AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಟ್ಟುಸಿರು ಬಿಟ್ಟ ಮಂಗಳೂರು ಜನತೆ: ಕೊನೆಗೂ ಬಾಂಬ್​ ಸ್ಫೋಟಗೊಳಿಸಿದ ಬಾಂಬ್ ನಿಷ್ಕ್ರಿಯ ದಳ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಬಾಂಬ್​ ಅನ್ನು ಕೊನೆಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸ್ಫೋಟಗೊಳಿಸಿದ್ದಾರೆ. ಮಂಗಳೂರು ಏರ್​ಪೋರ್ಟ್​ನಿಂದ 1 ಕಿ.ಮೀ. ದೂರದಲ್ಲಿರುವ ಕೆಂಜಾರು ಮೈದಾನದಲ್ಲಿ ಮರಳು ಚೀಲಗಳ ನಡುವೆ ಬಾಂಬ್​ ಇರಿಸಿ ಸ್ಫೋಟಿಸಿದ್ದಾರೆ. ಬೆಳಗ್ಗೆಯಿಂದ ಇದ್ದ ಆತಂಕ ದೂರವಾಗಿ ಮಂಗಳೂರು ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ನಿರ್ಜನ ಪ್ರದೇಶಕ್ಕೆ ರವಾನೆ: ಮರಳು ಚೀಲಗಳ ನಡುವೆ ದೊಡ್ಡ ಮಟ್ಟದ ಶಬ್ಧದೊಂದಿಗೆ ಬಾಂಬ್ ಸ್ಫೋಟಗೊಂಡಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದ​ ಟಿಕೆಟ್ […]

ನಿಟ್ಟುಸಿರು ಬಿಟ್ಟ ಮಂಗಳೂರು ಜನತೆ: ಕೊನೆಗೂ ಬಾಂಬ್​ ಸ್ಫೋಟಗೊಳಿಸಿದ ಬಾಂಬ್ ನಿಷ್ಕ್ರಿಯ ದಳ
ಸಾಧು ಶ್ರೀನಾಥ್​
|

Updated on:Jan 20, 2020 | 6:35 PM

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಬಾಂಬ್​ ಅನ್ನು ಕೊನೆಗೂ ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಸ್ಫೋಟಗೊಳಿಸಿದ್ದಾರೆ. ಮಂಗಳೂರು ಏರ್​ಪೋರ್ಟ್​ನಿಂದ 1 ಕಿ.ಮೀ. ದೂರದಲ್ಲಿರುವ ಕೆಂಜಾರು ಮೈದಾನದಲ್ಲಿ ಮರಳು ಚೀಲಗಳ ನಡುವೆ ಬಾಂಬ್​ ಇರಿಸಿ ಸ್ಫೋಟಿಸಿದ್ದಾರೆ. ಬೆಳಗ್ಗೆಯಿಂದ ಇದ್ದ ಆತಂಕ ದೂರವಾಗಿ ಮಂಗಳೂರು ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.

ನಿರ್ಜನ ಪ್ರದೇಶಕ್ಕೆ ರವಾನೆ: ಮರಳು ಚೀಲಗಳ ನಡುವೆ ದೊಡ್ಡ ಮಟ್ಟದ ಶಬ್ಧದೊಂದಿಗೆ ಬಾಂಬ್ ಸ್ಫೋಟಗೊಂಡಿದೆ. ಬೆಳಗ್ಗೆ 10 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದ​ ಟಿಕೆಟ್ ಕೌಂಟರ್​ ಬಳಿ ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿತ್ತು. ಈ ಬಗ್ಗೆ ಭದ್ರತಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬ್ಯಾಗ್ ಪರಿಶೀಲಿಸಿದಾಗ ಬಾಂಬ್​ ಇರುವುದು ಖಚಿತವಾಗಿತ್ತು. ಬಳಿಕ ಬಾಂಬ್​ ಇದ್ದ ಬ್ಯಾಗ್​ ಅನ್ನು ಸುರಕ್ಷತಾ ವಾಹನದಲ್ಲಿ ಇರಿಸಲಾಗಿತ್ತು. ಬಾಂಬ್​ ಪ್ರತಿರೋಧಕ ವಾಹನದಲ್ಲಿ ಬೇರೆಡೆಗೆ ಶಿಫ್ಟ್ ಮಾಡಲಾಯಿತು.

ಕೆಂಜಾರು ಮೈದಾನದಲ್ಲಿ ಸ್ಫೋಟ: ಮಂಗಳೂರು ​ಏರ್​ಪೋರ್ಟ್​ನಿಂದ 1 ಕಿ.ಮೀ. ದೂರದಲ್ಲಿರುವ ಕೆಂಜಾರು ಮೈದಾನಕ್ಕೆ ಬಾಂಬ್​ ಸ್ಥಳಾಂತರ ಮಾಡಲಾಗಿತ್ತು. ಕೊನೆಗೆ ಸಂಜೆ 5.37ಕ್ಕೆ ಬಾಂಬ್​ ಅನ್ನು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಫೋಟಿಸಿದ್ದಾರೆ. ಇದರಿಂದ ಮಂಗಳೂರು ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.

Published On - 6:21 pm, Mon, 20 January 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ