AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಿಂದ ಬೆಂಗಳೂರಿಗೆ ಆಗಮಿಸಿದ 323 ಕನ್ನಡಿಗರು

ಬೆಂಗಳೂರು:ವಿದೇಶದಲ್ಲಿ ಸಿಲುಕಿರುವ ಭಾರತೀಯರು ನಾನಾ ಸಮಸ್ಯೆ ಎದುರಿಸುತ್ತಿದ್ದಾರೆ. ಅತ್ತ ಇದ್ದ ಕೆಲಸ ಕಳೆದುಕೊಂಡು, ತುತ್ತು ಅನ್ನಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಕೆಲವರ ಪಾಡಂತೂ ಇದಕ್ಕಿಂತ ಕಡೆಯಾಗಿದೆ. ಇಂಥ ಹೊತ್ತಲ್ಲೇ ಕೇಂದ್ರ ಸರ್ಕಾರ ನಮ್ಮವರ ನೆರವಿಗೆ ಧಾವಿಸಿದೆ. ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನ ಮತ್ತೆ ತವರಿಗೆ ಕರೆತರಲು ಭಾರತದಿಂದ ಏರ್ ಇಂಡಿಯಾ ವಿಮಾನಗಳು ಹಾರಿವೆ. ಈ ಪೈಕಿ ಇಂದು ಏರ್ ಇಂಡಿಯಾ ವಿಮಾನದಲ್ಲಿ ಲಂಡನ್‌ನಿಂದ 323 ಕನ್ನಡಿಗರು ರಾಜ್ಯಕ್ಕೆ ವಾಪಸ್ ಆಗಿದ್ದಾರೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ […]

ವಿದೇಶದಿಂದ ಬೆಂಗಳೂರಿಗೆ ಆಗಮಿಸಿದ 323 ಕನ್ನಡಿಗರು
ಸಾಧು ಶ್ರೀನಾಥ್​
|

Updated on:May 11, 2020 | 7:31 AM

Share

ಬೆಂಗಳೂರು:ವಿದೇಶದಲ್ಲಿ ಸಿಲುಕಿರುವ ಭಾರತೀಯರು ನಾನಾ ಸಮಸ್ಯೆ ಎದುರಿಸುತ್ತಿದ್ದಾರೆ. ಅತ್ತ ಇದ್ದ ಕೆಲಸ ಕಳೆದುಕೊಂಡು, ತುತ್ತು ಅನ್ನಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಕೆಲವರ ಪಾಡಂತೂ ಇದಕ್ಕಿಂತ ಕಡೆಯಾಗಿದೆ.

ಇಂಥ ಹೊತ್ತಲ್ಲೇ ಕೇಂದ್ರ ಸರ್ಕಾರ ನಮ್ಮವರ ನೆರವಿಗೆ ಧಾವಿಸಿದೆ. ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನ ಮತ್ತೆ ತವರಿಗೆ ಕರೆತರಲು ಭಾರತದಿಂದ ಏರ್ ಇಂಡಿಯಾ ವಿಮಾನಗಳು ಹಾರಿವೆ. ಈ ಪೈಕಿ ಇಂದು ಏರ್ ಇಂಡಿಯಾ ವಿಮಾನದಲ್ಲಿ ಲಂಡನ್‌ನಿಂದ 323 ಕನ್ನಡಿಗರು ರಾಜ್ಯಕ್ಕೆ ವಾಪಸ್ ಆಗಿದ್ದಾರೆ.

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕನ್ನಡಿಗರು ಆಗಮಿಸಿದ್ದಾರೆ. KIALನಲ್ಲಿ 3 ವೈದ್ಯರ ತಂಡದಿಂದ ಪ್ರಯಾಣಿಕರ ತಪಾಸಣೆ ಮಾಡಲಾಗುತ್ತಿದೆ. ವೈದ್ಯಕೀಯ ತಪಾಸಣೆ ವೇಳೆ ಎ, ಬಿ, ಸಿ ಎಂದು ವಿಂಗಡಣೆ ಮಾಡಲಾಗುತ್ತೆ.

ಕೊರೊನಾ ಲಕ್ಷಣ ಕಂಡು ಬಂದವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತೆ. KIAL‌ನಿಂದ ನೇರವಾಗಿ ಆಸ್ಪತ್ರೆಗೆ ಸ್ಥಳಾಂತರಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಉಳಿದವರಿಗೆ ಹೋಟೆಲ್ ಕ್ವಾರಂಟೈನ್ ಮಾಡಲು ವ್ಯವಸ್ಥೆ ಮಾಡಲಾಗಿದೆ.

ಕೆಐಎಎಲ್‌ನಿಂದ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಕರನ್ನ ಶಿಫ್ಟ್ ಮಾಡಲು ನಿರ್ಧರಿಸಲಾಗಿದ್ದು, ಒಂದು ಬಸ್‌ನಲ್ಲಿ 20 ಜನರಂತೆ ಸ್ಥಳಾಂತರಿಸಲು ವ್ಯವಸ್ಥೆ ಮಾಡಿದ್ದಾರೆ. ಆದರೆ ಎಲ್ಲಾ ವೆಚ್ಚವನ್ನು ಪ್ರಯಾಣಿಕರೇ ಭರಿಸಬೇಕಾಗಿದೆ.

ಮುಂಜಾಗ್ರತಾ ಕ್ರಮವಾಗಿ KIAL ಬಳಿ ಹಾಗೂ KIALನಿಂದ ಬೆಂಗಳೂರಿಗೆ ಬರುವ ಮಾರ್ಗದಲ್ಲೂ ಭದ್ರತೆಗೆ ಪೊಲೀಸ್ ನಿಯೋಜಿಸಲಾಗಿದೆ. ಇನ್ನು ವಿದೇಶದಿಂದ ಬಂದ ಭಾರತೀಯರನ್ನು ತಾಜ್ ವಿವಾಂತ, ಲೆಮನ್​ ಟ್ರೀ ಹೋಟೆಲ್, ಫೈವ್​ಸ್ಟಾರ್, ತ್ರೀಸ್ಟಾರ್​ ಹೋಟೆಲ್​ಗಳಲ್ಲಿ ಕ್ವಾರಂಟೈನ್ ಮಾಡಲು ವ್ಯವಸ್ಥೆ ಮಾಡಲಾಗಿದೆ.

Published On - 7:30 am, Mon, 11 May 20

ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!