ಕೇವಲ ಬೆಂಗಳೂರಿಗೆ ಸೀಮಿತವಾಗಿದ್ದ ಬಿಎಂಟಿಸಿ ಬಸ್ ಈಗ ರಾಜ್ಯದ ವಿವಿಧ ಜಿಲ್ಲೆಗಳಿಗೂ ಸಂಚಾರ

ದಸರಾ ಹಿನ್ನೆಲೆಯಲ್ಲಿ ಸಾಲು ಸಾಲು ರಜೆ ಇರುವುದರಿಂದ ಹೆಚ್ಚುವರಿ ಕೆಎಸ್​ಆರ್​ಟಿಸಿ ಬಸ್‌ಗಳ ಜೊತೆಗೆ ಬಿಎಂಟಿಸಿ ಓಡಿಸಲು ತೀರ್ಮಾನಿಸಲಾಗಿದೆ. ಕೆಎಸ್ಆರ್​ಟಿಸಿ ಬಸ್ ಗಳಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ ಬಿಎಂಟಿಸಿ ಬಸ್​ಗಳನ್ನು ಬಳಕೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್​ಗಳು ಮೂರು ದಿನಗಳ ಕಾಲ ರಾಜ್ಯ ವಿವಿಧ ಜಿಲ್ಲೆಗಳಿಗೆ ಸಂಚರಿಸಲಿವೆ.

ಕೇವಲ ಬೆಂಗಳೂರಿಗೆ ಸೀಮಿತವಾಗಿದ್ದ ಬಿಎಂಟಿಸಿ ಬಸ್ ಈಗ ರಾಜ್ಯದ ವಿವಿಧ ಜಿಲ್ಲೆಗಳಿಗೂ ಸಂಚಾರ
ಬಿಎಂಟಿಸಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Oct 20, 2023 | 9:17 AM

ಬೆಂಗಳೂರು, (ಅಕ್ಟೋಬರ್ 20): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ದಸರಾ(Dasara)  ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕೆ ಹೊಸ ಪ್ಲಾನ್ ರೂಪಿಸಿದೆ. ರಾಜ್ಯದಾದ್ಯಂತ ಪ್ರಯಾಣಿಕರ ಅಗತ್ಯತೆಗಳಿಗೆ ಅನುಸಾರವಾಗಿ ವಿವಿಧ ಊರುಗಳ ನಡುವೆ ವಿಶೇಷ ಬಸ್‌ಗಳನ್ನು ಆರಂಭಿಸುತ್ತಿದೆ. ಈ ದಸರಾಕ್ಕೆ ಹೆಚ್ಚುವರಿಯಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ರಾಜ್ಯ ಮತ್ತು ಅಂತಾರಾಜ್ಯ ಗಳಿಗೆ ಬಿಡಲಾಗಿದೆ. ಆದರೂ ಸಹ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಕೆಎಸ್​ಆರ್​​ಟಿಸಿ ಜೊತೆಗೆ ಬಿಎಂಟಿಸಿ ಬಸ್​ಗಳನ್ನು ಸಹ ರಾಜ್ಯದ ಇತರೆ ಜಿಲ್ಲೆಗಳಿಗೆ ಸಂಚಾರ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ.

ಅಕ್ಟೋಬರ್ 23ರಂದು ಆಯುಧ ಪೂಜೆ ಹಾಗೂ ಅ.24 ವಿಜಯದಶಮಿ ಹಿನ್ನಲೆಯಲ್ಲಿ ಜನರು ಬೆಂಗಳೂರಿನಿಂದ ಬೇರೆ ಜಿಲ್ಲೆಗಳತ್ತ ಮುಖ ಮಾಡಿದ್ದಾರೆ. ಹೀಗಾಗಿ ಅಕ್ಟೋಬರ್ 21, 22 ಮತ್ತು 23ರ ವರಿಗೆ ಪ್ರಯಾಣಿಕರ ಅನುಕೂಲಕ್ಕೆ ವಿವಿಧ ಜಿಲ್ಲೆಗಳಿಗೆ ಬಿಎಂಟಿಸಿ ಬಸ್​ಗಳು ಸಂಚರಿಸಲಿವೆ. ಇದರೊಂದಿಗೆ ಇಷ್ಟು ದಿನ ಬೆಂಗಳೂರಿಗೆ ಸೀಮತವಾಗಿದ್ದ ಬಿಎಂಟಿಸಿ ಬಸ್​ಗಳು ಇದೀಗ ರಾಜ್ಯದ ಬೇರೆ-ಬೇರೆ ಜಿಲ್ಲೆಗಳಿಗೂ ಹೋಗಲಿವೆ.

ಇದನ್ನೂ ಓದಿ: ದಸರಾ ಪ್ರಯುಕ್ತ ಬೆಂಗಳೂರು, ಬೀದರ್ ಮಧ್ಯೆ 3 ವಿಶೇಷ ರೈಲು: ಇಲ್ಲಿದೆ ವಿವರ

ಅಕ್ಟೋಬರ್-10 ರಂದು ಕೆಎಸ್ಆರ್ಟಿಸಿಯಲ್ಲಿ ನಡೆದ ಸಭೆ ನಿರ್ಧಾರದಂತೆ ಬಿಎಂಟಿಸಿ ಬಸ್ ಓಡಿಸಲು ಸೂಚನೆ ನೀಡಲಾಗಿದೆ. ಕೆಎಸ್ಆರ್ಟಿಸಿ ಮನವಿ ಆಧಾರದ ಮೇಲೆ ಹೊರ ಜಿಲ್ಲೆಗಳಿಗೂ ಬಸ್ ಓಡಿಸಲು ಬಿಎಂಟಿಸಿ ತೀರ್ಮಾನಿಸಿದೆ. ದಾವಣಗೆರೆ, ಶಿವಮೊಗ್ಗ, ಹೊಸದುರ್ಗ,ಬಳ್ಳಾರಿ, ಹಾಸನ, ಮತ್ತು ಧರ್ಮಸ್ಥಳಕ್ಕೆ ಬಿಎಂಟಿಸಿಯಿಂದ ಹೆಚ್ಚುವರಿ ಬಸ್​ಗಳನ್ನು ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ಪೂರ್ವ, ಉತ್ತರ, ದಕ್ಷಿಣ, ಹಾಗೂ ಈಶಾನ್ಯ ವಲಯದ ಡಿಪೋಗಳಿಂದ ನಿತ್ಯ 100 ಬಸ್​ ಗಳು ಓಡಾಡಲಿವೆ. ಕೆಎಸ್ಆರ್​ಟಿಸಿ ಬಸ್ ಗಳಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ ಬಿಎಂಟಿಸಿ ಬಸ್​ಗಳನ್ನು ಬಳಕೆ ಮಾಡಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:12 am, Fri, 20 October 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ