AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ರಿಸೆಪ್ಷನ್​ನಲ್ಲಿದ್ದ ವರ ಬೆಳಗ್ಗೆ ಮುಹೂರ್ತಕ್ಕೆ ನಾಪತ್ತೆ; ಕೊನೆಗೆ ವಧು ಕೈ ಹಿಡಿದ BMTC ಕಂಡಕ್ಟರ್

ರಾತ್ರಿ ರಿಸೆಪ್ಷನ್​ನಲ್ಲಿದ್ದ ವರ ಬೆಳಗ್ಗೆ ಮುಹೂರ್ತಕ್ಕೆ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ತರೀಕೆರೆಯ ಶೃಂಗೇರಿ ಸಮುದಾಯ ಭವನದಲ್ಲಿ ನಡೆದಿದೆ. ಮದುವೆ ಛತ್ರದಲ್ಲೇ ಇದ್ದ ಮತ್ತೋರ್ವ ಯುವಕ ಮಧುಮಗಳ ಕೈ ಹಿಡಿದು ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.

ರಾತ್ರಿ ರಿಸೆಪ್ಷನ್​ನಲ್ಲಿದ್ದ ವರ ಬೆಳಗ್ಗೆ ಮುಹೂರ್ತಕ್ಕೆ ನಾಪತ್ತೆ; ಕೊನೆಗೆ ವಧು ಕೈ ಹಿಡಿದ BMTC ಕಂಡಕ್ಟರ್
ನವದಂಪತಿಯ ಮುದ್ದಾದ ಫೋಟೋಗಳು!
KUSHAL V
| Edited By: |

Updated on: Jan 03, 2021 | 6:08 PM

Share

ಚಿಕ್ಕಮಗಳೂರು: ರಾತ್ರಿ ರಿಸೆಪ್ಷನ್​ನಲ್ಲಿದ್ದ ವರ ಬೆಳಗ್ಗೆ ಮುಹೂರ್ತದ ವೇಳೆಗೆ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ತರೀಕೆರೆಯ ಶೃಂಗೇರಿ ಸಮುದಾಯ ಭವನದಲ್ಲಿ ನಡೆದಿದೆ. ಈ ನಡುವೆ, ಮದುವೆ ಛತ್ರದಲ್ಲೇ ಇದ್ದ ಮತ್ತೋರ್ವ ಯುವಕ ಮದುಮಗಳ ಕೈ ಹಿಡಿದು ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.

ಏನಿದು ಸ್ಟೋರಿ? ಬೈ ದಿ ಬೈ, ದೋರನಾಳು ಗ್ರಾಮದ ನವೀನ್ ಎಂಬ ಯುವಕ ಹಾಗೂ ಸಿಂಧು ಎಂಬ ಯುವತಿಗೆ ಮದುವೆ ನಿಶ್ಚಯವಾಗಿತ್ತು. ಅಂತೆಯೇ, ನಿನ್ನೆ ಶೃಂಗೇರಿ ಸಮುದಾಯ ಭವನದಲ್ಲಿ ಗಂಡು ಹೆಣ್ಣನ್ನು ಕೂಡಿಸಿ ಅದ್ಧೂರಿ ರಿಸೆಪ್ಷನ್​ ಸಹ ಏರ್ಪಡಿಸಲಾಗಿತ್ತು.

ಲವರ್​ ಮುನಿದಿದ್ದಕ್ಕೆ ವರ ಪರಾರಿ! ಈ ನಡುವೆ, ಸೈಕಲ್​ ಗ್ಯಾಪ್​ನಲ್ಲಿ, ನವೀನ್​ ಪ್ರೀತಿಸುತ್ತಿದ್ದ ಹುಡುಗಿ ಅಚಾನಕ್​ ಆಗಿ ಛತ್ರಕ್ಕೆ ಎಂಟ್ರಿಕೊಟ್ಟು ಮದುವೆ ನಿಲ್ಲಿಸುವುದಾಗಿ ಧಮ್ಕಿ ಹಾಕಿದ್ದಾಳಂತೆ. ಇದರಿಂದ ಪತರಗುಟ್ಟಿ ಹೋದ ವರ ಕಲ್ಯಾಣ ಮಂಟಪದಿಂದಲೇ ಎಸ್ಕೇಪ್​! ಕುಟುಂಬಸ್ಥರು ಆತನಿಗಾಗಿ ಎಲ್ಲಿ ಹುಡುಕಿದರೂ ಸಿಗಲೇ ಇಲ್ಲವಂತೆ.

ಇತ್ತ, ವರ ಪರಾರಿಯಾದ ಬೆನ್ನಲ್ಲೇ ಕಂಗೆಟ್ಟು ಹೋಗಿದ್ದ ಸಿಂಧು ಪಾಡು ನೋಡಿ ಛತ್ರದಲ್ಲೇ ಇದ್ದ ಮತ್ತೋರ್ವ ಯುವಕ ಆಕೆಯ ಕೈಹಿಡಿದ್ದಾನೆ. BMTCಯಲ್ಲಿ ಕಂಡಕ್ಟರ್​ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ತರೀಕೆರೆ ತಾಲೂಕಿನ ನಂದಿ ಗ್ರಾಮದ ಯುವಕ ಚಂದ್ರು ಸಿಂಧುವನ್ನು ವರಿಸಿ ಎಲ್ಲರ ಪ್ರಶಂಸೆಗೆ ಪಾತ್ರನಾಗಿದ್ದಾನೆ. ಜೊತೆಗೆ, ಒಳ್ಳೇ ಉದ್ಯೋಗದಲ್ಲಿರುವ ಹುಡುಗ ನನಗೆ ಸಿಕ್ಕಿದ್ದು ನನ್ನ ಸೌಭಾಗ್ಯ ಎಂದು ಸಿಂಧು ಸಂತಸ ವ್ಯಕ್ತಪಡಿಸಿದ್ದಾಳೆ.

ಜೂ. ಒಡೆಯರ್ ಗೆ 3ನೇ ಹುಟ್ಟು ಹಬ್ಬ.. ಅಮ್ಮನ ತೋಳಲ್ಲಿ ನಲಿದಾಡಿದ ಕಂದ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?