AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ ಸಂಚಾರಕ್ಕೆ ಕೌಂಟ್ ಡೌನ್, ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕಾದು ಕುಳಿತ ಪ್ರಯಾಣಿಕರು

ಬೆಂಗಳೂರು: 55 ದಿನಗಳ ನಂತರ ಇಂದು ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್​ಗಳು ತಮ್ಮ ಸಂಚಾರ ಶುರು ಮಾಡಲಿವೆ. ಲಾಕ್​ಡೌನ್​ನಿಂದಾಗಿ ಮನೆಯಲ್ಲೇ ಕೂತಿದ್ದ ಬಹುತೇಕ ಮಂದಿಯೆಲ್ಲಾ ಇಂದು ಬಸ್ ನಿಲ್ದಾಣಗಳಿಗೆ ಧಾವಿಸಿದ್ದಾರೆ. ಬೆಳಗ್ಗೆ 7ರಿಂದ ಸಂಜೆ 7ಗಂಟೆವರೆಗೂ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹೀಗಾಗಿ ಪ್ರಯಾಣಿಕರು ಬೆಳಗ್ಗೆ 5 ಗಂಟೆಯಿಂದಲೇ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಬಸ್​ಗಾಗಿ ಕಾದು ಕೊಳಿತಿದ್ದಾರೆ. ರಾಜ್ಯಾದ್ಯಂತ ಬಸ್ ಸೇವೆ ಆರಂಭಿಸಲು ಸಿದ್ಧತೆಗಳು ಶುರು ಆಗಿವೆ. ಪ್ರತಿ ಬಸ್​​ನಲ್ಲಿ 30 ಜನ್ರಿಗೆ ಮಾತ್ರ […]

ಬಸ್ ಸಂಚಾರಕ್ಕೆ ಕೌಂಟ್ ಡೌನ್, ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕಾದು ಕುಳಿತ ಪ್ರಯಾಣಿಕರು
ಸಾಧು ಶ್ರೀನಾಥ್​
|

Updated on:May 19, 2020 | 1:47 PM

Share

ಬೆಂಗಳೂರು: 55 ದಿನಗಳ ನಂತರ ಇಂದು ಬಿಎಂಟಿಸಿ, ಕೆಎಸ್​ಆರ್​ಟಿಸಿ ಬಸ್​ಗಳು ತಮ್ಮ ಸಂಚಾರ ಶುರು ಮಾಡಲಿವೆ. ಲಾಕ್​ಡೌನ್​ನಿಂದಾಗಿ ಮನೆಯಲ್ಲೇ ಕೂತಿದ್ದ ಬಹುತೇಕ ಮಂದಿಯೆಲ್ಲಾ ಇಂದು ಬಸ್ ನಿಲ್ದಾಣಗಳಿಗೆ ಧಾವಿಸಿದ್ದಾರೆ. ಬೆಳಗ್ಗೆ 7ರಿಂದ ಸಂಜೆ 7ಗಂಟೆವರೆಗೂ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹೀಗಾಗಿ ಪ್ರಯಾಣಿಕರು ಬೆಳಗ್ಗೆ 5 ಗಂಟೆಯಿಂದಲೇ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಬಸ್​ಗಾಗಿ ಕಾದು ಕೊಳಿತಿದ್ದಾರೆ. ರಾಜ್ಯಾದ್ಯಂತ ಬಸ್ ಸೇವೆ ಆರಂಭಿಸಲು ಸಿದ್ಧತೆಗಳು ಶುರು ಆಗಿವೆ.

ಪ್ರತಿ ಬಸ್​​ನಲ್ಲಿ 30 ಜನ್ರಿಗೆ ಮಾತ್ರ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಹಾಗೇ, ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ಕಡ್ಡಾಯವಾಗಿ ಮಾಸ್ಕ್​ ಧರಿಸಿರಬೇಕು. ಡಬಲ್ ಸೀಟ್​ನಲ್ಲಿ ಒಬ್ಬರು, 3 ಆಸನದ ಸೀಟ್​ನಲ್ಲಿ ಇಬ್ಬರು ಮಾತ್ರ ಕೂರಬೇಕು. ಹಾಗೇ, ಬಸ್ ಹತ್ತುವ ಮುನ್ನ ಥರ್ಮಲ್ ಸ್ಕ್ಯಾನ್, ಕೈಗೆ ಸ್ಯಾನಿಟೈಸರ್ ಹಾಕಿಕೊಳ್ಳಬೇಕು.

ಬಸ್​ನಲ್ಲಿ ನಿಂತು ಪ್ರಯಾಣಿಸಲು ಜನರಿಗೆ ಅವಕಾಶ ಇಲ್ಲ. ಹಾಗೇ, ಕಂಟೇನ್​ಮೆಂಟ್ ಜೋನ್​ಗಳಲ್ಲಿ ಬಸ್ ನಿಲ್ಲಿಸುವಂತಿಲ್ಲ. ಇನ್ನು, ಪ್ರಯಾಣಿಕರು ತಮ್ಮ ವಿಳಾಸ, ಹೆಸರು ಮೊಬೈಲ್​​ ಸಂಖ್ಯೆಯನ್ನ ನಮೂದಿಸಬೇಕು. ಹಾಗೂ ಗುರುತಿನ ಚೀಟಿಯನ್ನ ಕಂಡೆಕ್ಟರ್​​​​​ಗೆ ಕಡ್ಡಾಯವಾಗಿ ನೀಡಿ ಪ್ರಯಾಣಿಸಬೇಕು ಎಂದು ನಿಯಮ ಹೊರಡಿಸಲಾಗಿದೆ.

Published On - 6:57 am, Tue, 19 May 20

ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಸಿಬ್ಬಂದಿಯನ್ನ ಹೆದರಿಸಿ ಮಸಾಜ್​ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೀದರ್‌ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ನಾವು ಆಯುರ್ವೇದಿಕ್ ಡಾಕ್ಟರ್ ಇದ್ದಂಗೆ, ನಮ್ಮದು ಸ್ಲೋ ಇರುತ್ತೆ: ಜಾರಕಿಹೊಳಿ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ಲಾಸ್ ಏಂಜಲೀಸ್​​ನಲ್ಲಿ ಡೆಲ್ಟಾ ವಿಮಾನ ತುರ್ತು ಭೂಸ್ಪರ್ಶ
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಹೆರಿಗೆಗೆಂದು ತವರಿಗೆ ಹೋದ ಟೆಕ್ಕಿ ಪತ್ನಿ, ಫ್ಲ್ಯಾಟ್​ ಮಾರಿ ಪತಿ ಪರಾರಿ
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್​​ ಮುಕ್ತಿಗೆ ಪೊಲೀಸರಿಂದ ಮೆಗಾ ಪ್ಲ್ಯಾನ್
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಹಡಗು ಮಗುಚಿ 34 ಮಂದಿ ಸಾವು
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ
Weekly Horoscope: ಜುಲೈ 21 ರಿಂದ 27ರವರೆಗಿನ ವಾರ ಭವಿಷ್ಯ