AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ ಬೆಂಗಳೂರಿಗೆ ಸೀಮಿತವಾಗಿದ್ದ ಬಿಎಂಟಿಸಿ ಬಸ್ ಈಗ ರಾಜ್ಯದ ವಿವಿಧ ಜಿಲ್ಲೆಗಳಿಗೂ ಸಂಚಾರ

ದಸರಾ ಹಿನ್ನೆಲೆಯಲ್ಲಿ ಸಾಲು ಸಾಲು ರಜೆ ಇರುವುದರಿಂದ ಹೆಚ್ಚುವರಿ ಕೆಎಸ್​ಆರ್​ಟಿಸಿ ಬಸ್‌ಗಳ ಜೊತೆಗೆ ಬಿಎಂಟಿಸಿ ಓಡಿಸಲು ತೀರ್ಮಾನಿಸಲಾಗಿದೆ. ಕೆಎಸ್ಆರ್​ಟಿಸಿ ಬಸ್ ಗಳಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ ಬಿಎಂಟಿಸಿ ಬಸ್​ಗಳನ್ನು ಬಳಕೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್​ಗಳು ಮೂರು ದಿನಗಳ ಕಾಲ ರಾಜ್ಯ ವಿವಿಧ ಜಿಲ್ಲೆಗಳಿಗೆ ಸಂಚರಿಸಲಿವೆ.

ಕೇವಲ ಬೆಂಗಳೂರಿಗೆ ಸೀಮಿತವಾಗಿದ್ದ ಬಿಎಂಟಿಸಿ ಬಸ್ ಈಗ ರಾಜ್ಯದ ವಿವಿಧ ಜಿಲ್ಲೆಗಳಿಗೂ ಸಂಚಾರ
ಬಿಎಂಟಿಸಿ
TV9 Web
| Edited By: |

Updated on:Oct 20, 2023 | 9:17 AM

Share

ಬೆಂಗಳೂರು, (ಅಕ್ಟೋಬರ್ 20): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ದಸರಾ(Dasara)  ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕೆ ಹೊಸ ಪ್ಲಾನ್ ರೂಪಿಸಿದೆ. ರಾಜ್ಯದಾದ್ಯಂತ ಪ್ರಯಾಣಿಕರ ಅಗತ್ಯತೆಗಳಿಗೆ ಅನುಸಾರವಾಗಿ ವಿವಿಧ ಊರುಗಳ ನಡುವೆ ವಿಶೇಷ ಬಸ್‌ಗಳನ್ನು ಆರಂಭಿಸುತ್ತಿದೆ. ಈ ದಸರಾಕ್ಕೆ ಹೆಚ್ಚುವರಿಯಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ರಾಜ್ಯ ಮತ್ತು ಅಂತಾರಾಜ್ಯ ಗಳಿಗೆ ಬಿಡಲಾಗಿದೆ. ಆದರೂ ಸಹ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಕೆಎಸ್​ಆರ್​​ಟಿಸಿ ಜೊತೆಗೆ ಬಿಎಂಟಿಸಿ ಬಸ್​ಗಳನ್ನು ಸಹ ರಾಜ್ಯದ ಇತರೆ ಜಿಲ್ಲೆಗಳಿಗೆ ಸಂಚಾರ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ.

ಅಕ್ಟೋಬರ್ 23ರಂದು ಆಯುಧ ಪೂಜೆ ಹಾಗೂ ಅ.24 ವಿಜಯದಶಮಿ ಹಿನ್ನಲೆಯಲ್ಲಿ ಜನರು ಬೆಂಗಳೂರಿನಿಂದ ಬೇರೆ ಜಿಲ್ಲೆಗಳತ್ತ ಮುಖ ಮಾಡಿದ್ದಾರೆ. ಹೀಗಾಗಿ ಅಕ್ಟೋಬರ್ 21, 22 ಮತ್ತು 23ರ ವರಿಗೆ ಪ್ರಯಾಣಿಕರ ಅನುಕೂಲಕ್ಕೆ ವಿವಿಧ ಜಿಲ್ಲೆಗಳಿಗೆ ಬಿಎಂಟಿಸಿ ಬಸ್​ಗಳು ಸಂಚರಿಸಲಿವೆ. ಇದರೊಂದಿಗೆ ಇಷ್ಟು ದಿನ ಬೆಂಗಳೂರಿಗೆ ಸೀಮತವಾಗಿದ್ದ ಬಿಎಂಟಿಸಿ ಬಸ್​ಗಳು ಇದೀಗ ರಾಜ್ಯದ ಬೇರೆ-ಬೇರೆ ಜಿಲ್ಲೆಗಳಿಗೂ ಹೋಗಲಿವೆ.

ಇದನ್ನೂ ಓದಿ: ದಸರಾ ಪ್ರಯುಕ್ತ ಬೆಂಗಳೂರು, ಬೀದರ್ ಮಧ್ಯೆ 3 ವಿಶೇಷ ರೈಲು: ಇಲ್ಲಿದೆ ವಿವರ

ಅಕ್ಟೋಬರ್-10 ರಂದು ಕೆಎಸ್ಆರ್ಟಿಸಿಯಲ್ಲಿ ನಡೆದ ಸಭೆ ನಿರ್ಧಾರದಂತೆ ಬಿಎಂಟಿಸಿ ಬಸ್ ಓಡಿಸಲು ಸೂಚನೆ ನೀಡಲಾಗಿದೆ. ಕೆಎಸ್ಆರ್ಟಿಸಿ ಮನವಿ ಆಧಾರದ ಮೇಲೆ ಹೊರ ಜಿಲ್ಲೆಗಳಿಗೂ ಬಸ್ ಓಡಿಸಲು ಬಿಎಂಟಿಸಿ ತೀರ್ಮಾನಿಸಿದೆ. ದಾವಣಗೆರೆ, ಶಿವಮೊಗ್ಗ, ಹೊಸದುರ್ಗ,ಬಳ್ಳಾರಿ, ಹಾಸನ, ಮತ್ತು ಧರ್ಮಸ್ಥಳಕ್ಕೆ ಬಿಎಂಟಿಸಿಯಿಂದ ಹೆಚ್ಚುವರಿ ಬಸ್​ಗಳನ್ನು ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ಪೂರ್ವ, ಉತ್ತರ, ದಕ್ಷಿಣ, ಹಾಗೂ ಈಶಾನ್ಯ ವಲಯದ ಡಿಪೋಗಳಿಂದ ನಿತ್ಯ 100 ಬಸ್​ ಗಳು ಓಡಾಡಲಿವೆ. ಕೆಎಸ್ಆರ್​ಟಿಸಿ ಬಸ್ ಗಳಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಣಕ್ಕೆ ಬಿಎಂಟಿಸಿ ಬಸ್​ಗಳನ್ನು ಬಳಕೆ ಮಾಡಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:12 am, Fri, 20 October 23

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ