AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಪ್ರಯಾಣಿಕರ ಗಮನಕ್ಕೆ.. 2021ರ ಏಪ್ರಿಲ್ ಪಾಸ್ ಅವಧಿ ವಿಸ್ತರಣೆ

ಬಿಎಂಟಿಸಿ ಏಪ್ರಿಲ್ 2021ರ ಸಾಮಾನ್ಯ ಮಾಸಿಕ ಪಾಸ್​ಗಳ ಅವಧಿಯನ್ನು ಜುಲೈ 8ರ ವರೆಗೆ ವಿಸ್ತರಿಸಲಿದೆ. ಪಾಸ್ ಅವಧಿ ಮುಗಿದಿದೆ ಹೊಸ ಪಾಸ್ ತೆಗೆದುಕೊಳ್ಳಬೇಕು ಎಂಬುವವರು ಹಳೇ ಪಾಸ್ ತೋರಿಸಿ ಜುಲೈ 8ರ ವರೆಗೆ ಪ್ರಯಾಣಿಸಬಹುದು...

ಬಿಎಂಟಿಸಿ ಪ್ರಯಾಣಿಕರ ಗಮನಕ್ಕೆ.. 2021ರ ಏಪ್ರಿಲ್ ಪಾಸ್ ಅವಧಿ ವಿಸ್ತರಣೆ
ಬಿಎಂಟಿಸಿ ಬಸ್
TV9 Web
| Edited By: |

Updated on: Jun 22, 2021 | 8:15 AM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದಾಗಿ ಇಡೀ ಬೆಂಗಳೂರು ಲಾಕ್ ಆಗಿತ್ತು. ಸದ್ಯ ಈಗ ಎರಡು ತಿಂಗಳ ಬಳಿಕ ಅನ್ಲಾಕ್ 2.0 ಘೋಷಣೆಯಾಗಿದ್ದು ಬಸ್ ಸೇವೆಗೆ ಅವಕಾಶ ನೀಡಲಾಗಿದೆ. ಬಿಎಂಟಿಸಿ ಬಸ್ಗಳು ಸೇವೆ ನೀಡಲು ಸಿದ್ಧವಾಗಿದೆ. ಆದರೆ ಪಾಸ್ ಮಾಡಿಸಿಕೊಂಡವರು ಲಾಕ್ಡೌನ್ನಿಂದ ಎರಡು ತಿಂಗಳ ಪಾಸ್ ವೇಸ್ಟ್ ಆಯ್ತು 2021ರ ಏಪ್ರಿಲ್ಗೆಯೇ ಪಾಸ್ ಅವಧಿ ಮುಗಿಯಿತು ಎಂದು ಕೊಂಡವರಿಗೆ ಸಿಹಿ ಸುದ್ದಿ ಸಿಕ್ಕಿದೆ.

ಬಿಎಂಟಿಸಿ ಏಪ್ರಿಲ್ 2021ರ ಸಾಮಾನ್ಯ ಮಾಸಿಕ ಪಾಸ್​ಗಳ ಅವಧಿಯನ್ನು ಜುಲೈ 8ರ ವರೆಗೆ ವಿಸ್ತರಿಸಲಿದೆ. ಪಾಸ್ ಅವಧಿ ಮುಗಿದಿದೆ ಹೊಸ ಪಾಸ್ ತೆಗೆದುಕೊಳ್ಳಬೇಕು ಎಂಬುವವರು ಹಳೇ ಪಾಸ್ ತೋರಿಸಿ ಜುಲೈ 8ರ ವರೆಗೆ ಪ್ರಯಾಣಿಸಬಹುದು. ಸಾರಿಗೆ ನೌಕರರು ಏಪ್ರಿಲ್ 7ರಿಂದ 21ರವರೆಗೆ ಅನಿರ್ದಿಷ್ಟ ಮುಷ್ಕರ ನಡೆಸಿದ್ದರು. ಬಳಿಕ ಕೊವಿಡ್ ಕಾರಣದಿಂದಾಗಿ ರಾಜ್ಯ ಸರ್ಕಾರ ಏಪ್ರಿಲ್ 27ರಿಂದ ಲಾಕ್ಡೌನ್ ಘೋಷಣೆ ಮಾಡಿತ್ತು. ಇಷ್ಟೆಲ್ಲಾ ಆದ ಬಳಿಕ ಕೊರೊನಾದಿಂದ ನಷ್ಟವಾಗಿದೆ. ಪಾಸ್ ಇದ್ದರೂ ಸಾರಿಗೆ ಮುಷ್ಕರದಿಂದಾಗಿ ನಾವು ಬೇರೆ ಬೇರೆ ವಾಹನಗಳಲ್ಲಿ ಪ್ರಯಾಣಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಇಂತಹ ಸಮಯದಲ್ಲಿ ಮತ್ತೆ ಪಾಸ್ ಖರೀದಿಸಲು ಆಗುವುದಿಲ್ಲ. ಹೀಗಾಗಿ ಪಾಸ್ ಅವಧಿಯನ್ನು ವಿಸ್ತರಿಸಿ ಎಂದು ಬಿಎಂಟಿಸಿ ಮಾಸಿಕ ಪಾಸ್ ಹೊಂದಿದವರು ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದ್ದರು.

ಸದ್ಯ ಮುಷ್ಕರ, ಲಾಕ್ಡೌನ್ನಿಂದ ಪಾಸ್ ಬಳಕೆಯಾಗದಿದ್ದರೂ ಮತ್ತೆ ಪಾಸ್ ಖರೀದಿಸಬೇಕಾ ಎಂಬ ಚಿಂತೆಯಲ್ಲಿದ್ದವರಿಗೆ ಬಿಎಂಟಿಸಿ ಸಿಹಿ ಸುದ್ದಿ ನೀಡಿದೆ. ಹಳೇ ಪಾಸ್ ಬಳಸಿ ಜುಲೈ 8ರ ವರೆಗೆ ಪ್ರಯಾಣಿಸಲು ಅವಕಾಶ ನೀಡಿದೆ.

ಎಲ್ಲಾ ಬಸ್ಗಳಲ್ಲಿ ಕ್ಯೂಆರ್ಕೋಡ್ ಆಧರಿತ ಡಿಜಿಟಲ್ ಟಿಕೆಟಿಂಗ್ ನೀಡಲಾಗುವುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರದಿಂದ (ಜೂನ್ 21) ಸಾರಿಗೆ ಸೇವೆ ಶುರುವಾಗಿದ್ದು ಮೊದಲ ದಿನ 2000 ಸಾವಿರ ಬಸ್ಗಳನ್ನು ಬಿಡುವುದಾಗಿ ಬಿಎಂಟಿಸಿ ತಿಳಿಸಿತ್ತು. ಆದರೆ ಬೆಳಗ್ಗೆ ಬೆರಳೆಣಿಕೆಯಷ್ಟು ಬಸ್ಗಳು ಮಾತ್ರ ಸಂಚರಿಸಿದ್ದು ಪ್ರಯಾಣಿಕರು ಬಸ್ಗಾಗಿ ಕಾದು ಕಾದು ಹೈರಾಣಾಗುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಸಿಕ್ಕರೂ ಬಸ್ಗಳಿಲ್ಲದೆ ಜನ ಆಟೋ, ಟ್ಯಾಕ್ಸಿ ಮೊರೆ ಹೋದರು. ಬಳಿಕ ಪರಿಸ್ಥಿತಿ ತಿಳಿದು ಮಧ್ಯಾಹ್ನದ ಬಳಿಕ ಹೆಚ್ಚಿನ ಬಸ್ಗಳನ್ನು ಬಿಡಲಾಯಿತು.

ಇನ್ನು ಬಸ್ ಸಂಚಾರಕ್ಕೆ ಸರ್ಕಾರ ಕೆಲವು ಕಂಡಿಷನ್ಗಳನ್ನ ಹಾಕಿದೆ. ಮೊದಲ ಹಂತದಲ್ಲಿ ಒಂದೂವರೆ ಸಾವಿರದಿಂದ 2 ಸಾವಿರ ಬಸ್‌ಗಳನ್ನ ಓಡಿಸಲಾಗುತ್ತಿದೆ ಎಂದು ಹೇಳಲಾಗಿತ್ತು ಆದರೆ ಬೆರಳೆಣಿಕೆಯಷ್ಟು ಬಸ್‌ಗಳು ಮಾತ್ರ ಸಂಚಾರ ಮಾಡುತ್ತಿದೆ. ಹೀಗಾಗಲು ಕಾರಣ ಬಿಎಂಟಿಸಿ ಬಸ್ ಚಾಲಕ ಮತ್ತು ನಿರ್ವಾಹಕರಿಗೆ ವ್ಯಾಕ್ಸಿನ್ ಕಡ್ಡಾಯ ಮಾಡಿದ್ದು, ಎರಡು ಡೋಸ್ ವ್ಯಾಕ್ಸಿನ್ ಪಡೆದವರಿಗೆ ಮಾತ್ರ ಡ್ಯೂಟಿಗೆ ಅವಕಾಶ ನೀಡಲಾಗಿದೆ. ಇನ್ನೂ ಬಿಎಂಟಿಸಿ ಎಸಿ ವೋಲ್ವೋ ಬಸ್‌ ಸ್ಟಾರ್ಟ್ ಮಾಡದಿರಲು ನಿರ್ಧರಿಸಿರುವ ಬಿಎಂಟಿಸಿ, ಕೊರೊನಾ ಹರಡದಂತೆ ತಡೆಯಲು ಗೂಗಲ್‌ ಪೇ, ಫೋನ್ ಪೇ ಮೂಲಕ ಟಿಕೆಟ್ ನೀಡೋ ವ್ಯವಸ್ಥೆ ಮಾಡ್ತಿದೆ. ವ್ಯಾಕ್ಸಿನ್ ಹಾಕಿಸಿಕೊಳ್ಳದವರು ಕೆಲಸಕ್ಕೆ ಹಾಜರಾಗಲು ಆಗುತ್ತಿಲ್ಲ. ಕೆಲವು ಸಿಬ್ಬಂದಿ ಒಂದು ವಾರ ಹಾಗೂ 15 ದಿನಗಳ ಹಿಂದೆಯೇ ಟೆಸ್ಟ್ ಮಾಡಿಸಿ ರಿಪೋರ್ಟ್ ತರುತ್ತಿದ್ದಾರೆ. ಹಾಗಾಗಿ ಮತ್ತೆ ಆರ್ಟಿಪಿಸಿಆರ್ ಟೆಸ್ಟ್ ಮಾಡಿಸಿ ರಿಪೋರ್ಟ್ ತರುವಂತೆ ಡಿಪೋ ಮ್ಯಾನೇಜರ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಅನ್‌ಲಾಕ್ 2.Oನಲ್ಲಿ ಕೊರೊನಾ ರೂಲ್ಸ್ ಕಂಪ್ಲೀಟ್‌ ಬ್ರೇಕ್‌.. ಕೊರೊನಾ ಮರೆತು ನಿರ್ಲಕ್ಷ್ಯದಲ್ಲಿರುವ ಜನ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?