AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಟ್ಟುಸಿರು ಬಿಟ್ಟ ಮಂಗಳೂರು ಜನತೆ: ಕೊನೆಗೂ ಬಾಂಬ್​ ಸ್ಫೋಟಗೊಳಿಸಿದ ಬಾಂಬ್ ನಿಷ್ಕ್ರಿಯ ದಳ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಬಾಂಬ್​ ಅನ್ನು ಕೊನೆಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸ್ಫೋಟಗೊಳಿಸಿದ್ದಾರೆ. ಮಂಗಳೂರು ಏರ್​ಪೋರ್ಟ್​ನಿಂದ 1 ಕಿ.ಮೀ. ದೂರದಲ್ಲಿರುವ ಕೆಂಜಾರು ಮೈದಾನದಲ್ಲಿ ಮರಳು ಚೀಲಗಳ ನಡುವೆ ಬಾಂಬ್​ ಇರಿಸಿ ಸ್ಫೋಟಿಸಿದ್ದಾರೆ. ಬೆಳಗ್ಗೆಯಿಂದ ಇದ್ದ ಆತಂಕ ದೂರವಾಗಿ ಮಂಗಳೂರು ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ನಿರ್ಜನ ಪ್ರದೇಶಕ್ಕೆ ರವಾನೆ: ಮರಳು ಚೀಲಗಳ ನಡುವೆ ದೊಡ್ಡ ಮಟ್ಟದ ಶಬ್ಧದೊಂದಿಗೆ ಬಾಂಬ್ ಸ್ಫೋಟಗೊಂಡಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದ​ ಟಿಕೆಟ್ […]

ನಿಟ್ಟುಸಿರು ಬಿಟ್ಟ ಮಂಗಳೂರು ಜನತೆ: ಕೊನೆಗೂ ಬಾಂಬ್​ ಸ್ಫೋಟಗೊಳಿಸಿದ ಬಾಂಬ್ ನಿಷ್ಕ್ರಿಯ ದಳ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 20, 2020 | 6:35 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಬಾಂಬ್​ ಅನ್ನು ಕೊನೆಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸ್ಫೋಟಗೊಳಿಸಿದ್ದಾರೆ. ಮಂಗಳೂರು ಏರ್​ಪೋರ್ಟ್​ನಿಂದ 1 ಕಿ.ಮೀ. ದೂರದಲ್ಲಿರುವ ಕೆಂಜಾರು ಮೈದಾನದಲ್ಲಿ ಮರಳು ಚೀಲಗಳ ನಡುವೆ ಬಾಂಬ್​ ಇರಿಸಿ ಸ್ಫೋಟಿಸಿದ್ದಾರೆ. ಬೆಳಗ್ಗೆಯಿಂದ ಇದ್ದ ಆತಂಕ ದೂರವಾಗಿ ಮಂಗಳೂರು ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.

ನಿರ್ಜನ ಪ್ರದೇಶಕ್ಕೆ ರವಾನೆ: ಮರಳು ಚೀಲಗಳ ನಡುವೆ ದೊಡ್ಡ ಮಟ್ಟದ ಶಬ್ಧದೊಂದಿಗೆ ಬಾಂಬ್ ಸ್ಫೋಟಗೊಂಡಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದ​ ಟಿಕೆಟ್ ಕೌಂಟರ್​ ಬಳಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು. ಈ ಬಗ್ಗೆ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬ್ಯಾಗ್ ಪರಿಶೀಲಿಸಿದಾಗ ಬಾಂಬ್​ ಇರುವುದು ಖಚಿತವಾಗಿತ್ತು. ಬಳಿಕ ಬಾಂಬ್​ ಇದ್ದ ಬ್ಯಾಗ್​ ಅನ್ನು ಸುರಕ್ಷತಾ ವಾಹನದಲ್ಲಿ ಇರಿಸಲಾಗಿತ್ತು. ಬಾಂಬ್​ ಪ್ರತಿರೋಧಕ ವಾಹನದಲ್ಲಿ ಬೇರೆಡೆಗೆ ಶಿಫ್ಟ್ ಮಾಡಲಾಯಿತು.

ಕೆಂಜಾರು ಮೈದಾನದಲ್ಲಿ ಸ್ಫೋಟ: ಮಂಗಳೂರು ​ಏರ್​ಪೋರ್ಟ್​ನಿಂದ 1 ಕಿ.ಮೀ. ದೂರದಲ್ಲಿರುವ ಕೆಂಜಾರು ಮೈದಾನಕ್ಕೆ ಬಾಂಬ್​ ಸ್ಥಳಾಂತರ ಮಾಡಲಾಗಿತ್ತು. ಕೊನೆಗೆ ಸಂಜೆ 5.37ಕ್ಕೆ ಬಾಂಬ್​ ಅನ್ನು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಫೋಟಿಸಿದ್ದಾರೆ. ಇದರಿಂದ ಮಂಗಳೂರು ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.

Published On - 6:21 pm, Mon, 20 January 20

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ