AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಬ್ಬರು ಶಂಕಿತರು ವಶಕ್ಕೆ

ಲ್ಯಾಂಡ್ ಮಾಡಬೇಡಿ, ವಿಮಾನದಲ್ಲಿ ಬಾಂಬ್ ಇದೆ ಎಂಬ ಬೆದರಿಕೆ ಸಂದೇಶವಿರುವ ಟಿಶ್ಯೂಪೇಪರ್ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಪತ್ತೆಯಾಗಿದ್ದು, ಒಂದೆರಡುಗಂಟೆಗಳ ಕಾಲ ಭದ್ರತಾ ಸಿಬ್ಬಂದಿಗಳಿಂದ ಪ್ರಯಾಣಿಕರ ಪರಿಶೀಲನೆ, ಬಾಂಬ್ ಶೋಧಕಾರ್ಯ ನಡೆಯಿತು.

ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಬ್ಬರು ಶಂಕಿತರು ವಶಕ್ಕೆ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
TV9 Web
| Edited By: Rakesh Nayak Manchi|

Updated on:Aug 09, 2022 | 12:02 PM

Share

ಬೆಂಗಳೂರು: ‘ಲ್ಯಾಂಡ್ ಮಾಡಬೇಡಿ, ಈ ವಿಮಾನದಲ್ಲಿ ಬಾಂಬ್ ಇದೆ’  ಎಂಬ ಬೆದರಿಕೆಯ ಸಂದೇಶವನ್ನು ಬರೆದ ಟಿಶ್ಯೂ ಪೇಪರ್ ಜೈಪುರ-ಬೆಂಗಳೂರು ಇಂಡಿಗೋ ವಿಮಾನದ ಶೌಚಾಯಲಯದಲ್ಲಿ ಪತ್ತೆಯಾಗಿದೆ. ಮಾಹಿತಿ ಪಡೆದ ಬಾಂಬ್ ಸ್ಕ್ವಾಡ್ ಮತ್ತು ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ಸಿಬ್ಬಂದಿ ಇಂಡಿಗೋ ವಿಮಾನದಲ್ಲಿ ಶೋಧ ನಡೆಸಿದ್ದಲ್ಲದೆ ಪ್ರಯಾಣಿಕರನ್ನು ತಪಾಸಣೆ ನಡೆಸಿದರು. 174 ಪ್ರಯಾಣಿಕರ ಬ್ಯಾಗ್​ಗಳನ್ನು ಪರಿಶೀಲನೆ ನಡೆಸಲಾಗಿದೆ. ಮಾತ್ರವಲ್ಲದೆ ಅಷ್ಟೂ ಪ್ರಯಾಣಿಕರ ಮತ್ತು 12 ಸಿಬ್ಬಂದಿಗಳ ಕೈಬರಹ ಪರೀಕ್ಷೆ ನಡೆಸಲಾಗಿಯಿತು. ಅದರಂತೆ ಇಬ್ಬರು ಪ್ರಯಾಣಿಕರನ್ನು ಶಂಕಿತರು ಎಂದು ಗುರುತಿಸಲಾಯಿತು. ಘಟನೆಯಿಂದಾಗಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ವಿಮಾನದ ಸಿಬ್ಬಂದಿಯೊಬ್ಬರು ಹಿಂಭಾಗದ ಶೌಚಾಲಯದ ನೆಲದ ಮೇಲೆ ಹರಿದ ಟಿಶ್ಯೂ ಪೇಪರ್ ಅನ್ನು ನೋಡಿದರು. ಅದರಲ್ಲಿ ಬೆದರಿಕೆ ಸಂದೇಶವಿರುವುದನ್ನು ನೋಡಿದ ಸಿಬ್ಬಂದಿ ಕ್ಯಾಪ್ಟನ್‌ಗೆ ಮಾಹಿತಿ ನೀಡಿದರು. ಕೂಡಲೇ ಎಚ್ಚೆತ್ತ ಕ್ಯಾಪ್ಟನ್, ಏರ್ ಟ್ರಾಫಿಕ್ ಕಂಟ್ರೋಲ್‌ಗೆ ಎಚ್ಚರಿಕೆ ನೀಡಿದರು. ಅದರಂತೆ ಸಿಐಎಸ್ಎಫ್ ತಂಡ ಕೆಲವೇ ನಿಮಿಷಗಳಲ್ಲಿ ಪರಿಶೀಲನೆಗೆ ಸಜ್ಜಾಯಿತು.

ಪ್ರಯಾಣಿಕರು ಭೀತಿಗೆ ಒಳಗಾಗಬಾರದು ಎಂದು ಯಾವುದೇ ಮಾಹಿತಿಯನ್ನು ನೀಡದೆ ವಿಮಾನವನ್ನು ಕಾರ್ಗೋ ಟರ್ಮಿನಲ್ ಬಳಿಯ ಪ್ರತ್ಯೇಕ ಕೊಲ್ಲಿಗೆ ಕೊಂಡೊಯ್ಯಲಾಯಿತು. ನಂತರ ಪ್ರಯಾಣಿಕರನ್ನು ಟರ್ಮಿನಲ್​ಗೆ ಕರೆದೊಯ್ಯಲಾಯಿತು. ನಂತರ ಪ್ರಯಾಣಿಕರ ಬ್ಯಾಗ್‌ಗಳನ್ನು ವಿಮಾನದಿಂದ ಹೊರತೆಗೆದು ಲೋಹದ ಶೋಧಕಗಳೊಂದಿಗೆ ಪರಿಶೀಲಿಸಲಾಯಿತು. ಸುಮಾರು 1 ಗಂಟೆಗಳ ಕಾಲ ನಡೆದ ಶೋಧಕಾರ್ಯ ನಂತರ ಇದು ಸುಳ್ಳು ಬೆದರಿಕೆ ಎಂದು ಘೋಷಿಸಲಾಯಿತು.

ಶಂಕಿತರನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಸಿಐಎಸ್ಎಫ್ ತಂಡವು ಪ್ರಯಾಣಿಕರ ಕೈಬರಹವನ್ನು ಪರೀಕ್ಷೆ ನಡೆಸಿದ್ದು, ಹಿಂದಿಯಲ್ಲಿ ಬರೆಯಲು ಬರದವರನ್ನು ಪರೀಕ್ಷೆಯಿಂದ ಹೊರಗಿಡಲಾಯಿತು. ನಂತರ ಇಪ್ಪತ್ತು ಜನರನ್ನು ಶಾರ್ಟ್‌ಲಿಸ್ಟ್ ಮಾಡಿ ಪರೀಕ್ಷೆ ನಡೆಸಲಾಗಿದ್ದು, ಅಂತಿಮವಾಗಿ ಇಬ್ಬರು ಶಂಕಿತರನ್ನು ಪತ್ತೆಹಚ್ಚಿ ಬರವಣಿಗೆ ಬಗ್ಗೆ ಪ್ರಶ್ನಿಸಲಾಯಿತು. ಎರಡು ಗಂಟೆಗಳ ವಿಳಂಬದ ನಂತರ ಎಲ್ಲಾ ಪ್ರಯಾಣಿಕರನ್ನು ಮನೆಗೆ ಹೋಗಲು ಅನುಮತಿಸಲಾಯಿತು. ಇಬ್ಬರು ಶಂಕಿತರ ತನಿಖೆ ಮುಂದುವರಿದಿದೆ.

ಜೈಪುರದಿಂದ ಇಂಡಿಗೋ ವಿಮಾನ 6E-556 ಭಾನುವಾರ ರಾತ್ರಿ 9.26 ಕ್ಕೆ KIA ಗೆ ಆಗಮಿಸಿದ ವಿಮಾನದಲ್ಲಿ ಈ ಬೆದರಿಕೆ ಸಂದೇಶ ಪತ್ತೆಯಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. “ನೀಲಿ ಶಾಯಿಯಲ್ಲಿ ‘ವಿಮಾನವನ್ನು ಲ್ಯಾಂಡ್ ಮಾಡಬೇಡಿ, ಈ ವಿಮಾನದಲ್ಲಿ ಬಾಂಬ್ ಇದೆ’ ಎಂದು ಬರೆದಿರುವ ಟಿಶ್ಯೂ ಪೇಪರ್ ಪತ್ತೆಯಾಗಿರುವುದಾಗಿ ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತ ಅನೂಪ್ ಎ ಶೆಟ್ಟಿ ಹೇಳಿದ್ದಾರೆ. ಬೆದರಿಕೆ ಸಂಬಂಧ ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ತಿಳಿಸಿದ್ದಾರೆ.

ಮತ್ತಷ್ಟು ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:02 pm, Tue, 9 August 22

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ