AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಚನ್ನಪಟ್ಟಣ ನಡುವೆ BMTC ಎಸಿ ಬಸ್: ಎಲ್ಲೆಲ್ಲಿ ಸ್ಟಾಪ್? ಟಿಕೆಟ್ ದರ ಎಷ್ಟು ಗೊತ್ತಾ?

ಬೆಂಗಳೂರು ಮತ್ತು ಚನ್ನಪಟ್ಟಣ ನಡುವೆ 8 ಬಿಎಂಟಿಸಿ ಎಸಿ ಬಸ್‌ಗಳ ಸಂಚಾರ ಆರಂಭವಾಗಿದೆ. ಶಾಸಕ ಸಿ.ಪಿ. ಯೋಗೇಶ್ವರ್, ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಇಂದು (ಮೇ 08) ಚಾಲನೆ ನೀಡಿದರು. ಇದರೊಂದಿಗೆ ಈ ಭಾಗದ ಸಾರ್ವಜನಿಕರ ಬಹುದಿನದ ಕನಸು ನನಸಾಗಿದೆ. ಇನ್ನು ಈ ಬಸ್ ಎಲ್ಲೆಲ್ಲಿ ಸ್ಟಾಪ್ ಕೊಡಲಿದೆ? ಟಿಕೆಟ್ ದರ ಎಷ್ಟು ಎನ್ನುವ ಡಿಟೇಲ್ಸ್​​ ಇಲ್ಲಿದೆ.

ಬೆಂಗಳೂರು-ಚನ್ನಪಟ್ಟಣ ನಡುವೆ BMTC ಎಸಿ ಬಸ್: ಎಲ್ಲೆಲ್ಲಿ ಸ್ಟಾಪ್? ಟಿಕೆಟ್ ದರ ಎಷ್ಟು ಗೊತ್ತಾ?
Bmtc Ac Bus
ಪ್ರಶಾಂತ್​ ಬಿ.
| Edited By: |

Updated on: May 08, 2026 | 10:05 PM

Share

ರಾಮನಗರ, (ಮೇ 08): ಅದು ಬೊಂಬೆನಗರಿ ಚನ್ನಪಟ್ಟಣ (Channapatna) ಜನರ ಬಹುದಿನದ ಕನಸು. ನಮ್ಮ ತಾಲೂಕಿಗೂ ಬಿಎಮ್ ಟಿಸಿ ಬಸ್ (BMTC Bus) ಸೌಲಭ್ಯ ಓದಗಿಸಿ ಎಂದು ಕೇಳುತ್ತಿದ್ದರು. ಇದೀಗ ಕೊನೆಗೂ ಸಾರ್ವಜನಿಕರ ಬಹುದಿನದ ಕನಸು ನನಸಾಗಿದೆ. ಹೌದು…ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಮತ್ತು ಬೊಂಬೆಗಳ ನಾಡು ಚನ್ನಪಟ್ಟಣದ ನಡುವೆ ನಿತ್ಯ ಸಂಚರಿಸುವ ಸಾವಿರಾರು ಪ್ರಯಾಣಿಕರಿಗೆ ಬಿಎಂಟಿಸಿ (BMTC) ಭರ್ಜರಿ ಗುಡ್ ನ್ಯೂಸ್ ನೀಡಿದೆ. ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಎಸಿ ಬಸ್ ಸೇವೆಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, ಇನ್ಮುಂದೆ ಜನರು ಬಿರು ಬೇಸಿಗೆಯಲ್ಲೂ ತಂಪಾಗಿ, ಆರಾಮದಾಯಕವಾಗಿ ಪ್ರಯಾಣಿಸಬಹುದಾಗಿದೆ.

  • ಬೊಂಬೆನಗರಿ ಚನ್ನಪಟ್ಟಣ ಜನರ ಬಹುದಿನದ ಕನಸು ನನಸು
  • ಇಂದಿನಿಂದ ಬೆಂಗಳೂರಿನಿಂದ ಚನ್ನಪಟ್ಟಣಕ್ಕೆ ಬಂತೂ ವಜ್ರ ವಿಸ್ತಾರ ಹವಾನಿಯಂತ್ರಿತ ಬಸ್ ಸಂಚಾರ
  • ಬಸ್ ಗಳ ಸಂಚಾರಕ್ಕೆ ಚಾಲನೆ ನೀಡಿದ ಶಾಸಕ ಸಿ ಪಿ ಯೋಗೇಶ್ವರ್ ಹಾಗೂ ಡಿಕೆ ಸುರೇಶ್.
  • ಇಷ್ಟು ದಿನ ಕೇವಲ ರಾಮನಗರದವರೆಗೂ ಮಾತ್ರ ಬಸ್ ಗಳ ಓಡಾಟವಿತ್ತು, ಇದೀಗ ಚನ್ನಪಟ್ಟಣಕ್ಕೂ ವಿಸ್ತರಣೆ

ಕೆಲಸಕ್ಕೆಂದು ಬೆಂಗಳೂರಿಗೆ ತೆರಳುವವರಿಗೆ ಅನುಕೂಲ

ಸಿಲಿಕಾನ್ ಸಿಟಿಯಿಂದ ಕೂಗಳತೆ ದೂರದಲ್ಲಿರೋ ಚನ್ನಪಟ್ಟಣದಿಂದ ಪ್ರತಿನಿತ್ಯ ಉದ್ಯೋಗ ಹಾಗೂ ಇತರೆ ಕೆಲಸಗಳಿಗಾಗಿ ಸಾವಿರಾರು ಜನರು ರಾಜಧಾನಿ ಬೆಂಗಳೂರಿಗೆ ಸಂಚಾರಿಸುತ್ತಾರೆ. ಆದರೆ ಸರಿಯಾದ ಸಮಯಕ್ಕೆ ಕೆಎಸ್ ಆರ್ ಟಿಸಿ ಬಸ್ ಗಳ ಸೌಲಭ್ಯವಿಲ್ಲದೇ ಸಾರ್ವಜನರಿಕರು ಪರದಾಡು ಪರಿಸ್ಥಿತಿ ‌ನಿರ್ಮಾಣವಾಗಿತ್ತು. ಹೀಗಾಗಿ ನಮಗೂ BMTC ಬಸ್ ಸೌಲಭ್ಯ ‌ಕಲ್ಪಿಸಿ ಎಂದು ಮನವಿ ಮಾಡಿದ್ದು. ಇದೀಗ ಜನರ ಮನವಿಗೆ ಸ್ಪಂದಿಸಿರೋ ಸರ್ಕಾರ ಚನ್ನಪಟ್ಟಣಕ್ಕೂ ವಜ್ರ ವಿಸ್ತಾರ ಹವಾನಿಯಂತ್ರಿತ ಬಸ್ ಸೇವೆ ಓದಗಿಸಿದೆ.

ಇದನ್ನೂ ಓದಿ: ಮಂಗಳೂರಿಗರ ಬಹುವರ್ಷಗಳ ಬೇಡಿಕೆ ಶೀಘ್ರ ಈಡೇರಿಕೆ: ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್

ಅಂದಹಾಗೆ ಈ ಹಿಂದೆ ಬೆಂಗಳೂರು ದಕ್ಷಿಣ ‌ಜಿಲ್ಲೆಯ ರಾಮನಗರದವರೆಗೂ ಮಾತ್ರ ಈ ಬಸ್ ಗಳ ಸೌಲಭ್ಯ ದೊರೆತಿತ್ತು. ರಾಮನಗರದಿಂದ ಕೇವಲ 12 ಕಿಲೋಮೀಟರ್ ಇರೋ ರಾಜಧಾನಿಯಿಂದ 50 ಕಿಲೋಮೀಟರ್ ದೂರದಲ್ಲಿರೋ ಚನ್ನಪಟ್ಟಣಕ್ಕೆ ವಿಸ್ತರಿಸಲು ಮನವಿ ಮಾಡಲಾಗಿತ್ತು. ಅದರಿಂದ ಚನ್ನಪಟ್ಟಣಕ್ಕೂ ವಜ್ರ ವಿಸ್ತಾರ ಬಸ್ ಸೌಲಭ್ಯ ಸಿಕ್ಕಿದೆ. ಇನ್ನು ಇವತ್ತು ಶಾಸಕ ಸಿ ಪಿ ಯೋಗೇಶ್ವರ್ ಹಾಗೂ ಬಮೂಲ್ ಅಧ್ಯಕ್ಷ ಡಿ ಕೆ ಸುರೇಶ್, ಬಸ್ ಗಳ ಓಡಾಟಕ್ಕೆ ಚಾಲನೆ ನೀಡಿದ್ದು, ಇಂದಿನಿಂದ ಪ್ರತಿನಿತ್ಯ ಎಂಟು ಬಸ್ ಗಳ ಓಡಾಟ ನಡೆಯಲಿದೆ. ಜೊತೆಗೆ ಇದರ ವಿಸ್ತರಣೆಯನ್ನ ಕನಕಪುರ ಸೇರಿ ಜಿಲ್ಲೆಯಾದ್ಯಂತ ಮಾಡಲು ಕೂಡ ಚಿಂತನೆ ಮಾಡಲಾಗಿದೆ.

ದಿನಕ್ಕೆ 44 ಟ್ರಿಪ್‌ಗಳ ಸಂಚಾರ

ಬೆಂಗಳೂರು ಮತ್ತು ಚನ್ನಪಟ್ಟಣದ ನಡುವೆ ಕೇವಲ ಎಸಿ ಬಸ್‌ಗಳ ಸಂಚಾರ ಮಾತ್ರವಲ್ಲದೆ, ದಿನಕ್ಕೆ ಒಟ್ಟು 44 ಟ್ರಿಪ್‌ಗಳನ್ನು ಈ ಬಸ್‌ಗಳು ಕೈಗೊಳ್ಳಲಿವೆ. ಒಟ್ಟು 8 ಐಷಾರಾಮಿ ಎಸಿ ಬಸ್‌ಗಳು ಈ ಮಾರ್ಗದಲ್ಲಿ ಕಾರ್ಯಾಚರಣೆ ನಡೆಸಲಿವೆ. ಇದರಿಂದಾಗಿ ಪ್ರತಿ ಅರ್ಧ ಅಥವಾ ಒಂದು ಗಂಟೆಗೊಮ್ಮೆ ಪ್ರಯಾಣಿಕರಿಗೆ ಎಸಿ ಬಸ್ ಸೌಲಭ್ಯ ದೊರೆಯಲಿದೆ. ಚನ್ನಪಟ್ಟಣದಿಂದ ಬೆಂಗಳೂರಿಗೆ ಕೆಲಸಕ್ಕೆಂದು ಬರುವ ನೂರಾರು ಉದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ವ್ಯಾಪಾರಿಗಳಿಗೆ ಇದು ವರದಾನವಾಗಲಿದೆ.

ಬಸ್ ಸ್ಟಾಪ್ ಮತ್ತು ಟಿಕೆಟ್ ದರ ವಿವರ

ಬೆಂಗಳೂರಿನ ಮೆಜೆಸ್ಟಿಕ್‌ನಿಂದ ಚನ್ನಪಟ್ಟಣಕ್ಕೆ ಪ್ರಯಾಣಿಸಲು ಬಿಎಂಟಿಸಿ 105 ರೂಪಾಯಿ ಟಿಕೆಟ್ ದರವನ್ನು ನಿಗದಿಪಡಿಸಲಾಗಿದೆ. ರೈಲು ಪ್ರಯಾಣಕ್ಕೆ ಹೋಲಿಸಿದರೆ ಸ್ವಲ್ಪ ದರ ಹೆಚ್ಚಿದ್ದರೂ, ಆರಾಮದಾಯಕ ಪ್ರಯಾಣ ಮತ್ತು ಸಮಯದ ಉಳಿತಾಯವನ್ನು ಗಮನಿಸಿದರೆ ಇದು ಸೂಕ್ತ. ಇನ್ನು ಈ ಬಸ್‌ಗಳು ಚನ್ನಪಟ್ಟಣದಿಂದ ಹೊರಟು ರಾಮನಗರ ಮತ್ತು ಕೆಂಗೇರಿ ನಿಲ್ದಾಣಗಳಲ್ಲಿ ಸ್ಟಾಪ್ ನೀಡಲಿವೆ. ಇದರಿಂದ ಈ ಎರಡು ಪ್ರಮುಖ ನಗರಗಳ ಪ್ರಯಾಣಿಕರಿಗೂ ಅನುಕೂಲವಾಗಲಿದೆ.

ಒಟ್ಟಾರೆ ಚನ್ನಪಟ್ಟಣ ಜನರ ಬಹುದಿನದ ಬೇಡಿಕೆ ಈಡೇರಿದ್ದು, ಸಾರ್ವಜನಿಕರ ಸಂಸತಕ್ಕೂ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್