AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸರ್ಕಾರಿ ನೌಕರರಿಗೆ ಮತ್ತು ವಿಮಾನ ನಿಲ್ದಾಣಕ್ಕೆ ಲಾಕ್​ಡೌನ್ ದಿನಗಳಲ್ಲೂ ಬಸ್​ ಸೇವೆ ಲಭ್ಯ

ಮಾರ್ಗಸೂಚಿಯ ಪ್ರಕಾರ ಬಿಎಂಟಿಸಿಯು 95 ಮಾರ್ಗಗಳಲ್ಲಿ 150 ಟ್ರಿಪ್​ಗಳನ್ನು ಕರ್ಫ್ಯೂ ಅವಧಿಯಲ್ಲಿಯೂ ಒದಗಿಸಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರು ಈ ಸೇವೆಗಳನ್ನು ಬಳಸಿಕೊಳ್ಳಬಹುದು.

ಬೆಂಗಳೂರಿನಲ್ಲಿ ಸರ್ಕಾರಿ ನೌಕರರಿಗೆ ಮತ್ತು ವಿಮಾನ ನಿಲ್ದಾಣಕ್ಕೆ ಲಾಕ್​ಡೌನ್ ದಿನಗಳಲ್ಲೂ ಬಸ್​ ಸೇವೆ ಲಭ್ಯ
ಬಿಎಂಟಿಸಿ ಬಸ್ (ಸಾಂದರ್ಭಿಕ ಚಿತ್ರ)
Ghanashyam D M | ಡಿ.ಎಂ.ಘನಶ್ಯಾಮ
|

Updated on:Apr 27, 2021 | 10:49 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ 2ನೇ ಅಲೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ಸರ್ಕಾರಿ ಜಾರಿ ಮಾಡಿರುವ 14 ದಿನಗಳ ಕೊವಿಡ್ ಕರ್ಫ್ಯೂ ಇಂದು (ಏಪ್ರಿಲ್ 27) ರಾತ್ರಿ 9 ಗಂಟೆಯಿಂದ ಜಾರಿಗೆ ಬಂದಿದೆ. ಕೆಎಸ್​ಆರ್​ಟಿಸಿಯ ಕೊನೆಯ ಬಸ್ ಮೆಜೆಸ್ಟಿಕ್ ಬಸ್​ ನಿಲ್ದಾಣದಿಂದ ಹೊರ ಹೊರಟ ನಂತರ ಅಲ್ಲಿನ ಸಿಬ್ಬಂದಿ ಬ್ಯಾರಿಕೇಡ್​ಗಳನ್ನು ಅಳವಡಿಸಿ ನಿಲ್ದಾಣ ದ್ವಾರಗಳನ್ನು ಬಂದ್ ಮಾಡಿದರು. ರಾಜ್ಯದಲ್ಲಿ ಇನ್ನು 14 ದಿನ ಬಸ್ ಸಂಚಾರ ಇರುವುದಿಲ್ಲ ಎನ್ನುವುದನ್ನು ಇದು ಸಾಂಕೇತಿಕವಾಗಿ ತಿಳಿಸಿತು.

ಏಪ್ರಿಲ್ 27ರ ರಾತ್ರಿ 9 ಗಂಟೆಯಿಂದ ಮೇ 12ರ ಬೆಳಿಗ್ಗೆ 6 ಗಂಟೆಯವರೆಗೆ ಬಿಎಂಟಿಸಿ ಬಸ್​ ಸೇವೆಯನ್ನು ಜನಸಾಮಾನ್ಯರಿಗೆ ನಿರ್ಬಂಧಿಸಲಾಗಿದೆ. ಆದರೆ ಮಾರ್ಗಸೂಚಿಯ ಪ್ರಕಾರ ಬಿಎಂಟಿಸಿಯು 95 ಮಾರ್ಗಗಳಲ್ಲಿ 150 ಟ್ರಿಪ್​ಗಳನ್ನು ಕರ್ಫ್ಯೂ ಅವಧಿಯಲ್ಲಿಯೂ ಒದಗಿಸಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರು ಈ ಸೇವೆಗಳನ್ನು ಬಳಸಿಕೊಳ್ಳಬಹುದು. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ವಾಯುವಜ್ರ’ ಸೇವೆಯೂ ಸೀಮಿತ ಸಂಖ್ಯೆಯಲ್ಲಿ ಲಭ್ಯವಿದೆ.

ಸರ್ಕಾರದ ಸೂಚನೆಯಂತೆ ಅತ್ಯಗತ್ಯ ಕ್ಷೇತ್ರಗಳು ಎಂದು ಗುರುತಿಸಿರುವ ಸಂಸ್ಥೆಗಳ ಉದ್ಯೋಗಿಗಳು ಮಾತ್ರ ಈ ಸೇವೆಗಳನ್ನು ಬಳಸಿಕೊಳ್ಳಬಹುದು. ಸಾಮಾನ್ಯ ಜನರನ್ನು ಬಸ್​ಗಳಿಗೆ ಹತ್ತಿಸಿಕೊಳ್ಳುವುದಿಲ್ಲ. ಬಸ್​ನ ಧಾರಣ ಸಾಮರ್ಥ್ಯದ ಅರ್ಧದಷ್ಟು ಜನರು ಮಾತ್ರವೇ ಸಂಚರಿಸಬಹುದಾಗಿದೆ. ಎಲ್ಲ ಸಿಬ್ಬಂದಿ ಮತ್ತು ಪ್ರಯಾಣಿಕರು ಕೊವಿಡ್-19 ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಬಿಎಂಟಿಸಿ ಪತ್ರಿಕಾ ಹೇಳಿಕೆ ತಿಳಿಸಿದೆ.

ಕೆಎಸ್​ಆರ್​ಟಿಸಿ ಸಹ ವಿಮಾನ ನಿಲ್ದಾಣದ ಬಸ್ ಸೇವೆಗಳನ್ನು ಯಥಾರೀತಿ ಮುಂದುವರಿಸುವ ಭರವಸೆ ನೀಡಿದೆ. ಮೈಸೂರು ಮತ್ತು ಮಡಿಕೇರಿಯಿಂದ ಕೆಎಸ್​ಆರ್​ಟಿಸಿ ಫ್ಲೈ ಬಸ್ ಸೇವೆಗಳು ಲಭ್ಯವಿರುತ್ತವೆ ಎಂದು ಕೆಎಸ್​ಆರ್​ಟಿಸಿ ಪ್ರಕಟಣೆ ತಿಳಿಸಿದೆ.

(BMTC busses available for essential services in Bengaluru from April 28)

ಇದನ್ನೂ ಓದಿ: ಜಾರಿಯಾಯ್ತು ಕೊರೊನಾ ಕರ್ಫ್ಯೂ: ಬೆಂಗಳೂರಿನಿಂದ ಹೊರಟವು 6000ಕ್ಕೂ ಹೆಚ್ಚು ಬಸ್

ಇದನ್ನೂ ಓದಿ: 9 ಗಂಟೆಯಿಂದ ಜಾರಿಯಾಯ್ತು ಕೊರೊನಾ ಕರ್ಫ್ಯೂ: ಏನಿರುತ್ತೆ? ಏನಿರಲ್ಲ? ಯಾವುದಕ್ಕೆ ಅನುಮತಿ? ಇಲ್ಲಿದೆ ಮಾಹಿತಿ

Published On - 10:43 pm, Tue, 27 April 21

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್