AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಟ್ಟುಸಿರು ಬಿಟ್ಟ ಮಂಗಳೂರು ಜನತೆ: ಕೊನೆಗೂ ಬಾಂಬ್​ ಸ್ಫೋಟಗೊಳಿಸಿದ ಬಾಂಬ್ ನಿಷ್ಕ್ರಿಯ ದಳ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಬಾಂಬ್​ ಅನ್ನು ಕೊನೆಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸ್ಫೋಟಗೊಳಿಸಿದ್ದಾರೆ. ಮಂಗಳೂರು ಏರ್​ಪೋರ್ಟ್​ನಿಂದ 1 ಕಿ.ಮೀ. ದೂರದಲ್ಲಿರುವ ಕೆಂಜಾರು ಮೈದಾನದಲ್ಲಿ ಮರಳು ಚೀಲಗಳ ನಡುವೆ ಬಾಂಬ್​ ಇರಿಸಿ ಸ್ಫೋಟಿಸಿದ್ದಾರೆ. ಬೆಳಗ್ಗೆಯಿಂದ ಇದ್ದ ಆತಂಕ ದೂರವಾಗಿ ಮಂಗಳೂರು ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ನಿರ್ಜನ ಪ್ರದೇಶಕ್ಕೆ ರವಾನೆ: ಮರಳು ಚೀಲಗಳ ನಡುವೆ ದೊಡ್ಡ ಮಟ್ಟದ ಶಬ್ಧದೊಂದಿಗೆ ಬಾಂಬ್ ಸ್ಫೋಟಗೊಂಡಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದ​ ಟಿಕೆಟ್ […]

ನಿಟ್ಟುಸಿರು ಬಿಟ್ಟ ಮಂಗಳೂರು ಜನತೆ: ಕೊನೆಗೂ ಬಾಂಬ್​ ಸ್ಫೋಟಗೊಳಿಸಿದ ಬಾಂಬ್ ನಿಷ್ಕ್ರಿಯ ದಳ
ಸಾಧು ಶ್ರೀನಾಥ್​
|

Updated on:Jan 20, 2020 | 6:35 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಬಾಂಬ್​ ಅನ್ನು ಕೊನೆಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸ್ಫೋಟಗೊಳಿಸಿದ್ದಾರೆ. ಮಂಗಳೂರು ಏರ್​ಪೋರ್ಟ್​ನಿಂದ 1 ಕಿ.ಮೀ. ದೂರದಲ್ಲಿರುವ ಕೆಂಜಾರು ಮೈದಾನದಲ್ಲಿ ಮರಳು ಚೀಲಗಳ ನಡುವೆ ಬಾಂಬ್​ ಇರಿಸಿ ಸ್ಫೋಟಿಸಿದ್ದಾರೆ. ಬೆಳಗ್ಗೆಯಿಂದ ಇದ್ದ ಆತಂಕ ದೂರವಾಗಿ ಮಂಗಳೂರು ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.

ನಿರ್ಜನ ಪ್ರದೇಶಕ್ಕೆ ರವಾನೆ: ಮರಳು ಚೀಲಗಳ ನಡುವೆ ದೊಡ್ಡ ಮಟ್ಟದ ಶಬ್ಧದೊಂದಿಗೆ ಬಾಂಬ್ ಸ್ಫೋಟಗೊಂಡಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದ​ ಟಿಕೆಟ್ ಕೌಂಟರ್​ ಬಳಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು. ಈ ಬಗ್ಗೆ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬ್ಯಾಗ್ ಪರಿಶೀಲಿಸಿದಾಗ ಬಾಂಬ್​ ಇರುವುದು ಖಚಿತವಾಗಿತ್ತು. ಬಳಿಕ ಬಾಂಬ್​ ಇದ್ದ ಬ್ಯಾಗ್​ ಅನ್ನು ಸುರಕ್ಷತಾ ವಾಹನದಲ್ಲಿ ಇರಿಸಲಾಗಿತ್ತು. ಬಾಂಬ್​ ಪ್ರತಿರೋಧಕ ವಾಹನದಲ್ಲಿ ಬೇರೆಡೆಗೆ ಶಿಫ್ಟ್ ಮಾಡಲಾಯಿತು.

ಕೆಂಜಾರು ಮೈದಾನದಲ್ಲಿ ಸ್ಫೋಟ: ಮಂಗಳೂರು ​ಏರ್​ಪೋರ್ಟ್​ನಿಂದ 1 ಕಿ.ಮೀ. ದೂರದಲ್ಲಿರುವ ಕೆಂಜಾರು ಮೈದಾನಕ್ಕೆ ಬಾಂಬ್​ ಸ್ಥಳಾಂತರ ಮಾಡಲಾಗಿತ್ತು. ಕೊನೆಗೆ ಸಂಜೆ 5.37ಕ್ಕೆ ಬಾಂಬ್​ ಅನ್ನು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಫೋಟಿಸಿದ್ದಾರೆ. ಇದರಿಂದ ಮಂಗಳೂರು ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.

Published On - 6:21 pm, Mon, 20 January 20

ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
ಬೆಂಗಳೂರಿನಲ್ಲಿ ಶಿಲ್ಪಾ ಶೆಟ್ಟಿ ಒಡೆತನದ ಬ್ಯಾಸ್ಟಿಯನ್ ಪಬ್ ಮೇಲೆ ಐಟಿ ದಾಳಿ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
2026 ಮೇಷ ರಾಶಿಯವರಿಗೆ ಮಹತ್ತರವಾದ ಬದಲಾವಣೆಯ ವರ್ಷ
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!