AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಟ್ಟುಸಿರು ಬಿಟ್ಟ ಮಂಗಳೂರು ಜನತೆ: ಕೊನೆಗೂ ಬಾಂಬ್​ ಸ್ಫೋಟಗೊಳಿಸಿದ ಬಾಂಬ್ ನಿಷ್ಕ್ರಿಯ ದಳ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಬಾಂಬ್​ ಅನ್ನು ಕೊನೆಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸ್ಫೋಟಗೊಳಿಸಿದ್ದಾರೆ. ಮಂಗಳೂರು ಏರ್​ಪೋರ್ಟ್​ನಿಂದ 1 ಕಿ.ಮೀ. ದೂರದಲ್ಲಿರುವ ಕೆಂಜಾರು ಮೈದಾನದಲ್ಲಿ ಮರಳು ಚೀಲಗಳ ನಡುವೆ ಬಾಂಬ್​ ಇರಿಸಿ ಸ್ಫೋಟಿಸಿದ್ದಾರೆ. ಬೆಳಗ್ಗೆಯಿಂದ ಇದ್ದ ಆತಂಕ ದೂರವಾಗಿ ಮಂಗಳೂರು ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ನಿರ್ಜನ ಪ್ರದೇಶಕ್ಕೆ ರವಾನೆ: ಮರಳು ಚೀಲಗಳ ನಡುವೆ ದೊಡ್ಡ ಮಟ್ಟದ ಶಬ್ಧದೊಂದಿಗೆ ಬಾಂಬ್ ಸ್ಫೋಟಗೊಂಡಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದ​ ಟಿಕೆಟ್ […]

ನಿಟ್ಟುಸಿರು ಬಿಟ್ಟ ಮಂಗಳೂರು ಜನತೆ: ಕೊನೆಗೂ ಬಾಂಬ್​ ಸ್ಫೋಟಗೊಳಿಸಿದ ಬಾಂಬ್ ನಿಷ್ಕ್ರಿಯ ದಳ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 20, 2020 | 6:35 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಬಾಂಬ್​ ಅನ್ನು ಕೊನೆಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸ್ಫೋಟಗೊಳಿಸಿದ್ದಾರೆ. ಮಂಗಳೂರು ಏರ್​ಪೋರ್ಟ್​ನಿಂದ 1 ಕಿ.ಮೀ. ದೂರದಲ್ಲಿರುವ ಕೆಂಜಾರು ಮೈದಾನದಲ್ಲಿ ಮರಳು ಚೀಲಗಳ ನಡುವೆ ಬಾಂಬ್​ ಇರಿಸಿ ಸ್ಫೋಟಿಸಿದ್ದಾರೆ. ಬೆಳಗ್ಗೆಯಿಂದ ಇದ್ದ ಆತಂಕ ದೂರವಾಗಿ ಮಂಗಳೂರು ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.

ನಿರ್ಜನ ಪ್ರದೇಶಕ್ಕೆ ರವಾನೆ: ಮರಳು ಚೀಲಗಳ ನಡುವೆ ದೊಡ್ಡ ಮಟ್ಟದ ಶಬ್ಧದೊಂದಿಗೆ ಬಾಂಬ್ ಸ್ಫೋಟಗೊಂಡಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದ​ ಟಿಕೆಟ್ ಕೌಂಟರ್​ ಬಳಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು. ಈ ಬಗ್ಗೆ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬ್ಯಾಗ್ ಪರಿಶೀಲಿಸಿದಾಗ ಬಾಂಬ್​ ಇರುವುದು ಖಚಿತವಾಗಿತ್ತು. ಬಳಿಕ ಬಾಂಬ್​ ಇದ್ದ ಬ್ಯಾಗ್​ ಅನ್ನು ಸುರಕ್ಷತಾ ವಾಹನದಲ್ಲಿ ಇರಿಸಲಾಗಿತ್ತು. ಬಾಂಬ್​ ಪ್ರತಿರೋಧಕ ವಾಹನದಲ್ಲಿ ಬೇರೆಡೆಗೆ ಶಿಫ್ಟ್ ಮಾಡಲಾಯಿತು.

ಕೆಂಜಾರು ಮೈದಾನದಲ್ಲಿ ಸ್ಫೋಟ: ಮಂಗಳೂರು ​ಏರ್​ಪೋರ್ಟ್​ನಿಂದ 1 ಕಿ.ಮೀ. ದೂರದಲ್ಲಿರುವ ಕೆಂಜಾರು ಮೈದಾನಕ್ಕೆ ಬಾಂಬ್​ ಸ್ಥಳಾಂತರ ಮಾಡಲಾಗಿತ್ತು. ಕೊನೆಗೆ ಸಂಜೆ 5.37ಕ್ಕೆ ಬಾಂಬ್​ ಅನ್ನು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಫೋಟಿಸಿದ್ದಾರೆ. ಇದರಿಂದ ಮಂಗಳೂರು ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.

Published On - 6:21 pm, Mon, 20 January 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ