Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಬ್ಬರು ಶಂಕಿತರು ವಶಕ್ಕೆ

ಲ್ಯಾಂಡ್ ಮಾಡಬೇಡಿ, ವಿಮಾನದಲ್ಲಿ ಬಾಂಬ್ ಇದೆ ಎಂಬ ಬೆದರಿಕೆ ಸಂದೇಶವಿರುವ ಟಿಶ್ಯೂಪೇಪರ್ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಪತ್ತೆಯಾಗಿದ್ದು, ಒಂದೆರಡುಗಂಟೆಗಳ ಕಾಲ ಭದ್ರತಾ ಸಿಬ್ಬಂದಿಗಳಿಂದ ಪ್ರಯಾಣಿಕರ ಪರಿಶೀಲನೆ, ಬಾಂಬ್ ಶೋಧಕಾರ್ಯ ನಡೆಯಿತು.

ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಬ್ಬರು ಶಂಕಿತರು ವಶಕ್ಕೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
Follow us
TV9 Web
| Updated By: Rakesh Nayak Manchi

Updated on:Aug 09, 2022 | 12:02 PM

ಬೆಂಗಳೂರು: ‘ಲ್ಯಾಂಡ್ ಮಾಡಬೇಡಿ, ಈ ವಿಮಾನದಲ್ಲಿ ಬಾಂಬ್ ಇದೆ’  ಎಂಬ ಬೆದರಿಕೆಯ ಸಂದೇಶವನ್ನು ಬರೆದ ಟಿಶ್ಯೂ ಪೇಪರ್ ಜೈಪುರ-ಬೆಂಗಳೂರು ಇಂಡಿಗೋ ವಿಮಾನದ ಶೌಚಾಯಲಯದಲ್ಲಿ ಪತ್ತೆಯಾಗಿದೆ. ಮಾಹಿತಿ ಪಡೆದ ಬಾಂಬ್ ಸ್ಕ್ವಾಡ್ ಮತ್ತು ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ಸಿಬ್ಬಂದಿ ಇಂಡಿಗೋ ವಿಮಾನದಲ್ಲಿ ಶೋಧ ನಡೆಸಿದ್ದಲ್ಲದೆ ಪ್ರಯಾಣಿಕರನ್ನು ತಪಾಸಣೆ ನಡೆಸಿದರು. 174 ಪ್ರಯಾಣಿಕರ ಬ್ಯಾಗ್​ಗಳನ್ನು ಪರಿಶೀಲನೆ ನಡೆಸಲಾಗಿದೆ. ಮಾತ್ರವಲ್ಲದೆ ಅಷ್ಟೂ ಪ್ರಯಾಣಿಕರ ಮತ್ತು 12 ಸಿಬ್ಬಂದಿಗಳ ಕೈಬರಹ ಪರೀಕ್ಷೆ ನಡೆಸಲಾಗಿಯಿತು. ಅದರಂತೆ ಇಬ್ಬರು ಪ್ರಯಾಣಿಕರನ್ನು ಶಂಕಿತರು ಎಂದು ಗುರುತಿಸಲಾಯಿತು. ಘಟನೆಯಿಂದಾಗಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ವಿಮಾನದ ಸಿಬ್ಬಂದಿಯೊಬ್ಬರು ಹಿಂಭಾಗದ ಶೌಚಾಲಯದ ನೆಲದ ಮೇಲೆ ಹರಿದ ಟಿಶ್ಯೂ ಪೇಪರ್ ಅನ್ನು ನೋಡಿದರು. ಅದರಲ್ಲಿ ಬೆದರಿಕೆ ಸಂದೇಶವಿರುವುದನ್ನು ನೋಡಿದ ಸಿಬ್ಬಂದಿ ಕ್ಯಾಪ್ಟನ್‌ಗೆ ಮಾಹಿತಿ ನೀಡಿದರು. ಕೂಡಲೇ ಎಚ್ಚೆತ್ತ ಕ್ಯಾಪ್ಟನ್, ಏರ್ ಟ್ರಾಫಿಕ್ ಕಂಟ್ರೋಲ್‌ಗೆ ಎಚ್ಚರಿಕೆ ನೀಡಿದರು. ಅದರಂತೆ ಸಿಐಎಸ್ಎಫ್ ತಂಡ ಕೆಲವೇ ನಿಮಿಷಗಳಲ್ಲಿ ಪರಿಶೀಲನೆಗೆ ಸಜ್ಜಾಯಿತು.

ಪ್ರಯಾಣಿಕರು ಭೀತಿಗೆ ಒಳಗಾಗಬಾರದು ಎಂದು ಯಾವುದೇ ಮಾಹಿತಿಯನ್ನು ನೀಡದೆ ವಿಮಾನವನ್ನು ಕಾರ್ಗೋ ಟರ್ಮಿನಲ್ ಬಳಿಯ ಪ್ರತ್ಯೇಕ ಕೊಲ್ಲಿಗೆ ಕೊಂಡೊಯ್ಯಲಾಯಿತು. ನಂತರ ಪ್ರಯಾಣಿಕರನ್ನು ಟರ್ಮಿನಲ್​ಗೆ ಕರೆದೊಯ್ಯಲಾಯಿತು. ನಂತರ ಪ್ರಯಾಣಿಕರ ಬ್ಯಾಗ್‌ಗಳನ್ನು ವಿಮಾನದಿಂದ ಹೊರತೆಗೆದು ಲೋಹದ ಶೋಧಕಗಳೊಂದಿಗೆ ಪರಿಶೀಲಿಸಲಾಯಿತು. ಸುಮಾರು 1 ಗಂಟೆಗಳ ಕಾಲ ನಡೆದ ಶೋಧಕಾರ್ಯ ನಂತರ ಇದು ಸುಳ್ಳು ಬೆದರಿಕೆ ಎಂದು ಘೋಷಿಸಲಾಯಿತು.

ಶಂಕಿತರನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಸಿಐಎಸ್ಎಫ್ ತಂಡವು ಪ್ರಯಾಣಿಕರ ಕೈಬರಹವನ್ನು ಪರೀಕ್ಷೆ ನಡೆಸಿದ್ದು, ಹಿಂದಿಯಲ್ಲಿ ಬರೆಯಲು ಬರದವರನ್ನು ಪರೀಕ್ಷೆಯಿಂದ ಹೊರಗಿಡಲಾಯಿತು. ನಂತರ ಇಪ್ಪತ್ತು ಜನರನ್ನು ಶಾರ್ಟ್‌ಲಿಸ್ಟ್ ಮಾಡಿ ಪರೀಕ್ಷೆ ನಡೆಸಲಾಗಿದ್ದು, ಅಂತಿಮವಾಗಿ ಇಬ್ಬರು ಶಂಕಿತರನ್ನು ಪತ್ತೆಹಚ್ಚಿ ಬರವಣಿಗೆ ಬಗ್ಗೆ ಪ್ರಶ್ನಿಸಲಾಯಿತು. ಎರಡು ಗಂಟೆಗಳ ವಿಳಂಬದ ನಂತರ ಎಲ್ಲಾ ಪ್ರಯಾಣಿಕರನ್ನು ಮನೆಗೆ ಹೋಗಲು ಅನುಮತಿಸಲಾಯಿತು. ಇಬ್ಬರು ಶಂಕಿತರ ತನಿಖೆ ಮುಂದುವರಿದಿದೆ.

ಜೈಪುರದಿಂದ ಇಂಡಿಗೋ ವಿಮಾನ 6E-556 ಭಾನುವಾರ ರಾತ್ರಿ 9.26 ಕ್ಕೆ KIA ಗೆ ಆಗಮಿಸಿದ ವಿಮಾನದಲ್ಲಿ ಈ ಬೆದರಿಕೆ ಸಂದೇಶ ಪತ್ತೆಯಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. “ನೀಲಿ ಶಾಯಿಯಲ್ಲಿ ‘ವಿಮಾನವನ್ನು ಲ್ಯಾಂಡ್ ಮಾಡಬೇಡಿ, ಈ ವಿಮಾನದಲ್ಲಿ ಬಾಂಬ್ ಇದೆ’ ಎಂದು ಬರೆದಿರುವ ಟಿಶ್ಯೂ ಪೇಪರ್ ಪತ್ತೆಯಾಗಿರುವುದಾಗಿ ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತ ಅನೂಪ್ ಎ ಶೆಟ್ಟಿ ಹೇಳಿದ್ದಾರೆ. ಬೆದರಿಕೆ ಸಂಬಂಧ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ತಿಳಿಸಿದ್ದಾರೆ.

ಮತ್ತಷ್ಟು ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:02 pm, Tue, 9 August 22

ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...