AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರ ಅಮಾನತು ವಿಚಾರ: ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದೇನು?

ಅಮಾನತು ಕುರಿತಂತೆ ಒಕ್ಕೂಟವು ಮಾಹಿತಿ ಕಲೆ ಹಾಕಲಾಗುತ್ತಿದೆ. ಅಮಾನತು ಮಾಡಲು ಕಾರಣ ಏನು ಅನ್ನೋದನ್ನ ತಿಳಿದುಕೊಂಡು ನಂತರ ಸಂಬಂಧಪಟ್ಟವರ ಜೊತೆ ಮಾತುಕತೆ ನಡೆಸಲಾಗುವುದು ಎಂದು ಸಾರಿಗೆ ಸಿಬ್ಬಂದಿ ಸರ್ಕಾರಿ ನೌಕರರಾಗುವ ಹೋರಾಟ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಹೇಳಿಕೆ ನೀಡಿದ್ದಾರೆ.

ಸಾರಿಗೆ ನೌಕರರ ಅಮಾನತು ವಿಚಾರ: ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದೇನು?
ಸಾಂದರ್ಭಿಕ ಚಿತ್ರ
Follow us
Skanda
| Updated By: ಸಾಧು ಶ್ರೀನಾಥ್​

Updated on: Dec 18, 2020 | 3:05 PM

ಬೆಂಗಳೂರು: ಸಾರಿಗೆ ನೌಕರರ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸಿತು. ಆದರೆ, ಅದನ್ನು ನಾವು ಈಗಾಗಲೇ ಒಂದು ಹಂತಕ್ಕೆ ತೆಗೆದುಕೊಂಡು ಹೋಗಿದ್ದೇವೆ. ಈಗ 40 ರಿಂದ 50 ಜನ ನೌಕರರನ್ನು ಅಮಾನತು ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಅಮಾನತು ಕುರಿತಂತೆ ಒಕ್ಕೂಟವು ಮಾಹಿತಿ ಕಲೆ ಹಾಕಲಾಗುತ್ತಿದೆ. ಅಮಾನತು ಮಾಡಲು ಕಾರಣ ಏನು ಅನ್ನೋದನ್ನ ತಿಳಿದುಕೊಂಡು ನಂತರ ಸಂಬಂಧಪಟ್ಟವರ ಜೊತೆ ಮಾತುಕತೆ ನಡೆಸಲಾಗುವುದು ಎಂದು ಸಾರಿಗೆ ಸಿಬ್ಬಂದಿ ಸರ್ಕಾರಿ ನೌಕರರಾಗುವ ಹೋರಾಟ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಹೇಳಿಕೆ ನೀಡಿದ್ದಾರೆ.

ವೇತನ ಕಡಿತ, ಕೇಸ್ ದಾಖಲು ವಿಚಾರ ಕುರಿತಂತೆ ಸಂಬಂಧಿಸಿದ ಇಲಾಖೆಯೊಂದಿಗೆ ಮಾತುಕತೆ ನಡೆಸಲಾಗುವುದು. ಸಾರಿಗೆ ಹೋರಾಟವನ್ನು ಹತ್ತಿಕುವ ಯೋಚನೆ ಇತ್ತು ಆದರೆ ನಾವು ಅದನ್ನು ಒಂದು ಹಂತಕ್ಕೆ ತೆಗೆದುಕೊಂಡು ಹೋದೆವು. ನಾನು ರೇಣುಕಾಚಾರ್ಯ ಹೇಳಿಕೆಗೆ ರಿಯಾಕ್ಟ್ ಮಾಡುವುದಿಲ್ಲ. ಸರ್ಕಾರ ನನ್ನ ಮೇಲೆ‌ ಮುಗಿಬೀಳೋಕೆ ನಿರ್ದೇಶನ ಕೊಟ್ಟಿದೆ. ಅದರಲ್ಲಿ ರೇಣುಕಾಚಾರ್ಯ ಕೂಡ ಒಬ್ಬರು ಎನ್ನುವುದು ಗೊತ್ತಿರುವ ವಿಚಾರ ಎಂದು ಹೇಳಿದರು.

ನಾನು ಯಾರಿಗೂ ಹೆದರಬೇಕಾದ ಅಗತ್ಯವಿಲ್ಲ. ನನ್ನ ಮೇಲೆ ಮಾಡಿರುವ ಆರೋಪಕ್ಕೆ ಕುರಿತಂತೆ ದಾಖಲೆ‌ ಬಿಡುಗಡೆ ಮಾಡಲಿ. ನನ್ನ ಆಸ್ತಿಪಾಸ್ತಿಯನ್ನು ಸರ್ಕಾರ ಪರಿಶೀಲನೆ ಮಾಡಲಿ. ಅಗತ್ಯವಿದ್ದರೆ ಮುಟ್ಟುಗೋಲು ಹಾಕಿಕೊಳ್ಳಲಿ. ಸರ್ಕಾರ ಅವರದ್ದೇ ಆಗಿದೆ, ಅವರೇ ತನಿಖೆ ನಡೆಸಲಿ ಅಂತಾ ಸವಾಲೆಸೆದರು.

ಸರ್ಕಾರಕ್ಕೆ ಮತ್ತೆ ಎಲ್ಲಿ ಹೋರಾಟ ಶುರುವಾಗುತ್ತೋ ಎಂಬ ಆತಂಕ ಇದೆ. ಹಾಗಾಗಿ ಅವರು ಬಾಯಿ ಮುಚ್ಚಿಸಲು ಶ್ರಮ ಪಡುತ್ತಿದ್ದಾರೆ. ಅವರು ಏನೇ ಮಾಡಿದರೂ ಹೆದರುವುದಿಲ್ಲ. ಬೇಕಿದ್ದರೆ ನನ್ನ ಆಸ್ತಿ ಯಾರದ್ದು, ಯಾರ ಹೆಸರಿನಲ್ಲಿ ಇದೆ ಎಂಬುದನ್ನು ನೋಡಲಿ ಎಂದು ಟಿವಿ9ಗೆ ಪ್ರತಿಕ್ರಿಯಿಸಿದ್ದಾರೆ.

ಮುಷ್ಕರದ ಬಿಸಿ ಆರುತ್ತಿದ್ದಂತೆ.. ಸಾರಿಗೆ ನೌಕರರು ಅಮಾನತು: ನೌಕರರು ಫುಲ್ ಗರಂ, ಮತ್ತೆ ಹೋರಾಟದ ಎಚ್ಚರಿಕೆ

5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ