AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Borewell Fee: ಕೊಳವೆ ಬಾವಿ ನೀರು ಬಳಕೆಗೂ ಶುಲ್ಕ, ಬರಲಿದೆ ಡಿಜಿಟಲ್ ಟೆಲಿಮೆಟ್ರಿ!

Borewell Usage Fee in Karnataka: ಕರ್ನಾಟಕದ ಬಹುತೇಕ ಜಿಲ್ಲೆಗಳು ಸೇರಿದಂತೆ ಬೆಂಗಳೂರಿನಲ್ಲಿಯೂ ಬೋರ್​​ವೆಲ್ ನೀರಿನ ಬಳಕೆ ಅತಿಯಾಗಿದೆ. ಮತ್ತೊಂದೆಡೆ, ದಿನದಿಂದ ದಿನಕ್ಕೆ ಅಂತರ್ಜಲ ಮಟ್ಟ ಕೂಡ ಇಳಿಕೆ ಆಗುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ಹೀಗಾಗಿ ಕೊಳವೆ ಬಾವಿ ನೀರಿನ ಬಳಕೆಗೆ ನಿಯಂತ್ರಣ ತರಲು ಸರ್ಕಾರ ಹೊಸ ನಿಯಮ ಜಾರಿಗೆ ತರಲು ಮುಂದಾಗಿದೆ. ಡಿಜಿಟಲ್ ಟೆಲಿಮೆಟ್ರಿ ಅಳವಡಿಸಿ ಕೊಳವೆ ಬಾವಿ ಬಳಕೆಗೆ ಶುಲ್ಕ ವಿಧಿಸಲು ಮುಂದಾಗಿದೆ.

Borewell Fee: ಕೊಳವೆ ಬಾವಿ ನೀರು ಬಳಕೆಗೂ ಶುಲ್ಕ, ಬರಲಿದೆ ಡಿಜಿಟಲ್ ಟೆಲಿಮೆಟ್ರಿ!
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Jul 23, 2025 | 8:07 AM

Share

ಬೆಂಗಳೂರು, ಜುಲೈ 23: ನೀರು ಅತ್ಯಮೂಲ್ಯ ಎಂಬುದು ಸಾರ್ವಕಾಲಿಕ ಸತ್ಯವಾದರೂ ನೀರನ್ನು ಸದ್ಬಳಕೆ, ಪುನರ್ಬಳಕೆ ಮಾಡುವ ನಿಟ್ಟಿನಲ್ಲಿ ಪರಿಣಾಮಕಾರಿ ಕೆಲಸಗಳು ಆಗುತ್ತಿಲ್ಲ. ಹೀಗಾಗಿ, ಅಂತರ್ಜಲವನ್ನು (Ground Water) ಅತಿಯಾಗಿ ನಂಬಿಕೊಳ್ಳುವ ಆತಂಕಕಾರಿ ಪ್ರಮೇಯ ಬಂದೊದಗಿದೆ. ಮತ್ತೊಂದೆಡೆ, ದಿನದಿಂದ ದಿನಕ್ಕೆ ಅಂತರ್ಜಲ ಮಟ್ಟ ಕೂಡ ಇಳಿಕೆ ಆಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಷ್ಟೇ ಅಲ್ಲದೆ, ಸರ್ಕಾರಕ್ಕೂ ಕೊಳವೆ ಬಾವಿಗಳ (Borewell) ಮೇಲೆ ನಿಯಂತ್ರಣ ಸಾಧಿಸಲು ಸಾಧ್ಯವಾಗಿಲ್ಲ. ಹೀಗಾಗಿ ಬೋರ್​​ವೆಲ್​ ನೀರು ದುರ್ಬಳಕೆ ಆಗುತ್ತಿದೆ. ಇದಕ್ಕೆ ಇತಿಶ್ರೀ ಹಾಡಲು ನಿರ್ಧರಿಸಿರುವ ಸರ್ಕಾರ, ನಗರ ಪ್ರದೇಶಗಳಲ್ಲಿ ಕೊಳವೆ ಬಾವಿಯಿಂದ ತೆಗೆಯುವ ನೀರಿನ ಬಳಕೆ ಪ್ರಮಾಣವನ್ನು ಅಳೆಯಲು ಡಿಜಿಟಲ್ ಟೆಲಿಮೆಟ್ರಿ (Digital Telemetry) ಅಳವಡಿಸಿ ದರ ನಿಗದಿ ಮಾಡಲು ಮುಂದಾಗಿದೆ. ಇನ್ನು ಸರ್ಕಾರದ ಈ ಕ್ರಮಕ್ಕೆ ತಜ್ಞರು ಸಹಮತ ವ್ಯಕ್ತಪಡಿಸಿದ್ದಾರೆ.

ಆದರೆ, ಕೊಳವೆ ಬಾವಿ ನೀರಿನ ಬಳಕೆಗೆ ವಿಧಿಸಲಾಗುವ ಶುಲ್ಕದಿಂದ ಕೆಲವರಿಗೆ ವಿನಾಯಿತಿಯೂ ಸಿಗಲಿದೆ.

ಕೊಳವೆ ಬಾವಿ ಬಳಕೆ ಶುಲ್ಕದಿಂದ ಯಾರಿಗೆಲ್ಲ ವಿಯಾಯಿತಿ?

  • ವೈಯಕ್ತಿಕ ಗೃಹೋಪಯೋಗಿ ಬಳಕೆಗೆ
  • ಸೇನೆ ಹಾಗೂ ಸಶಸ್ತ್ರ ಪಡೆಗಳು ಹಾಗೂ ಸಂಸ್ಥೆಗಳು
  • ಕೃಷಿ ಚಟುವಟಿಕೆಗಳು
  • ದಿನಕ್ಕೆ 10 ಕ್ಯೂಬಿಕ್ ಗಿಂತ ಕಡಿಮೆ ಬಳಕೆ ಮಾಡುವಸಣ್ಣ ಮತ್ತು ಅತಿ ಸಣ್ಣ ಉದ್ಯಮಗಳಿಗೆ
  • 20 KLD ವರೆಗೆ ಕುಡಿಯುವ ಹಾಗೂ ಗೃಹೋಪಯೋಗಿ ಬಳಕೆಗೆ, ಇತ್ಯಾದಿ

ಈ ಮೇಲಿನ ಚಟುವಟಿಕೆಗಳಿಗೆ ಕೊಳವೆ ಬಾವಿ ಬಳಕೆ ಶುಲ್ಕದಿಂದ ವಿನಾಯಿತಿ ದೊರೆಯಬಹುದು ಎಂದು ನಿರೀಕ್ಷಿಸಲಾಗಿದೆ.

ಇದನ್ನೂ ಓದಿ
Image
ಇಂದಿನಿಂದ ಹಾಲು, ಹಾಲಿನ ಉತ್ಪನ್ನ ಮಾರಾಟ ಬಂದ್, 25 ರಂದು ವರ್ತಕರ ಮುಷ್ಕರ
Image
ಬಿಕ್ಲು ಶಿವ ಕೊಲೆ ಕೇಸ್: ಹತ್ಯೆಗೆ ಪ್ರಮುಖ ಕಾರಣ ಪತ್ತೆ ಮಾಡಿದ ಪೊಲೀಸರು!
Image
ವಿದ್ಯುತ್ ಬಿಲ್ ಪಾವತಿ ಸೇರಿ 5 ಎಸ್ಕಾಂ ಆನ್‌ಲೈನ್ ಸೇವೆ 2 ದಿನ ಸ್ಥಗಿತ
Image
ಅರಣ್ಯಗಳಲ್ಲಿ ಮೇಕೆ-ಕುರಿ, ದನಕರುಗಳನ್ನ ಮೇಯಿಸುವುದು ನಿಷೇಧ!

ಸರ್ಕಾರದ ಈ ಕ್ರಮಕ್ಕೆ ಸಾರ್ವಜನಿಕರಿಂದಲೂ ಸಹಮತ ವ್ಯಕ್ತವಾಗಿದೆ. ಅಂತರ್ಜಲ ದುರ್ಬಳಕೆ ಹೆಚ್ಚಾಗುತ್ತಿದ್ದು, ಅಗತ್ಯ ರೀತಿಯಲ್ಲಿ ಸದ್ಬಳಕೆ ಮಾಡುವ ಹಾಗೂ ಬೋರ್​ವೆಲ್​​​ಗಳ ಸ್ಥಿತಿಗತಿಯನ್ನು ಮೇಲ್ವಿಚಾರಣೆ ಮಾಡಲು ಈ ಯೋಜನೆ ಒಳ್ಳೆಯದು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ವಿದ್ಯುತ್ ಬಿಲ್ ಪಾವತಿ ಸೇರಿ 5 ಎಸ್ಕಾಂ ಆನ್‌ಲೈನ್ ಸೇವೆ 2 ದಿನ ಸ್ಥಗಿತ

ಸದ್ಯ ಈ ವಿಚಾರವಾಗಿ ಕೇಂದ್ರ ಸರ್ಕಾರ ಹೊರಡಿಸಿದ್ದ ಮಾರ್ಗಸೂಚಿಯನ್ನು ಒಪ್ಪಿಕೊಂಡಿರುವ ರಾಜ್ಯ ಸರ್ಕಾರ, ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಕೂಡ ನೀಡಿದೆ. ಒಟ್ಟಿನಲ್ಲಿ ಈ ಯೋಜನೆ ಜಾರಿಯಾಗಿ, ಅಂತರ್ಜಲ ದುರ್ಬಳಕೆ ಮಾಡಿಕೊಂಡು ವಾಟರ್ ಮಾಫಿಯಾ ಮಾಡುತ್ತಿರುವವರಿಗೆ ಬಿಸಿ ಮುಟ್ಟಿದರೆ ಸಾಕು ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.

ವರದಿ: ಲಕ್ಷ್ಮಿ ನರಸಿಂಹ, ಟಿವಿ9, ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:21 am, Wed, 23 July 25

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು