ಬೆಂಗಳೂರು ಏರ್​ಪೋರ್ಟ್​ವರೆಗೂ ‘ನಮ್ಮ ಮೆಟ್ರೋ’ ವಿಸ್ತರಣೆ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ‘ನಮ್ಮ ಮೆಟ್ರೋ’ ವಿಸ್ತರಣೆ ಮಾಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ ಮೊದಲ ಆದ್ಯತೆ ಕೊಟ್ಟಿದ್ದೇವೆ. ನಗರದ 12 ಕಡೆ ಹೈಡೆನ್ಸಿಟಿ ಕಾರಿಡಾರ್ ರಸ್ತೆ ನಿರ್ಮಾಣ ಮಾಡಲಾಗುವುದು. ಇನ್ನು 7-8 ತಿಂಗಳಲ್ಲಿ ಬೆಂಗಳೂರನ್ನ ವಿಶ್ವದರ್ಜೆಗೆರಿಸುತ್ತೇವೆ. ಕೆರೆಗಳ ಸ್ವಚ್ಛತೆ, ತ್ಯಾಜ್ಯ ಸಮಸ್ಯೆಗೆ ಶೀಘ್ರವೇ ಪರಿಹಾರ ನೀಡ್ತೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ‘ನಮ್ಮ ಮೆಟ್ರೋ’ ಮೊದಲ ಹಂತ ಈಗಾಗಲೇ ಚಾಲ್ತಿಯಲ್ಲಿದ್ದು, 2ನೇ ಹಂತದ ಕಾಮಗಾರಿ […]

ಬೆಂಗಳೂರು ಏರ್​ಪೋರ್ಟ್​ವರೆಗೂ ‘ನಮ್ಮ ಮೆಟ್ರೋ’ ವಿಸ್ತರಣೆ
ಸಾಧು ಶ್ರೀನಾಥ್​

Updated on: Sep 16, 2019 | 1:45 PM

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ‘ನಮ್ಮ ಮೆಟ್ರೋ’ ವಿಸ್ತರಣೆ ಮಾಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ ಮೊದಲ ಆದ್ಯತೆ ಕೊಟ್ಟಿದ್ದೇವೆ. ನಗರದ 12 ಕಡೆ ಹೈಡೆನ್ಸಿಟಿ ಕಾರಿಡಾರ್ ರಸ್ತೆ ನಿರ್ಮಾಣ ಮಾಡಲಾಗುವುದು. ಇನ್ನು 7-8 ತಿಂಗಳಲ್ಲಿ ಬೆಂಗಳೂರನ್ನ ವಿಶ್ವದರ್ಜೆಗೆರಿಸುತ್ತೇವೆ. ಕೆರೆಗಳ ಸ್ವಚ್ಛತೆ, ತ್ಯಾಜ್ಯ ಸಮಸ್ಯೆಗೆ ಶೀಘ್ರವೇ ಪರಿಹಾರ ನೀಡ್ತೇವೆ ಎಂದು ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

‘ನಮ್ಮ ಮೆಟ್ರೋ’ ಮೊದಲ ಹಂತ ಈಗಾಗಲೇ ಚಾಲ್ತಿಯಲ್ಲಿದ್ದು, 2ನೇ ಹಂತದ ಕಾಮಗಾರಿ ನಡೆಯುತ್ತಿದೆ. ಇದೀಗ ಕೆಂಪೇಗೌಡ ವಿಮಾನ ನಿಲ್ದಾಣದವರೆಗೂ ನಮ್ಮ ಮೆಟ್ರೋ ವಿಸ್ತರಣೆಯಿಂದ ವಾಹನ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ಏರ್​ಪೋರ್ಟ್​ಗೆ ತಲುಪುವವರು ಟ್ರಾಫಿಕ್ ಕಿರಿಕಿರಿಯಿಲ್ಲದೆ ಮೆಟ್ರೋ ಮೂಲಕವೇ ಸುಗಮವಾಗಿ ಹೋಗಬಹುದಾಗಿದೆ.

Published On - 1:36 pm, Mon, 16 September 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us