AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿಗೆ 148 ಹೊಸ ಎಲೆಕ್ಟ್ರಿಕ್​ ಬಸ್​ಗಳು ಸೇರ್ಪಡೆ: ಇಂದಿನಿಂದ ಸಂಚಾರ ಆರಂಭ, ಮಹಿಳೆಯರಿಗೆ ಉಚಿತ ಪ್ರಯಾಣ

ಸಾರಿಗೆ ಸಚಿವ ರಾಮಲಿಂಗರೆಡ್ಡಿ ಇಂದು ಬಿಎಂಟಿಸಿಗೆ ಸೇರ್ಪಡೆಯಾದ 148 ಹೊಸ ಟಾಟಾ ಎಲೆಕ್ಟ್ರಿಕ್ ಬಸ್‌ಗಳಿಗೆ ಹಸಿರು ನಿಶಾನೆ ತೋರಿದ್ದಾರೆ. ಇಂದಿನಿಂದ ಬೆಂಗಳೂರಿನ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಆ ಮೂಲಕ ಮಹಿಳೆಯರಿಗೆ ಬಿಬಿಎಂಟಿಸಿ ಗುಡ್ ನ್ಯೂಸ್​ ಕೊಟ್ಟಿದೆ. ಈ ಎಲೆಕ್ಟ್ರಿಕ್ ಬಸ್​​ಗಳ ವಿಶೇಷತೆಗಳೇನು ತಿಳಿಯಿರಿ.

ಬಿಎಂಟಿಸಿಗೆ 148 ಹೊಸ ಎಲೆಕ್ಟ್ರಿಕ್​ ಬಸ್​ಗಳು ಸೇರ್ಪಡೆ: ಇಂದಿನಿಂದ ಸಂಚಾರ ಆರಂಭ, ಮಹಿಳೆಯರಿಗೆ ಉಚಿತ ಪ್ರಯಾಣ
ಹೊಸ ಎಲೆಕ್ಟ್ರಿಕ್ ಬಸ್
Kiran Surya
| Edited By: |

Updated on:Jul 11, 2025 | 12:33 PM

Share

ಬೆಂಗಳೂರು, ಜುಲೈ 11: ಬಿಎಂಟಿಸಿಗೆ ಹೊಸದಾಗಿ 148 ಟಾಟಾ ಎಲೆಕ್ಟ್ರಿಕ್ ಬಸ್​ಗಳು (Electric bus) ಸೇರ್ಪಡೆಗೊಂಡಿವೆ. ಶಾಂತಿನಗರದಲ್ಲಿ ಶುಕ್ರವಾರ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೊಸ ಬಸ್​ಗಳಿಗೆ ಹಸಿರು ನಿಶಾನೆ ತೋರಿದ್ದಾರೆ. ಆ ಮೂಲಕ ಇಂದಿನಿಂದ ಬೆಂಗಳೂರಿನ (bangaluru) ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಒಂದು ಕಿ.ಮೀ. ಗೆ 41.1 ಪೈಸೆ ರೂ. ಗುತ್ತಿಗೆ ಆಧಾರದಲ್ಲಿ ಈ 148 ಬಸ್​ಗಳು ಸಂಚಾರ ಮಾಡಲಿವೆ.

30 ಮಾರ್ಗಗಳಲ್ಲಿ ಸಂಚಾರ

ಸದ್ಯ ಬಿಎಂಟಿಸಿಯಲ್ಲಿ ಎಸಿ ವೋಲ್ವೋ, ಸೇರಿದಂತೆ 6900 ಬಸ್​ಗಳಿದ್ದು, ಈ 148 ಬಸ್​ಗಳು ಸೇರ್ಪಡೆಯೊಂದಿಗೆ ಒಟ್ಟು 7,048 ಬಸ್​ಗಳನ್ನು ಬಿಎಂಟಿಸಿ ಹೊಂದಿದೆ.​ ಈ ಎಲೆಕ್ಟ್ರಿಕ್​ ಬಸ್​ಗಳು 12 ವರ್ಷಗಳ ಕಾಲ ನಗರದಲ್ಲಿ ಸಂಚಾರ ಮಾಡಲಿವೆ. ಈ ಬಸ್​ಗಳಿಗೆ ಕಂಡಕ್ಟರ್ ಬಿಎಂಟಿಸಿ ನಿಗಮದಿಂದ ನೇಮಕ ಮಾಡಿದರೆ, ಡ್ರೈವರ್​ಗಳು ಎಲೆಕ್ಟ್ರಿಕ್ ಬಸ್ ಕಂಪನಿಯಿಂದ ಕೆಲಸ ಮಾಡಲಿದ್ದಾರೆ. ಈ 148 ಬಸ್​ಗಳು ಬೆಂಗಳೂರಿನ 30 ಮಾರ್ಗಗಳಲ್ಲಿ ಸಂಚಾರ ನಡೆಸಲಿವೆ.

ಟಾಟಾ ಎಲೆಕ್ಟ್ರಿಕ್ ಬಸ್​​ಗಳ ವಿಶೇಷತೆಗಳು

  • ಬಹುತೇಕ ಶೂನ್ಯ ಹೊರ ಸೂಸುವಿಕೆ ಹಾಗೂ ಪರಿಸರ ಸ್ನೇಹಿ ಬಸ್​​ಗಳು.
  • 12ಮೀ ಉದ್ದ, 400ಮಿಮೀ ಎತ್ತರ ಹವಾನಿಯಂತ್ರಿತವಲ್ಲದ ವಿದ್ಯುತ್ ಚಾಲಿತ ಬಸ್​ಗಳಾಗಿರುತ್ತವೆ.
  • ಒಂದು ಭಾರಿ ಚಾರ್ಜ್​ಗೆ 200 ಕಿ.ಮೀ ಚಲಿಸುತ್ತವೆ.
  • ಎಲ್ಲಾ 148 ಬಸ್​ಗಳು ಘಟಕ-04 (ಜಯನಗರ) ರಿಂದ ಸಂಚರಿಸಲಿವೆ.

ಇದನ್ನೂ ಓದಿ: ಕರ್ನಾಟಕ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್‌ ಭಾಗ್ಯ ಕರುಣಿಸಿದ ಸರ್ಕಾರ

ಇದನ್ನೂ ಓದಿ
Image
ಕರ್ನಾಟಕ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್‌ ಭಾಗ್ಯ ಕರುಣಿಸಿದ ಸರ್ಕಾರ
Image
ಶಕ್ತಿ ಯೋಜನೆ: 500 ಕೋಟಿ ತಲುಪಲಿರುವ ಮಹಿಳಾ ಪ್ರಯಾಣಿಕರ ಸಂಖ್ಯೆ
Image
ಕರ್ನಾಟಕದ ಈ ಭಾಗದಿಂದ ಸಿಕಂದರಾಬಾದ್, ಹೈದರಾಬಾದ್​ಗೆ ವಿಶೇಷ ರೈಲು
Image
ಇವಿ ವಾಹನಗಳಿಗೆ ಬೇಡಿಕೆ, ಚಾರ್ಜಿಂಗ್ ಸ್ಟೇಷನ್​ಗಳ ಕೊರತೆ: ಸವಾರರ ಅಸಮಾಧಾನ
  • 35 ಪ್ರಯಾಣಿಕ ಆಸನಗಳ ಸಾಮರ್ಥ್ಯ ಹೊಂದಿದ್ದು, 1 ಗಾಲಿ ಕುರ್ಚಿಗೆ ಅವಕಾಶವಿರುತ್ತದೆ.
  • ಪ್ರಯಾಣಿಕರ ಸುರಕ್ಷತೆಯನ್ನು ಖಾತರಿಪಡಿಸಿಕೊಳ್ಳಲು ಬಸ್​ನ ಒಳಭಾಗದಲ್ಲಿ 3 ಕ್ಯಾಮೆರಾಗಳನ್ನು ಹಾಗೂ ಚಾಲಕರಿಗೆ ಹಿಮ್ಮುಖವಾಗಿ ಚಲಿಸಲು ಅನುಕೂಲವಾಗುವಂತೆ 1 ಕ್ಯಾಮೆರಾವನ್ನು ಬಸ್​​ನ ಹಿಂಬದಿ ಅಳವಡಿಸಲಾಗಿದೆ.
  • 4 ಎಲ್.ಇ.ಡಿ ಬೋರ್ಡ್ ಮತ್ತು ಧ್ವನಿ ಪ್ರಕಟಣೆ ವ್ಯವಸ್ಥೆ ಕಲ್ಪಿಸಲಾಗಿದೆ.
  • ಮಹಿಳೆಯರ ಸುರಕ್ಷತೆಗೆ 10 ತುರ್ತು ಪ್ಯಾನಿಕ್ ಬಟನ್​​ಗಳನ್ನು ಅಳವಡಿಸಲಾಗಿರುತ್ತದೆ.
  • ಅಗ್ನಿ ಅವಘಡಗಳನ್ನು ತಪ್ಪಿಸುವ ಸಲುವಾಗಿ ‘ಅಗ್ನಿ ಪತ್ತೆ ಹಾಗೂ ಎಚ್ಚರಿಕೆ ವ್ಯವಸ್ಥೆ’ (FDAS-Fire Detection and Alarm System) ಒದಗಿಸಲಾಗಿದೆ.
  • ವಾಹನಗಳ ಮೇಲೆ ನಿರಂತರವಾಗಿ ನಿಗಾಯಿಡಲು ವಾಹನದ ಸ್ಥಳ ಸೂಚಿಸುವ ವ್ಯವಸ್ಥೆ ಒದಗಿಸಲಾಗಿದೆ.

ಇದನ್ನೂ ಓದಿ: ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಕರ್ನಾಟಕದ ಈ ಭಾಗದಿಂದ ಸಿಕಂದರಾಬಾದ್, ಹೈದರಾಬಾದ್​ಗೆ ವಿಶೇಷ ರೈಲು

  • ಹಿರಿಯ ನಾಗರೀಕರು, ವಿಕಲಾಂಗ ವ್ಯಕ್ತಿಗಳು ಹಾಗೂ ಗಾಲಿ ಕುರ್ಚಿ ಪ್ರಯಾಣಿಕರು ಸುಲಭವಾಗಿ ಮತ್ತು ಸುರಕ್ಷಿತವಾಗಿ ಬಸ್​​​ ಒಳ ಬರಲು ಮತ್ತು ಹೊರ ಹೋಗಲು ಅನುಕೂಲವಾಗುವಂತೆ, ಬಸ್​​ನ ಎಡಭಾಗ ಬಾಗುವ ವ್ಯವಸ್ಥೆಯನ್ನು ಹೊಂದಿರುತ್ತದೆ.
  • ಅನಿವಾರ್ಯ ಸಂದರ್ಭಗಳಲ್ಲಿ ಪ್ರಯಾಣಿಕರು ನಿಲುಗಡೆ ಕೋರಲು ನಿಲುಗಡೆ ಬಟನ್​ಗಳನ್ನು ಒದಗಿಸಲಾಗಿದೆ.
  • ಮುಂದೆ ಮತ್ತು ಮಧ್ಯದಲ್ಲಿ ಸ್ವಯಂಚಾಲಿತ ಬಾಗಿಲುಗಳನ್ನು ಒದಗಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 12:27 pm, Fri, 11 July 25

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ