ಕರ್ನಾಟಕದ ಹಲವು ಜಿಲ್ಲಾ ಕೋರ್ಟ್​ಗಳಿಗೆ ಬಾಂಬ್ ಬೆದರಿಕೆ ಕರೆ

ಬಾಗಲಕೋಟೆ, ದಾವಣಗೆರೆ, ಧಾರವಾಡ ಮತ್ತು ಕೋಲಾರ ಜಿಲ್ಲಾ ನ್ಯಾಯಾಲಯಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ತಪಾಸಣೆ ಮಾಡಲಾಗಿದೆ. ಸದ್ಯ ಇದು ಹುಸಿ ಬಾಂಬ್ ಬೆದರಿಕೆ ಎಂದು ಶಂಕಿಸಲಾಗಿದೆ.

ಕರ್ನಾಟಕದ ಹಲವು ಜಿಲ್ಲಾ ಕೋರ್ಟ್​ಗಳಿಗೆ ಬಾಂಬ್ ಬೆದರಿಕೆ ಕರೆ
ಬಾಂಬ್ ಬೆದರಿಕೆ
Image Credit source: tv9 kannada
Edited By:

Updated on: Jun 19, 2026 | 3:23 PM

ಬೆಂಗಳೂರು, ಜೂನ್​​ 19: ರಾಜ್ಯದಲ್ಲಿ ಮತ್ತೆ ಹುಸಿ ಬಾಂಬ್​​ ಬೆದರಿಕೆ (bomb threat) ಕರೆಗಳ ಹಾವಳಿ ಜೋರಾಗಿದೆ. ಇಂದು ಒಂದೇ ದಿನ ಬಾಗಲಕೋಟೆ, ದಾವಣಗೆರೆ, ಧಾರವಾಡ, ಕೋಲಾರ ಜಿಲ್ಲಾ ನ್ಯಾಯಾಲಯಗಳಿಗೆ ಅನುಮಾನಾಸ್ಪದ ಐಡಿಯಿಂದ ಬಾಂಬ್ ಬೆದರಿಕೆಯ ಇ-ಮೇಲ್​​​​ಗಳು ಬಂದಿವೆ. ಬಾಂಬ್​​ ಬೆದರಿಕೆ ಹಿನ್ನೆಲೆ ನ್ಯಾಯಾಲಯದ (court) ಆವರಣದಲ್ಲಿ ತೀವ್ರ ಆತಂಕ ಸೃಷ್ಟಿಯಾಗಿತ್ತು. ಪೊಲೀಸರು ತಪಾಸಣೆ ಮಾಡಿದ್ದಾರೆ.

ಮುಖ್ಯಾಂಶಗಳು

  • ಕರ್ನಾಟಕ ಜಿಲ್ಲಾ ನ್ಯಾಯಾಲಯಗಳಿಗೆ ಇ-ಮೇಲ್ ಬಾಂಬ್ ಬೆದರಿಕೆ
  • ಬಾಂಬ್ ನಿಷ್ಕ್ರಿಯ ದಳ ಮತ್ತು ಪೊಲೀಸರಿಂದ ತೀವ್ರ ತಪಾಸಣೆ
  • ಬಾಗಲಕೋಟೆ, ದಾವಣಗೆರೆ ಸೇರಿ ಹಲವೆಡೆ ನ್ಯಾಯಾಲಯಗಳಲ್ಲಿ ಆತಂಕ

ಸೈನೈಡ್ ವಾಯು ಗುಂಡಿಗಳು ಸ್ಫೋಟಿಸುವುದಾಗಿ ಬೆದರಿಕೆ

ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೆ karunanidhi.kundi@underworld.dog ಎಂಬ ಐಡಿಯಿಂದ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಇಂದು ಮಧ್ಯಾಹ್ನ 2 ಗಂಟೆಗೆ 23 ಸೈನೈಡ್ ವಾಯು ಗುಂಡಿಗಳು ಸ್ಫೋಟವಾಗಲಿವೆ ಎಂದು ಮೇಲ್​​ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು ಏರ್​ಪೋರ್ಟ್​ನಲ್ಲಿ ಬಾಂಬ್ ಬೆದರಿಕೆ ಹಾಕಿದ ಯುವಕನ ಬಂಧನ

ಮೊದಲು ಚಿತ್ರದುರ್ಗ ಜಿಲ್ಲಾ ನ್ಯಾಯಾಧೀಶರಿಗೆ ಮೇಲ್ ಬಂದಿದ್ದು, ಅಲ್ಲಿಂದ ಬಾಗಲಕೋಟೆಗೆ ರವಾನಿಸಲಾಗಿದೆ. ನ್ಯಾಯಾಂಗ ವಲಯದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿತ್ತು. ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದಿಂದ ಜಡ್ಜ್ ಹಾಲ್, ವಿವಿಧ ಕೊಠಡಿ ಸೇರಿ ಇಡೀ ಕೋರ್ಟ್ ತಪಾಸಣೆ ಮಾಡಿದ್ದಾರೆ.

ವಯನಾಡಿನಿಂದ ಬಾಂಬ್ ಬೆದರಿಕೆ ಕರೆ

ದಾವಣಗೆರೆ ನಗರದ ಪಿಬಿ ರಸ್ತೆ ಬಳಿ ಇರುವ ಜಿಲ್ಲಾ ಕೋರ್ಟ್ ಹುಸಿ ಬಾಂಬ್ ಬೆದರಿಕೆ ಕರೆ ಬಂದಿದೆ. ಕೆರಳದ ವಯನಾಡಿನಿಂದ ಜಿಲ್ಲಾ ನ್ಯಾಯಾಲಯದ ಅಧಿಕೃತ ಇ-ಮೇಲ್​ ಐಡಿಗೆ ಸಂದೇಶ‌ ಬಂದಿದೆ. ಬೆದರಿಕೆ ಕರೆ ಬೆನ್ನಲ್ಲೇ ಅಲರ್ಟ್​ ಆದ ಪೊಲೀಸರು, ಶ್ವಾನದಳದಿಂದ ತಪಾಸಣೆ ಮಾಡಿದ್ದಾರೆ.

ಇದನ್ನೂ ಓದಿ: Bomb Threat: ಚಾಮರಾಜನಗರ ಡಿಸಿ ಕಚೇರಿಗೆ ಬಾಂಬ್ ಬೆದರಿಕೆ: ನೌಕರರಿಗೆ ರಜೆ ಘೋಷಣೆ

ಕೋಲಾರ ಜಿಲ್ಲಾ ನ್ಯಾಯಾಲಯಕ್ಕೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಕೂಡಲೇ ಕೋರ್ಟ್ ಕಾರ್ಯಕಲಾಪಗಳನ್ನು ಸ್ಥಗಿತಗೊಳಿಸಿ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಸೇರಿದಂತೆ ಕೋಲಾರ ಗಲ್ ಪೇಟೆ ಪೊಲೀಸರು ಪರಿಶೀಲನೆ ಮಾಡಿದರು.

ಕೋರ್ಟ್ ಸುತ್ತಮುತ್ತ ಆತಂಕ

ಇನ್ನು ಕೋರ್ಟ್ ಹಾಗೂ ಕಾಂಪ್ಲೆಕ್ಸ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಉಪನಗರ ಠಾಣಾ ವ್ಯಾಪ್ತಿಯ ಧಾರವಾಡ ಜಿಲ್ಲಾ ಕೋರ್ಟ್‌ಗೂ ಬಾಂಬ್ ಬೆದರಿಕೆ ಕರೆ ಬಂದಿದೆ. ಅಪರಿಚಿತನ ಬಾಂಬ್​ ಕರೆ ಕೋರ್ಟ್ ಸುತ್ತಮುತ್ತ ಆತಂಕ ಸೃಷ್ಟಿಸಿತ್ತು. ಕೂಡಲೇ ವಕೀಲರು ಮತ್ತು ಕಕ್ಷಿದಾರರು ನ್ಯಾಯಾಲಯ ಆವರಣದಿಂದ ಹೊರಬಂದಿದ್ದಾರೆ. ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ಆಗಮಿಸಿ ಕೋರ್ಟ್‌ನ ಒಳಗಡೆ ತಪಾಸಣೆ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us