AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರಿಗೆ ನೌಕರರ ಅಮಾನತು ವಿಚಾರ: ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದೇನು?

ಅಮಾನತು ಕುರಿತಂತೆ ಒಕ್ಕೂಟವು ಮಾಹಿತಿ ಕಲೆ ಹಾಕಲಾಗುತ್ತಿದೆ. ಅಮಾನತು ಮಾಡಲು ಕಾರಣ ಏನು ಅನ್ನೋದನ್ನ ತಿಳಿದುಕೊಂಡು ನಂತರ ಸಂಬಂಧಪಟ್ಟವರ ಜೊತೆ ಮಾತುಕತೆ ನಡೆಸಲಾಗುವುದು ಎಂದು ಸಾರಿಗೆ ಸಿಬ್ಬಂದಿ ಸರ್ಕಾರಿ ನೌಕರರಾಗುವ ಹೋರಾಟ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಹೇಳಿಕೆ ನೀಡಿದ್ದಾರೆ.

ಸಾರಿಗೆ ನೌಕರರ ಅಮಾನತು ವಿಚಾರ: ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದೇನು?
ಸಾಂದರ್ಭಿಕ ಚಿತ್ರ
Skanda
| Edited By: |

Updated on: Dec 18, 2020 | 3:05 PM

Share

ಬೆಂಗಳೂರು: ಸಾರಿಗೆ ನೌಕರರ ಹೋರಾಟವನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸಿತು. ಆದರೆ, ಅದನ್ನು ನಾವು ಈಗಾಗಲೇ ಒಂದು ಹಂತಕ್ಕೆ ತೆಗೆದುಕೊಂಡು ಹೋಗಿದ್ದೇವೆ. ಈಗ 40 ರಿಂದ 50 ಜನ ನೌಕರರನ್ನು ಅಮಾನತು ಮಾಡಲಾಗಿದೆ ಎಂಬ ಮಾಹಿತಿ ಸಿಕ್ಕಿದೆ. ಅಮಾನತು ಕುರಿತಂತೆ ಒಕ್ಕೂಟವು ಮಾಹಿತಿ ಕಲೆ ಹಾಕಲಾಗುತ್ತಿದೆ. ಅಮಾನತು ಮಾಡಲು ಕಾರಣ ಏನು ಅನ್ನೋದನ್ನ ತಿಳಿದುಕೊಂಡು ನಂತರ ಸಂಬಂಧಪಟ್ಟವರ ಜೊತೆ ಮಾತುಕತೆ ನಡೆಸಲಾಗುವುದು ಎಂದು ಸಾರಿಗೆ ಸಿಬ್ಬಂದಿ ಸರ್ಕಾರಿ ನೌಕರರಾಗುವ ಹೋರಾಟ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​ ಹೇಳಿಕೆ ನೀಡಿದ್ದಾರೆ.

ವೇತನ ಕಡಿತ, ಕೇಸ್ ದಾಖಲು ವಿಚಾರ ಕುರಿತಂತೆ ಸಂಬಂಧಿಸಿದ ಇಲಾಖೆಯೊಂದಿಗೆ ಮಾತುಕತೆ ನಡೆಸಲಾಗುವುದು. ಸಾರಿಗೆ ಹೋರಾಟವನ್ನು ಹತ್ತಿಕುವ ಯೋಚನೆ ಇತ್ತು ಆದರೆ ನಾವು ಅದನ್ನು ಒಂದು ಹಂತಕ್ಕೆ ತೆಗೆದುಕೊಂಡು ಹೋದೆವು. ನಾನು ರೇಣುಕಾಚಾರ್ಯ ಹೇಳಿಕೆಗೆ ರಿಯಾಕ್ಟ್ ಮಾಡುವುದಿಲ್ಲ. ಸರ್ಕಾರ ನನ್ನ ಮೇಲೆ‌ ಮುಗಿಬೀಳೋಕೆ ನಿರ್ದೇಶನ ಕೊಟ್ಟಿದೆ. ಅದರಲ್ಲಿ ರೇಣುಕಾಚಾರ್ಯ ಕೂಡ ಒಬ್ಬರು ಎನ್ನುವುದು ಗೊತ್ತಿರುವ ವಿಚಾರ ಎಂದು ಹೇಳಿದರು.

ನಾನು ಯಾರಿಗೂ ಹೆದರಬೇಕಾದ ಅಗತ್ಯವಿಲ್ಲ. ನನ್ನ ಮೇಲೆ ಮಾಡಿರುವ ಆರೋಪಕ್ಕೆ ಕುರಿತಂತೆ ದಾಖಲೆ‌ ಬಿಡುಗಡೆ ಮಾಡಲಿ. ನನ್ನ ಆಸ್ತಿಪಾಸ್ತಿಯನ್ನು ಸರ್ಕಾರ ಪರಿಶೀಲನೆ ಮಾಡಲಿ. ಅಗತ್ಯವಿದ್ದರೆ ಮುಟ್ಟುಗೋಲು ಹಾಕಿಕೊಳ್ಳಲಿ. ಸರ್ಕಾರ ಅವರದ್ದೇ ಆಗಿದೆ, ಅವರೇ ತನಿಖೆ ನಡೆಸಲಿ ಅಂತಾ ಸವಾಲೆಸೆದರು.

ಸರ್ಕಾರಕ್ಕೆ ಮತ್ತೆ ಎಲ್ಲಿ ಹೋರಾಟ ಶುರುವಾಗುತ್ತೋ ಎಂಬ ಆತಂಕ ಇದೆ. ಹಾಗಾಗಿ ಅವರು ಬಾಯಿ ಮುಚ್ಚಿಸಲು ಶ್ರಮ ಪಡುತ್ತಿದ್ದಾರೆ. ಅವರು ಏನೇ ಮಾಡಿದರೂ ಹೆದರುವುದಿಲ್ಲ. ಬೇಕಿದ್ದರೆ ನನ್ನ ಆಸ್ತಿ ಯಾರದ್ದು, ಯಾರ ಹೆಸರಿನಲ್ಲಿ ಇದೆ ಎಂಬುದನ್ನು ನೋಡಲಿ ಎಂದು ಟಿವಿ9ಗೆ ಪ್ರತಿಕ್ರಿಯಿಸಿದ್ದಾರೆ.

ಮುಷ್ಕರದ ಬಿಸಿ ಆರುತ್ತಿದ್ದಂತೆ.. ಸಾರಿಗೆ ನೌಕರರು ಅಮಾನತು: ನೌಕರರು ಫುಲ್ ಗರಂ, ಮತ್ತೆ ಹೋರಾಟದ ಎಚ್ಚರಿಕೆ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​