್ಷಿಣ ಭಾರತದ ಮೊದಲ ಅಂತಾರಾಜ್ಯ ಮೆಟ್ರೋ ಮಾರ್ಗ ನಿರ್ಮಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಹಿನ್ನಡೆಯಾಗಿದೆ. ಈ ಬಗ್ಗೆ ಈಗಾಗಲೇ BMRCL ಸ್ಪಷ್ಟನೆ ನೀಡಿದ್ದು, ತಾಂತ್ರಿಕವಾಗಿ ಇದು ಸಾಧ್ಯವಿಲ್ಲ ಎಂದು ತಿಳಿಸಿತ್ತು. ಚೆನ್ನೈ ಮೆಟ್ರೋ ರೈಲು ಲಿಮಿಟೆಡ್  ನಡೆಸಿದ ಅಧ್ಯಯನದ ಪ್ರಕಾರ, 23 ಕಿ.ಮೀ. ಉದ್ದದ ಹೊಸೂರು-ಬೊಮ್ಮಸಂದ್ರ ಕಾರಿಡಾರ್‌ಗೆ 25 ಕೆವಿ ಎಸಿ ಓವರ್‌ಹೆಡ್ ವಿದ್ಯುತ್ ಶಕ್ತಿ ಬಳಕೆಗೆ ಪ್ರಸ್ತಾಪವಿತ್ತು. ಆದರೆ, ನಮ್ಮ ಮೆಟ್ರೋ ಜಾಲ ಬಳಸುತ್ತಿರುವುದು 750 ಕೆವಿ ಡಿಸಿ ವಿದ್ಯುತ್ ಶಕ್ತಿಯಾದ್ದರಿಂದ ಇವುಗಳಲ್ಲಿ ವ್ಯತ್ಯಾಸ ಕಂಡುಬಂದಿತ್ತು. ಹೀಗಾಗಿ ಈ ಎರಡು ವಿಭಿನ್ನ ವಿದ್ಯುತ್ ಶಕ್ತಿ ವ್ಯವಸ್ಥೆ ಸಂಯೋಜನೆ ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರಕ್ಕೆ BMRCL ಈಗಾಲೇ ಸ್ಪಷ್ಟಪಡಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:00 pm, Fri, 24 October 25

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ