AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​ ಸಂಚಾರ ಸ್ಥಗಿತ: ಮನೆಯಿಂದ ಹೊರಬರುವ ಮೊದಲು ಯೋಚಿಸಿ

ಸಾರಿಗೆ ನಿಗಮಗಳ ನೌಕರರು ತಮ್ಮ ಸಮಸ್ಯೆ ಏನು ಎಂಬುದನ್ನು ಮನವರಿಕೆ ಮಾಡಿ ಮಾಡಿಕೊಟ್ಟರೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಜತೆ ಚರ್ಚೆ ಮಾಡುತ್ತೇನೆ ಎಂದು ಲಕ್ಷ್ಮಣ ಸವದಿ ಹೇಳಿದ್ದರು. ಆದರೆ, ಈಗ ಮಾತುಕತೆ ವಿಫಲವಾಗಿದೆ.

ಬಸ್​ ಸಂಚಾರ ಸ್ಥಗಿತ: ಮನೆಯಿಂದ ಹೊರಬರುವ ಮೊದಲು ಯೋಚಿಸಿ
ಬಿಎಂಟಿಸಿ ಬಸ್​ (ಪ್ರಾತಿನಿಧಿಕ ಚಿತ್ರ)
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Dec 11, 2020 | 10:33 PM

Share

ಬೆಂಗಳೂರು: ಸಾರಿಗೆ ನಿಗಮಗಳ ನೌಕರರು ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು ಎಂಬುದಾಗಿ ಸರ್ಕಾರದ ಎದುರು ಬಿಗಿ ಪಟ್ಟು ಹಿಡಿದಿದ್ದಾರೆ. ಏನೇ ಸಮಸ್ಯೆ ಇದ್ದರೂ ಬಂದು ಚರ್ಚಿಸಿ ಬಗೆಹರಿಸಿಕೊಳ್ಳಿ. ಅದನ್ನು ಬಿಟ್ಟು ಪ್ರತಿಭಟನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡಬೇಡಿ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿರುವ ಮಾತನ್ನು ಕಿವಿ ಮೇಲೆ ಹಾಕಿಕೊಳ್ಳದ ನೌಕರರು ಪ್ರತಿಭಟನೆ ಮುಂದುವರಿಸಲಿದ್ದಾರೆ. ಹೀಗಾಗಿ, ಶನಿವಾರವೂ ಬಿಎಂಟಿಸಿ ಹಾಗೂ ಕೆಎಸ್​ಆರ್​ಟಿಸಿ ಬಸ್​ಗಳು ರಸ್ತೆಗೆ ಇಳಿಯುತ್ತಿಲ್ಲ.

ಸಾರಿಗೆ ನಿಗಮಗಳ ನೌಕರರು ತಮ್ಮ ಸಮಸ್ಯೆ ಏನು ಎಂಬುದನ್ನು ಮನವರಿಕೆ ಮಾಡಿ ಮಾಡಿಕೊಟ್ಟರೆ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಜತೆ ಚರ್ಚೆ ಮಾಡುತ್ತೇನೆ ಎಂದು ಲಕ್ಷ್ಮಣ ಸವದಿ ಹೇಳಿದ್ದರು. ಆದರೆ, ಈಗ ಮಾತುಕತೆ ವಿಫಲವಾಗಿದೆ.

ನೌಕರರ ಸಂಘಟನೆಯಲ್ಲೀಗ ಎರಡು ಬಣಗಳಾಗಿವೆ. ಇಂದು ಸಚಿವ ಲಕ್ಷ್ಮಣ ಸವದಿ ಒಂದು ಬಣದ ಜೊತೆಗೆ ಮಾತುಕತೆ ನಡೆಸಿದರು. ಆದರೆ, ಎರಡೂ ಬಣಗಳಿಗೆ ಆಹ್ವಾನ ನೀಡಬೇಕಿತ್ತು ಎಂಬುದು ನೌಕರರ ಆಗ್ರಹವಾಗಿದೆ. ಈ ಎಲ್ಲ ಕಾರಣಕ್ಕೆ ಇಂದು ಕೂಡ ಮಾತುಕತೆ ಸಫಲವಾಗಿಲ್ಲ. ಹೀಗಾಗಿ, ನಾಳೆಯೂ ಬಸ್​ ವ್ಯವಸ್ಥೆ ಇರುವುದಿಲ್ಲ.

ಲಕ್ಷ್ಮಣ ಸವದಿಯದ್ದೇ ತಪ್ಪಾ? ಸಾರಿಗೆ ನಿಗಮಗಳ ನೌಕರರು ಗುರುವಾರದಿಂದಲೇ ಪ್ರತಿಭಟನೆ ನಡೆಸುತ್ತಿದ್ದಾರೆ. ಲಕ್ಷ್ಮಣ ಸವದಿ ಸೇರಿ ಯಾವುದೇ ಸಚಿವರು ಅವರ ಬಳಿ ತೆರಳಿ ಕಷ್ಟ ಆಲಿಸಿಲ್ಲ. ಇದಕ್ಕೆ ಸಿಟ್ಟಾದ ಸಿಬ್ಬಂದಿ, ಇಂದು  (ಡಿ.11) ಬಸ್​ ಚಾಲನೆ ಮಾಡದೆ ಮುಷ್ಕರ ನಡೆಸುತ್ತಿದ್ದಾರೆ. ಲಕ್ಷ್ಮಣ ಸವದಿ ಮೊದಲೇ ಎಚ್ಚೆತ್ತಿದ್ದರೆ ಈ ರೀತಿ ಆಗುತ್ತಿರಲಿಲ್ಲ ಎನ್ನುವ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. ಹೆಚ್ಚು ಹಣ ಕೀಳುತ್ತಿದ್ದಾರೆ ಆಟೋದವರು: ಬಿಎಂಟಿಸಿ ಬಸ್​ಗಳು ಇಲ್ಲದ ಕಾರಣ ಸಾರ್ವಜನಿಕರಿಗೆ ಆಟೋ ಹಾಗೂ ಕ್ಯಾಬ್​ಗಳಲ್ಲಿ ತೆರಳೋದು ಅನಿವಾರ್ಯ ಆಗಿದೆ. ಈ ಸಂದರ್ಭದಲ್ಲಿ ಆಟೋದವರು ಹೆಚ್ಚು ಹಣ ಕೀಳುತ್ತಿರುವ ಸಾಕಷ್ಟು ಪ್ರಕರಣಗಳು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿವೆ. ಸಾರ್ವಜನಿಕರು ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಾ ಹೆಚ್ಚು ಹಣ ಕೊಟ್ಟೇ ಪ್ರಯಾಣ ಮಾಡುವ ಪರಿಸ್ಥಿತಿ ಬಂದೊದಗಿದೆ.

Explainer | ಆಂಧ್ರ ಸಾರಿಗೆ ನಿಗಮ ಸಿಬ್ಬಂದಿ ಈಗ ರಾಜ್ಯ ಸರ್ಕಾರಿ ನೌಕರರು: ಏನಿದು ‘ಆಂಧ್ರ ಮಾಡೆಲ್‘?

ಚರ್ಚಿಸೋಣ ಬನ್ನಿ, ಮುಷ್ಕರ ಕೈಬಿಡಿ: ಸಾರಿಗೆ ನೌಕರರಿಗೆ ಸಚಿವ ಸವದಿ ಮನವಿ

ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಪತಿಯನ್ನು ನದಿಗೆ ತಳ್ಳಿದ ಪತ್ನಿ, ಆಮೇಲೆ ನಡೆಯಿತು ಯಾರೂ ಊಹಿಸದ ಘಟನೆ!
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್
ಶಿವರಾಜ್​ಕುಮಾರ್ ಜನ್ಮದಿನ; ಮಧ್ಯರಾತ್ರಿ ಅಭಿಮಾನಿಗಳ ಜೊತೆ ಕೇಕ್ ಕಟ್