Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸರ್ಕಾರಿ ನೌಕರರಿಗೆ ಮತ್ತು ವಿಮಾನ ನಿಲ್ದಾಣಕ್ಕೆ ಲಾಕ್​ಡೌನ್ ದಿನಗಳಲ್ಲೂ ಬಸ್​ ಸೇವೆ ಲಭ್ಯ

ಮಾರ್ಗಸೂಚಿಯ ಪ್ರಕಾರ ಬಿಎಂಟಿಸಿಯು 95 ಮಾರ್ಗಗಳಲ್ಲಿ 150 ಟ್ರಿಪ್​ಗಳನ್ನು ಕರ್ಫ್ಯೂ ಅವಧಿಯಲ್ಲಿಯೂ ಒದಗಿಸಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರು ಈ ಸೇವೆಗಳನ್ನು ಬಳಸಿಕೊಳ್ಳಬಹುದು.

ಬೆಂಗಳೂರಿನಲ್ಲಿ ಸರ್ಕಾರಿ ನೌಕರರಿಗೆ ಮತ್ತು ವಿಮಾನ ನಿಲ್ದಾಣಕ್ಕೆ ಲಾಕ್​ಡೌನ್ ದಿನಗಳಲ್ಲೂ ಬಸ್​ ಸೇವೆ ಲಭ್ಯ
ಬಿಎಂಟಿಸಿ ಬಸ್ (ಸಾಂದರ್ಭಿಕ ಚಿತ್ರ)
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Apr 27, 2021 | 10:49 PM

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ 2ನೇ ಅಲೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ಸರ್ಕಾರಿ ಜಾರಿ ಮಾಡಿರುವ 14 ದಿನಗಳ ಕೊವಿಡ್ ಕರ್ಫ್ಯೂ ಇಂದು (ಏಪ್ರಿಲ್ 27) ರಾತ್ರಿ 9 ಗಂಟೆಯಿಂದ ಜಾರಿಗೆ ಬಂದಿದೆ. ಕೆಎಸ್​ಆರ್​ಟಿಸಿಯ ಕೊನೆಯ ಬಸ್ ಮೆಜೆಸ್ಟಿಕ್ ಬಸ್​ ನಿಲ್ದಾಣದಿಂದ ಹೊರ ಹೊರಟ ನಂತರ ಅಲ್ಲಿನ ಸಿಬ್ಬಂದಿ ಬ್ಯಾರಿಕೇಡ್​ಗಳನ್ನು ಅಳವಡಿಸಿ ನಿಲ್ದಾಣ ದ್ವಾರಗಳನ್ನು ಬಂದ್ ಮಾಡಿದರು. ರಾಜ್ಯದಲ್ಲಿ ಇನ್ನು 14 ದಿನ ಬಸ್ ಸಂಚಾರ ಇರುವುದಿಲ್ಲ ಎನ್ನುವುದನ್ನು ಇದು ಸಾಂಕೇತಿಕವಾಗಿ ತಿಳಿಸಿತು.

ಏಪ್ರಿಲ್ 27ರ ರಾತ್ರಿ 9 ಗಂಟೆಯಿಂದ ಮೇ 12ರ ಬೆಳಿಗ್ಗೆ 6 ಗಂಟೆಯವರೆಗೆ ಬಿಎಂಟಿಸಿ ಬಸ್​ ಸೇವೆಯನ್ನು ಜನಸಾಮಾನ್ಯರಿಗೆ ನಿರ್ಬಂಧಿಸಲಾಗಿದೆ. ಆದರೆ ಮಾರ್ಗಸೂಚಿಯ ಪ್ರಕಾರ ಬಿಎಂಟಿಸಿಯು 95 ಮಾರ್ಗಗಳಲ್ಲಿ 150 ಟ್ರಿಪ್​ಗಳನ್ನು ಕರ್ಫ್ಯೂ ಅವಧಿಯಲ್ಲಿಯೂ ಒದಗಿಸಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರು ಈ ಸೇವೆಗಳನ್ನು ಬಳಸಿಕೊಳ್ಳಬಹುದು. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ವಾಯುವಜ್ರ’ ಸೇವೆಯೂ ಸೀಮಿತ ಸಂಖ್ಯೆಯಲ್ಲಿ ಲಭ್ಯವಿದೆ.

ಸರ್ಕಾರದ ಸೂಚನೆಯಂತೆ ಅತ್ಯಗತ್ಯ ಕ್ಷೇತ್ರಗಳು ಎಂದು ಗುರುತಿಸಿರುವ ಸಂಸ್ಥೆಗಳ ಉದ್ಯೋಗಿಗಳು ಮಾತ್ರ ಈ ಸೇವೆಗಳನ್ನು ಬಳಸಿಕೊಳ್ಳಬಹುದು. ಸಾಮಾನ್ಯ ಜನರನ್ನು ಬಸ್​ಗಳಿಗೆ ಹತ್ತಿಸಿಕೊಳ್ಳುವುದಿಲ್ಲ. ಬಸ್​ನ ಧಾರಣ ಸಾಮರ್ಥ್ಯದ ಅರ್ಧದಷ್ಟು ಜನರು ಮಾತ್ರವೇ ಸಂಚರಿಸಬಹುದಾಗಿದೆ. ಎಲ್ಲ ಸಿಬ್ಬಂದಿ ಮತ್ತು ಪ್ರಯಾಣಿಕರು ಕೊವಿಡ್-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಬಿಎಂಟಿಸಿ ಪತ್ರಿಕಾ ಹೇಳಿಕೆ ತಿಳಿಸಿದೆ.

ಕೆಎಸ್​ಆರ್​ಟಿಸಿ ಸಹ ವಿಮಾನ ನಿಲ್ದಾಣದ ಬಸ್ ಸೇವೆಗಳನ್ನು ಯಥಾರೀತಿ ಮುಂದುವರಿಸುವ ಭರವಸೆ ನೀಡಿದೆ. ಮೈಸೂರು ಮತ್ತು ಮಡಿಕೇರಿಯಿಂದ ಕೆಎಸ್​ಆರ್​ಟಿಸಿ ಫ್ಲೈ ಬಸ್ ಸೇವೆಗಳು ಲಭ್ಯವಿರುತ್ತವೆ ಎಂದು ಕೆಎಸ್​ಆರ್​ಟಿಸಿ ಪ್ರಕಟಣೆ ತಿಳಿಸಿದೆ.

(BMTC busses available for essential services in Bengaluru from April 28)

ಇದನ್ನೂ ಓದಿ: ಜಾರಿಯಾಯ್ತು ಕೊರೊನಾ ಕರ್ಫ್ಯೂ: ಬೆಂಗಳೂರಿನಿಂದ ಹೊರಟವು 6000ಕ್ಕೂ ಹೆಚ್ಚು ಬಸ್

ಇದನ್ನೂ ಓದಿ: 9 ಗಂಟೆಯಿಂದ ಜಾರಿಯಾಯ್ತು ಕೊರೊನಾ ಕರ್ಫ್ಯೂ: ಏನಿರುತ್ತೆ? ಏನಿರಲ್ಲ? ಯಾವುದಕ್ಕೆ ಅನುಮತಿ? ಇಲ್ಲಿದೆ ಮಾಹಿತಿ

Published On - 10:43 pm, Tue, 27 April 21

‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್‌ನಲ್ಲಿ ಅಗ್ನಿ ಅವಘಡ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
ಬೃಹತ್ ಜಾತಿ ಗಣತಿ ವರದಿಯನ್ನು ಯಾರೂ ಓದಿದಂತಿಲ್ಲ, ಓದಲು ಸಮಯ ಹಿಡಿಯಲಿದೆ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
25 ವರ್ಷಗಳ ಹಿಂದೆಯೇ ಬ್ಯಾಂಕ್ ಜನಾರ್ದನ್​ಗೆ ಹಾರ್ಟ್ ಸಮಸ್ಯೆ: ಸಾಧು ಕೋಕಿಲ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಭಾರತದ ಲೇಸರ್ ವೆಪನ್ ಸಿಸ್ಟಂ ಪ್ರಯೋಗದ ವಿಡಿಯೋ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಕುಮಾರಸ್ವಾಮಿ ಮನೆಗೆ ಲೇಟಾಗಿ ಹೋಗಿದ್ದರೆ ಅವರೇ ಅದಕ್ಕೆ ಜಬಾಬ್ದಾರರು: ಸಚಿವ
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಪಬ್ಲಿಕ್​ನಲ್ಲಿ ಮುಸ್ಲಿಂ ಮಹಿಳೆಯ ಹಿಜಾಬ್ ಕಳಚಿದ ಪುರುಷರು
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್
ಭಯಾನಕ ವಿಡಿಯೋ: ಜೀಪ್ ರ‍್ಯಾಲಿ ನಡೆಯುವ ವೇಳೆ‌ ಕಾಡಾನೆ ಡೆಡ್ಲಿ ಅಟ್ಯಾಕ್