AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋರ್ಡ್​ ಪರೀಕ್ಷೆಗಳು ಜನವರಿ- ಫೆಬ್ರವರಿ ತಿಂಗಳಲ್ಲಿ ನಡೆಯುವುದಿಲ್ಲ: ಕೇಂದ್ರ ಸಚಿವ ರಮೇಶ್​ ಪೋಕ್ರಿಯಾಲ್

JEE 2020 ಪರೀಕ್ಷೆಯನ್ನು ಆನ್​ಲೈನ್​ನಲ್ಲೇ ನಡೆಸಲಾಗಿತ್ತು. ಹೀಗಾಗಿ, ಎಲ್ಲಾ ಪರೀಕ್ಷೆಗಳನ್ನು ಆನ್​ಲೈನ್​ನಲ್ಲಿ ಮಾಡಿ ಎನ್ನುವ ಆಗ್ರಹ ಕೇಳಿ ಬಂದಿತ್ತು. ಇದಕ್ಕೂ ರಮೇಶ್​ ಪೋಕ್ರಿಯಾಲ್ ಸ್ಪಷ್ಟನೆ ನೀಡಿದ್ದಾರೆ.

ಬೋರ್ಡ್​ ಪರೀಕ್ಷೆಗಳು ಜನವರಿ- ಫೆಬ್ರವರಿ ತಿಂಗಳಲ್ಲಿ ನಡೆಯುವುದಿಲ್ಲ: ಕೇಂದ್ರ ಸಚಿವ ರಮೇಶ್​ ಪೋಕ್ರಿಯಾಲ್
ಸಚಿವ ರಮೇಶ್​ ಪೋಖ್ರಿಯಾಲ್
ರಾಜೇಶ್ ದುಗ್ಗುಮನೆ
|

Updated on: Dec 22, 2020 | 7:36 PM

Share

ನವದೆಹಲಿ: ಯಾವುದೇ ಬೋರ್ಡ್​ ಪರೀಕ್ಷೆಗಳು ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ನಡೆಯುವುದಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್​ ಪೋಕ್ರಿಯಾಲ್ ಸ್ಪಷ್ಟಪಡಿಸಿದ್ದಾರೆ.

ಶಿಕ್ಷಕರ ಜೊತೆ ಆನ್​ಲೈನ್ ಸಂವಾದ ನಡೆಸಿದ ರಮೇಶ್​ ಪೋಕ್ರಿಯಾಲ್ ಈ ಸ್ಪಷ್ಟನೆ ನೀಡಿದ್ದಾರೆ. 10 ಹಾಗೂ 12ನೇ ತರಗತಿ ಸಿಬಿಎಸ್​ಇ ಬೋರ್ಡ್​ ಪರೀಕ್ಷೆ ಯಾವುದೇ ಕಾರಣಕ್ಕೂ ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ನಡೆಯುವುದಿಲ್ಲ. ಪರೀಕ್ಷೆ ಯಾವಾಗ ನಡೆಸಬೇಕು ಎನ್ನುವ ಬಗ್ಗೆ ನಂತರದಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ರಮೇಶ್​ ಹೇಳಿದ್ದಾರೆ.

JEE 2020 ಪರೀಕ್ಷೆಯನ್ನು ಆನ್​ಲೈನ್​ನಲ್ಲೇ ನಡೆಸಲಾಗಿತ್ತು. ಹೀಗಾಗಿ, ಎಲ್ಲಾ ಪರೀಕ್ಷೆಗಳನ್ನು ಆನ್​ಲೈನ್​ನಲ್ಲಿ ಮಾಡಿ ಎನ್ನುವ ಆಗ್ರಹ ಕೇಳಿ ಬಂದಿತ್ತು. ಇದಕ್ಕೂ ಉತ್ತರಿಸಿರುವ ಅವರು, ಯಾವುದೇ ಕಾರಣಕ್ಕೂ 10 ಹಾಗೂ 12ನೇ ತರಗತಿ ಪರೀಕ್ಷೆಗಳು ಆನ್​ಲೈನ್​ನಲ್ಲಿ ನಡೆಯುವುದಿಲ್ಲ. ಎಲ್ಲ ಬೋರ್ಡ್​ ಪರೀಕ್ಷೆಗಳು ಲಿಖಿತ ರೂಪದಲ್ಲೇ ನಡೆಯಲಿದೆ ಎಂದರು.

ಈ ಮೊದಲು ವಿದ್ಯಾರ್ಥಿಗಳ ಜೊತೆ ಆನ್​ಲೈನ್ ಸಂವಾದ ನಡೆಸಿದ್ದ ಕೇಂದ್ರ ಶಿಕ್ಷಣ ಸಚಿವ ರಮೇಶ್​ ಪೋಕ್ರಿಯಾಲ್, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದ್ದರು. 2021ರ ನೀಟ್​ ಪರೀಕ್ಷೆ ರದ್ದಾಗಲಿದೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಸರ್ಕಾರ ಆ ರೀತಿ ನಿರ್ಧಾರ ಕೈಗೊಳ್ಳುತ್ತಿಲ್ಲ. ಮುಂದಿನ ವರ್ಷ ನೀಟ್​ ಪರೀಕ್ಷೆ ನಡೆಯುತ್ತದೆ. ಇದನ್ನು ರದ್ದು ಮಾಡಿದರೆ ವಿದ್ಯಾರ್ಥಿ ಸಮುದಾಯ ಹಾಗೂ ದೇಶಕ್ಕೆ ಭಾರೀ ನಷ್ಟ ಉಂಟಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದರು.

NEET 2021 ಪರೀಕ್ಷೆ ರದ್ದಾಗುವುದಿಲ್ಲ; ಕೇಂದ್ರ ಸರ್ಕಾರದ ಸ್ಪಷ್ಟನೆ

Follow Us
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ