Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಪ್ರಯಾಣಿಕರಿಗೆ ಶಾಕಿಂಗ್; ಪ್ರಯಾಣ ದರ ಹೆಚ್ಚಳ ಸಾಧ್ಯತೆ

ಕಳೆದ ಬಾರಿ ಬಜೆಟ್ ಸಂದರ್ಭದಲ್ಲಿ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಸರ್ಕಾರ ಬಿಎಂಟಿಸಿ ಪ್ರಸ್ತಾವನೆಯನ್ನು ತಿರಸ್ಕರಿಸಿತ್ತು. ಈಗ ಡೀಸೆಲ್ ದರ ಬಾರಿ ಹೆಚ್ಚಳವಾಗಿರುವ ಹಿನ್ನೆಲೆ ಮತ್ತೊಮ್ಮೆ ಟಿಕೆಟ್ ದರ ಹೆಚ್ಚಳಕ್ಕೆ ಬಿಎಂಟಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಶೇ.18ರಿಂದ 20ರಷ್ಟು ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ.

ಬಿಎಂಟಿಸಿ ಪ್ರಯಾಣಿಕರಿಗೆ ಶಾಕಿಂಗ್; ಪ್ರಯಾಣ ದರ ಹೆಚ್ಚಳ ಸಾಧ್ಯತೆ
ಬಿಎಂಟಿಸಿ ಬಸ್
Follow us
TV9 Web
| Updated By: sandhya thejappa

Updated on: Jun 07, 2021 | 11:36 AM

ಬೆಂಗಳೂರು: ಲಾಕ್​ಡೌನ್​ನಿಂದ ಸಾಮಾನ್ಯ ಜನರು ಕೆಲಸವಿಲ್ಲದೆ ಒಂದು ಹೊತ್ತು ಊಟಕ್ಕೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಯಾವಾಗ ಅನ್​ಲಾಕ್​ ಘೋಷಿಸುತ್ತದೆ ಎಂದು ಕಾದು ಕೂತಿದ್ದಾರೆ. ಈ ನಡುವೆ ಬಿಎಂಟಿಸಿ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳುವ ಸಾಧ್ಯತೆಯಿದೆ. ಲಾಕ್​ಡೌನ್​ ತೆರವುಗೊಂಡ ಬಳಿಕ ಬಿಎಂಟಿಸಿ ಟಿಕೆಟ್ ದರ ಶೇಕಡಾ 20ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕಳೆದ ಬಾರಿ ಬಜೆಟ್ ಸಂದರ್ಭದಲ್ಲಿ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಸರ್ಕಾರ ಬಿಎಂಟಿಸಿ ಪ್ರಸ್ತಾವನೆಯನ್ನು ತಿರಸ್ಕರಿಸಿತ್ತು. ಈಗ ಡೀಸೆಲ್ ದರ ಬಾರಿ ಹೆಚ್ಚಳವಾಗಿರುವ ಹಿನ್ನೆಲೆ ಮತ್ತೊಮ್ಮೆ ಟಿಕೆಟ್ ದರ ಹೆಚ್ಚಳಕ್ಕೆ ಬಿಎಂಟಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಶೇ.18ರಿಂದ 20ರಷ್ಟು ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಬಿಎಂಟಿಸಿ ಸಲ್ಲಿಕೆಯನ್ನು ಸರ್ಕಾರ ಒಪ್ಪುವ ಸಾಧ್ಯತೆ ಹೆಚ್ಚಿದೆ.

ಕಳೆದ ವರ್ಷ ಜೂನ್ನಲ್ಲಿ 65.85 ರೂಪಾಯಿ ಇದ್ದ ಡಿಸೇಲ್ ಬೆಲೆ, ಈ ವರ್ಷ ಜೂನ್​ನಲ್ಲಿ 91.18 ರೂಪಾಯಿ ಹೆಚ್ಚಳವಾಗಿದೆ. ಒಂದು ವರ್ಷದಲ್ಲಿ ಡಿಸೇಲ್ ಬೆಲೆಯಲ್ಲಿ 25 ರೂಪಾಯಿ ಹೆಚ್ಚಳವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಇನ್ನಷ್ಟು ಡಿಸೇಲ್ ಬೆಲೆ ಏರಿಕೆಯಾಗುತ್ತಲೆ ಇದೆ. ಜೊತೆಗೆ ಕೊರೊನಾ ಎಫೆಕ್ಟ್ ಹಾಗೂ ಮುಷ್ಕರದಿಂದಾಗಿ ಬಿಎಂಟಿಸಿ ನಿಗಮ ಆರ್ಥಿಕ ನಷ್ಟದಲ್ಲಿದೆ. ಕೊರೊನಾದಿಂದಾಗಿ ಬಿಎಂಟಿಸಿ ಬಸ್ ಸಂಚಾರ ಸಂಪೂರ್ಣ ಸ್ತಬ್ಧವಾಗಿದೆ. ಹೀಗಾಗಿ ಟಿಕೆಟ್ ದರ ಹೆಚ್ಚಳಕ್ಕೆ ಮತ್ತೊಮ್ಮೆ ಬಿಎಂಟಿಸಿ ಪ್ರಸ್ತಾವನೆ ಇಟ್ಟಿದೆ.

ಇದನ್ನೂ ಓದಿ

ಹೈಕಮಾಂಡ್ ಹೇಳಿದ್ರೆ ರಾಜೀನಾಮೆ ಎಂಬ ಸಿಎಂ ಮಾತಿನ ಹಿಂದೆ ಅಡಗಿದೆ ವಿರೋಧಿಗಳಿಗೆ ತಕ್ಕ ಉತ್ತರ.. ಸಿಎಂ ಈ ಹೇಳಿಕೆ ನೀಡಿದ್ದು ಏಕೆ ಗೊತ್ತಾ?

ಲಾಕ್​ಡೌನ್​ ಇನ್ನೂ ಜಾರಿಯಲ್ಲಿದೆ, ಕೊರೊನಾ ಹಾವಳಿ ಮುಗಿದಿಲ್ಲ: ಬೆಂಗಳೂರಿಗೆ ವಾಪಸಾಗುವವರಿಗೆ ಎಚ್ಚರಿಕೆಯ ಗಂಟೆ

(BMTC has proposed to the government to increase travel rates)

ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ